ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು ತಿಂಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಮಾಡುವಂತೆ ಈಗ ಕೋರ್ಟ್ ತೀರ್ಪು ನೀಡಿದೆ. ನಾವು ಪ್ರತಿ ಕ್ಷೇತ್ರದಲ್ಲೂ ಒಂದೊಂದು ಪ್ಯಾಕೇಜ್ ಮಾಡಲು ಮುಂದಾಗಿದ್ದು, ದೊಡ್ಡ ಕ್ಷೇತ್ರಗಳಲ್ಲಿ ಎರಡು ಪ್ಯಾಕೇಜ್ ಸೇರಿದಂತೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ ಮಾಡಲಾಗುವುದು. ಈ ಕುರಿತ ಟೆಂಡರ್ ಶೀಘ್ರವೇ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕಾಗಿ 7 ವರ್ಷಗಳ ಅವಧಿಗೆ ₹ 4,790 ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಯೋಜನೆ ಮಾಡಲಾಗುತ್ತಿದೆ. ಈಗಿರುವ ವ್ಯವಸ್ಥೆಗೂ, ಹೊಸ ವ್ಯವಸ್ಥೆಗೂ ಬೇಕಾದಷ್ಟು ವ್ಯತ್ಯಾಸಗಳಿವೆ. ಕಸ ವಿಂಗಡಣೆ, ವಾಹನಗಳ ಜವಾಬ್ದಾರಿ, ಕಟ್ಟಡ ತ್ಯಾಜ್ಯ ಪ್ರತ್ಯೇಕತೆ ಸೇರಿದಂತೆ ಅನೇಕ ಜವಾಬ್ದಾರಿ ನೀಡಲಾಗುವುದು” ಎಂದು ವಿವರಿಸಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…