ಸುದ್ದಿಗಳು

32 ಲಕ್ಷ ರೂಪಾಯಿ ಅನುದಾನ ಲ್ಯಾಪ್ಸ್ – ಕೆಡಿಪಿ ಸಭೆಯಲ್ಲಿ ಚರ್ಚೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: 2018-19ನೇ ಸಾಲಿನಲ್ಲಿ ತಾಲೂಕು ಪಂಚಾಯತ್ ಗೆ ಮಂಜೂರಾಗಿದ್ದ ಅನುದಾನದಲ್ಲಿ  32 ಲಕ್ಷ ರೂಪಾಯಿ ಲ್ಯಾಪ್ಸ್ ಆಗಿತ್ತು. ಈ ಬಗ್ಗೆ ಕೆಡಿಪಿ ಸಭೆಯಲ್ಲಿ  ಚರ್ಚೆ ನಡೆಯಿತು.

Advertisement

ತ್ರೈಮಾಸಿಕ ಕೆಡಿಪಿ ಸಭೆ ಶಾಸಕ  ಅಂಗಾರ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ಗುರುವಾರ ನಡೆಯಿತು.  46 ಕಾಮಗಾರಿಗಳ 32 ಲಕ್ಷ ರೂ ಲ್ಯಾಪ್ಸ್ ಆಗಿರುವ ಬಗ್ಗೆ ವಿಭಾಗದ ಇಂಜಿನಿಯರ್ ಮಾಹಿತಿ ನೀಡಿದರು.  ಕಾಮಗಾರಿ ಪೂರ್ತಿಯಾಗಿದೆ ಆದರೆ ಬಿಲ್ ಪಾವತಿಸುವ ಮುನ್ನ ಅನುದಾನ ಹಿಂದಕ್ಕೆ ಹೋಗಿದೆ. ಸಾಮಾನ್ಯವಾಗಿ ಬಿಲ್ ನೀಡದಿದ್ದರೆ ಮಾರ್ಚ್ 31ರ ಬಳಿಕ ಅನುದಾನ ವಾಪಾಸ್ ಹೋಗುತ್ತದೆ. ಆದರೆ ಈ ಬಾರಿ ಮಾ.31 ಮೊದಲೇ ಹಣ ವಾಪಾಸ್ ಹೋದ ಕಾರಣ ಬಿಲ್‍ಗಳು ಬಾಕಿ ಆಗಿದೆ ಎಂದು ಇಂಜಿನಿಯರ್ ಗಳು ಹೇಳಿದರು. ಈ ಕುರಿತು ಚರ್ಚೆ ನಡೆದು ಯಾವ ಕಾಮಗಾರಿಗಳು ಮುಗಿದಿದೆ, ಯಾವುದು ಬಾಕಿ ಇದೆ ಮತ್ತು ಬಿಲ್ ಪಾವತಿಗೆ ಬಾಕಿ ಇದೆ ಎಂಬುದರ ಬಗ್ಗೆ ವರದಿ ನೀಡುವಂತೆ ಶಾಸಕರು ಸೂಚಿಸಿದರು.

ರಸ್ತೆ ಪೊರಂಬೋಕು ಮತ್ತು ನದಿ ಪೊರಂಬೋಕುಗಳಲ್ಲಿ ನಿರ್ಮಾಣವಾಗಿರುವ ಅನಧಿಕೃತ ಕಟ್ಟಡಗಳನ್ನು ತೆರವು ಮಾಡಲು ಕ್ರಮಕ್ಕೆ ಶಾಸಕ ಅಂಗಾರ ಸೂಚನೆ ನೀಡಿದರು.

ಈ ಕುರಿತು ವಿವಿಧ ಇಲಾಖೆಗಳ ಜಂಟಿ ಸರ್ವೆ ನಡೆಸಿ ಅನಧಿಕೃತ ಕಟ್ಟಡಗಳ ತೆರವಿಗೆ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ತಿಳಿಸಿದರು. ಬೇಂಗಮಲೆ, ಆಲೆಟ್ಟಿ, ಆನೆಗುಂಡಿ, ಅರಂತೋಡು ಮತ್ತಿತರ ಕಡೆಗಳಲ್ಲಿ ಕೋಳಿ ತ್ಯಾಜ್ಯಗಳನ್ನು ಎಸೆಯುವವರ ವಿರುದ್ಧ ಕ್ರಮ ಜರುಗಿಸುವಂತೆ ಪೊಲೀಸ್ ಮತ್ತು ಕಂದಾಯ ಇಲಾಖೆಗಳಿಗೆ ಶಾಸಕರು ಸೂಚಿಸಿದರು. ಕೋಳಿ ಅಂಗಡಿ ಮಾಲಕರ ಸಭೆ ಕರೆದು ಕೋಳಿ ತ್ಯಾಜ್ಯ ಎಸೆಯದಂತೆ ಎಚ್ಚರ ನೀಡುವುದಾಗಿ ತಹಶೀಲ್ದಾರ್ ತಿಳಿಸಿದರು. ರಸ್ತೆ ಬದಿಯ ನೀರು ಹೋಗಿ ಕೊಚ್ಚಿ ಹೋಗುವ ಅಥವಾ ಕುಸಿಯುವ ಸ್ಥಳಗಳಿದ್ದಲ್ಲಿ ಅವುಗಳನ್ನು ಗುರುತಿಸಿ ನೀರು ಹೋಗಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಚರಂಡಿಗಳ ದುರಸ್ಥಿ ನಡೆಯಬೇಕು. ವಿದ್ಯುತ್ ಲೈನ್‍ಗಳ ದುರಸ್ಥಿ, ಲೈನ್‍ಗೆ ತಾಗುವ ಗೆಲ್ಲು ಕಡಿಯಲು, ಅಪಾಯಕಾರಿ ಮರಗಳ ತೆರವು ಮಾಡಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಪಂಜಿಗಾರು-ಬೊಬ್ಬೆಕೇರಿ ರಸ್ತೆ ನಾದುರಸ್ಥಿಯಲ್ಲಿರುವುದರ ಬಗ್ಗೆ ಸಾರ್ವನಿಕರು ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಕೆಡಿಪಿ ಸದಸ್ಯ ಬಾಲಕೃಷ್ಣ ಸಾಮಾನಿ ಪ್ರಸ್ತಾಪಿಸಿದರು. ಕೊಡಿಯಾಲ ಗ್ರಾಮಕ್ಕೆ ಸಾಕಷ್ಟು ಅಭಿವೃದ್ಧಿಗೆ ಹಣ ನೀಡಲಾಗಿದೆ. ರಸ್ತೆ ಅಭಿವೃದ್ಧಿಗೆ ಕಳೆದ ವರ್ಷ ನಬಾರ್ಡ್ ಯೋಜನೆಯಲ್ಲಿ ಒಂದು ಕೋಟಿ ರೂ ಕಾಮಗಾರಿ ನಡೆಸಲಾಗಿದೆ. ಸ್ವಲ್ಪ ಬಾಕಿ ಆಗಿದೆ. ಮುಂದೆ ಅನುದಾನ ಬಂದರೆ ಉಳಿದ ಕಾಮಗಾರಿ ಪೂರ್ತಿ ಮಾಡಲಾಗುವುದು ಎಂದು ಶಾಸಕರು ಹೇಳಿದರು.

Advertisement

ಕೇರಳ ಮತ್ತು ಕರ್ನಾಟಕ ಗಡಿ ಪ್ರದೇಶವಾದ ಮಂಡೆಕೋಲು, ಅಜ್ಜಾವರ, ಆಲೆಟ್ಟಿ ಭಾಗದಲ್ಲಿ ಆನೆ ಹಾವಳಿ ತೀವ್ರ ಗೊಂಡಿರುವ ಬಗ್ಗೆ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಸಭೆಯ ಗಮನಕ್ಕೆ ತಂದರು. ಈ ಕುರಿತು ಚರ್ಚೆ ನಡೆದಾಗ ಆನೆಗಳನ್ನು ಸೆರೆ ಹಿಡಿದು ಬೇರೆ ಕಡೆಗೆ ಸಾಗಿಸಿ ಸಮಸ್ಯೆ ಪರಿಹರಿಸಬಹುದು. ಅದರೆ ಆನೆ ಹಿಡಿಯುವುದಕ್ಕೆ ಸರಕಾರಿ ಮಟ್ಟದಲ್ಲಿ ನಿರ್ಧಾರ ಆಗಬೇಕಿದೆ. ಈ ಕುರಿತು ತಾ.ಪಂ.ಸಭೆ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಕಳಿಸಬಹುದು ಎಂದು ವಲಯ ಅರಣ್ಯಾಧಿಕಾರಿ ಮಂಜುನಾಥ್ ಹೇಳಿದರು.

ಅಡಕೆ ಕೊಳೆ ರೋಗ ಪರಿಹಾರ ಕೋರಿ ಬಂದ ಬಹುತೇಕ ಅರ್ಜಿಗಳಿಗೆ ಹಣ ಪಾವತಿ ಆಗಿದೆ. ಆಧಾರ್ ಲಿಂಕ್ ಆಗದ ಕೆಲವರಿಗೆ ಸಿಕ್ಕಿಲ್ಲ ಅಂತವರು ಗಮನಕ್ಕೆ ತಂದರೆ ಪರಿಹರಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು. ಸುಳ್ಯದ ಅಂಬೇಡ್ಕರ್ ಭವನ ಕಾಮಗಾರಿ ಮತ್ತೆ ಸ್ಥಗಿತಗೊಂಡಿರುವುದಕ್ಕೆ ಶಾಸಕ ಎಸ್.ಅಂಗಾರ ಗರಂ ಆದರು. ಈ ಕುರಿತು ಸಮಾಜ ಕಲ್ಯಾಣ ಇಲಾಖೆ ಮತ್ತು ನಿರ್ಮಿತಿ ಕೇಂದ್ರದವರನ್ನು ಶಾಸಕರು ತರಾಟೆಗೆತ್ತಿಕೊಂಡರು.

ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಉಪಾಧ್ಯಕ್ಷೆ ಶುಭದಾ ಎಸ್.ರೈ, ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥ, ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ, ಆಶಾ ತಿಮ್ಮಪ್ಪ, ಕೆಡಿಪಿ ಸದಸ್ಯರು ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

3 hours ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

3 hours ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

4 hours ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

4 hours ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

13 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

14 hours ago