32.81 ಲಕ್ಷ ರೂಪಾಯಿ ಅನುದಾನ ಲ್ಯಾಪ್ಸ್…!

April 27, 2019
12:11 PM

ಸುಳ್ಯ: ಕಾಮಗಾರಿ ವಿಳಂಬವಾದ ಕಾರಣ ತಾಲೂಕು ಪಂಚಾಯತ್ ಅನುದಾನದಲ್ಲಿ ಲಿಂಕ್ ಡಾಕ್ಯುಮೆಂಟ್ ಅನುದಾನದಲ್ಲಿ ನಿರ್ವಹಿಸಿದ 46 ಕಾಮಗಾರಿಗಳಲ್ಲಿ ಒಟ್ಟು 32,81,478 ರೂಪಾಯಿ ಲ್ಯಾಪ್ಸ್‍ಗೊಂಡಿದೆ. ಈ ಕಾಮಗಾರಿಗಳನ್ನು ನಿರ್ವಹಿಸಿದ ಗುತ್ತಿಗೆದಾರರಿಗೆ ಅನುದಾನ ಪಾವತಿಯಾಗದೇ ಈಗ ಪರದಾಟ ನಡೆಸುವಂತಾಗಿದೆ.

ಮಾ.25 ರಂದು ಆದ ಎಲ್ಲಾ ಕಾಮಗಾರಿಗಳ ಬಿಲ್ಲುಗಳನ್ನು ತಾಲೂಕು ಖಜಾನೆಯಲ್ಲಿ ನೀಡುವಂತೆ ಜಿ.ಪಂ.ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗುತ್ತಿಗೆದಾರರಿಗೆ ಸೂಚಿಸಿದ್ದರು. ಆದರೆ ಗುತ್ತಿಗೆದಾರರು ತಾವು ನಿರ್ವಹಿಸಿದ ಕಾಮಗಾರಿಗಳ ಬಿಲ್ಲು ನೀಡದೇ ಇದ್ದುದರಿಂದ ಬಾಕಿಯಾಗಿದ್ದು, ತಾಪಂ ಮತ್ತು ತಾಲೂಕು ಖಜಾನೆಯ ಒಪ್ಪಂದದಲ್ಲಿ ಕಾಮಗಾರಿಗಳ ಬಿಲ್ಲುಗಳನ್ನು ಮಾ.25ರ ಮೊದಲೇ ನೀಡುವಂತೆ ಸೂಚಿಸಲಾಗಿತ್ತು. 2018 ನವಂಬರ್‍ನಲ್ಲಿ ಟೆಂಡರ್ ಕರೆದ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ವಹಿಸಲಾಗಿತ್ತಾದರೂ ಮರಳಿನ ಸಮಸ್ಯೆ ಬಂದುದರಿಂದ ಕಾಮಗಾರಿಯನ್ನು ಸಮಯಕ್ಕೆ ಸರಿಯಾಗಿ ಪೂರೈಸಲು ಗುತ್ತಿಗೆದಾರರಿಗೆ ಆಗಲಿಲ್ಲ. ಕೆಲವೊಂದು ಕಾಮಗಾರಿಗಳು ಸಂಪೂರ್ಣವಾಗಿದ್ದರೂ ಬಿಲ್ಲು ನೀಡುವಲ್ಲಿ ವಿಳಂಬವಾದ ಕಾರಣ ಅನುದಾನ ರದ್ದುಗೊಳಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror