Advertisement
ಸುದ್ದಿಗಳು

32.81 ಲಕ್ಷ ರೂಪಾಯಿ ಅನುದಾನ ಲ್ಯಾಪ್ಸ್…!

Share

ಸುಳ್ಯ: ಕಾಮಗಾರಿ ವಿಳಂಬವಾದ ಕಾರಣ ತಾಲೂಕು ಪಂಚಾಯತ್ ಅನುದಾನದಲ್ಲಿ ಲಿಂಕ್ ಡಾಕ್ಯುಮೆಂಟ್ ಅನುದಾನದಲ್ಲಿ ನಿರ್ವಹಿಸಿದ 46 ಕಾಮಗಾರಿಗಳಲ್ಲಿ ಒಟ್ಟು 32,81,478 ರೂಪಾಯಿ ಲ್ಯಾಪ್ಸ್‍ಗೊಂಡಿದೆ. ಈ ಕಾಮಗಾರಿಗಳನ್ನು ನಿರ್ವಹಿಸಿದ ಗುತ್ತಿಗೆದಾರರಿಗೆ ಅನುದಾನ ಪಾವತಿಯಾಗದೇ ಈಗ ಪರದಾಟ ನಡೆಸುವಂತಾಗಿದೆ.

ಮಾ.25 ರಂದು ಆದ ಎಲ್ಲಾ ಕಾಮಗಾರಿಗಳ ಬಿಲ್ಲುಗಳನ್ನು ತಾಲೂಕು ಖಜಾನೆಯಲ್ಲಿ ನೀಡುವಂತೆ ಜಿ.ಪಂ.ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗುತ್ತಿಗೆದಾರರಿಗೆ ಸೂಚಿಸಿದ್ದರು. ಆದರೆ ಗುತ್ತಿಗೆದಾರರು ತಾವು ನಿರ್ವಹಿಸಿದ ಕಾಮಗಾರಿಗಳ ಬಿಲ್ಲು ನೀಡದೇ ಇದ್ದುದರಿಂದ ಬಾಕಿಯಾಗಿದ್ದು, ತಾಪಂ ಮತ್ತು ತಾಲೂಕು ಖಜಾನೆಯ ಒಪ್ಪಂದದಲ್ಲಿ ಕಾಮಗಾರಿಗಳ ಬಿಲ್ಲುಗಳನ್ನು ಮಾ.25ರ ಮೊದಲೇ ನೀಡುವಂತೆ ಸೂಚಿಸಲಾಗಿತ್ತು. 2018 ನವಂಬರ್‍ನಲ್ಲಿ ಟೆಂಡರ್ ಕರೆದ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ವಹಿಸಲಾಗಿತ್ತಾದರೂ ಮರಳಿನ ಸಮಸ್ಯೆ ಬಂದುದರಿಂದ ಕಾಮಗಾರಿಯನ್ನು ಸಮಯಕ್ಕೆ ಸರಿಯಾಗಿ ಪೂರೈಸಲು ಗುತ್ತಿಗೆದಾರರಿಗೆ ಆಗಲಿಲ್ಲ. ಕೆಲವೊಂದು ಕಾಮಗಾರಿಗಳು ಸಂಪೂರ್ಣವಾಗಿದ್ದರೂ ಬಿಲ್ಲು ನೀಡುವಲ್ಲಿ ವಿಳಂಬವಾದ ಕಾರಣ ಅನುದಾನ ರದ್ದುಗೊಳಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

3 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

7 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

11 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

2 days ago