ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು ತಿಂಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಮಾಡುವಂತೆ ಈಗ ಕೋರ್ಟ್ ತೀರ್ಪು ನೀಡಿದೆ. ನಾವು ಪ್ರತಿ ಕ್ಷೇತ್ರದಲ್ಲೂ ಒಂದೊಂದು ಪ್ಯಾಕೇಜ್ ಮಾಡಲು ಮುಂದಾಗಿದ್ದು, ದೊಡ್ಡ ಕ್ಷೇತ್ರಗಳಲ್ಲಿ ಎರಡು ಪ್ಯಾಕೇಜ್ ಸೇರಿದಂತೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ ಮಾಡಲಾಗುವುದು. ಈ ಕುರಿತ ಟೆಂಡರ್ ಶೀಘ್ರವೇ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕಾಗಿ 7 ವರ್ಷಗಳ ಅವಧಿಗೆ ₹ 4,790 ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಯೋಜನೆ ಮಾಡಲಾಗುತ್ತಿದೆ. ಈಗಿರುವ ವ್ಯವಸ್ಥೆಗೂ, ಹೊಸ ವ್ಯವಸ್ಥೆಗೂ ಬೇಕಾದಷ್ಟು ವ್ಯತ್ಯಾಸಗಳಿವೆ. ಕಸ ವಿಂಗಡಣೆ, ವಾಹನಗಳ ಜವಾಬ್ದಾರಿ, ಕಟ್ಟಡ ತ್ಯಾಜ್ಯ ಪ್ರತ್ಯೇಕತೆ ಸೇರಿದಂತೆ ಅನೇಕ ಜವಾಬ್ದಾರಿ ನೀಡಲಾಗುವುದು” ಎಂದು ವಿವರಿಸಿದ್ದಾರೆ.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…