ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು ತಿಂಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಮಾಡುವಂತೆ ಈಗ ಕೋರ್ಟ್ ತೀರ್ಪು ನೀಡಿದೆ. ನಾವು ಪ್ರತಿ ಕ್ಷೇತ್ರದಲ್ಲೂ ಒಂದೊಂದು ಪ್ಯಾಕೇಜ್ ಮಾಡಲು ಮುಂದಾಗಿದ್ದು, ದೊಡ್ಡ ಕ್ಷೇತ್ರಗಳಲ್ಲಿ ಎರಡು ಪ್ಯಾಕೇಜ್ ಸೇರಿದಂತೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ ಮಾಡಲಾಗುವುದು. ಈ ಕುರಿತ ಟೆಂಡರ್ ಶೀಘ್ರವೇ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕಾಗಿ 7 ವರ್ಷಗಳ ಅವಧಿಗೆ ₹ 4,790 ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಯೋಜನೆ ಮಾಡಲಾಗುತ್ತಿದೆ. ಈಗಿರುವ ವ್ಯವಸ್ಥೆಗೂ, ಹೊಸ ವ್ಯವಸ್ಥೆಗೂ ಬೇಕಾದಷ್ಟು ವ್ಯತ್ಯಾಸಗಳಿವೆ. ಕಸ ವಿಂಗಡಣೆ, ವಾಹನಗಳ ಜವಾಬ್ದಾರಿ, ಕಟ್ಟಡ ತ್ಯಾಜ್ಯ ಪ್ರತ್ಯೇಕತೆ ಸೇರಿದಂತೆ ಅನೇಕ ಜವಾಬ್ದಾರಿ ನೀಡಲಾಗುವುದು” ಎಂದು ವಿವರಿಸಿದ್ದಾರೆ.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…