ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು ತಿಂಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಮಾಡುವಂತೆ ಈಗ ಕೋರ್ಟ್ ತೀರ್ಪು ನೀಡಿದೆ. ನಾವು ಪ್ರತಿ ಕ್ಷೇತ್ರದಲ್ಲೂ ಒಂದೊಂದು ಪ್ಯಾಕೇಜ್ ಮಾಡಲು ಮುಂದಾಗಿದ್ದು, ದೊಡ್ಡ ಕ್ಷೇತ್ರಗಳಲ್ಲಿ ಎರಡು ಪ್ಯಾಕೇಜ್ ಸೇರಿದಂತೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ ಮಾಡಲಾಗುವುದು. ಈ ಕುರಿತ ಟೆಂಡರ್ ಶೀಘ್ರವೇ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕಾಗಿ 7 ವರ್ಷಗಳ ಅವಧಿಗೆ ₹ 4,790 ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಯೋಜನೆ ಮಾಡಲಾಗುತ್ತಿದೆ. ಈಗಿರುವ ವ್ಯವಸ್ಥೆಗೂ, ಹೊಸ ವ್ಯವಸ್ಥೆಗೂ ಬೇಕಾದಷ್ಟು ವ್ಯತ್ಯಾಸಗಳಿವೆ. ಕಸ ವಿಂಗಡಣೆ, ವಾಹನಗಳ ಜವಾಬ್ದಾರಿ, ಕಟ್ಟಡ ತ್ಯಾಜ್ಯ ಪ್ರತ್ಯೇಕತೆ ಸೇರಿದಂತೆ ಅನೇಕ ಜವಾಬ್ದಾರಿ ನೀಡಲಾಗುವುದು” ಎಂದು ವಿವರಿಸಿದ್ದಾರೆ.
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…