ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು ತಿಂಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಮಾಡುವಂತೆ ಈಗ ಕೋರ್ಟ್ ತೀರ್ಪು ನೀಡಿದೆ. ನಾವು ಪ್ರತಿ ಕ್ಷೇತ್ರದಲ್ಲೂ ಒಂದೊಂದು ಪ್ಯಾಕೇಜ್ ಮಾಡಲು ಮುಂದಾಗಿದ್ದು, ದೊಡ್ಡ ಕ್ಷೇತ್ರಗಳಲ್ಲಿ ಎರಡು ಪ್ಯಾಕೇಜ್ ಸೇರಿದಂತೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ ಮಾಡಲಾಗುವುದು. ಈ ಕುರಿತ ಟೆಂಡರ್ ಶೀಘ್ರವೇ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕಾಗಿ 7 ವರ್ಷಗಳ ಅವಧಿಗೆ ₹ 4,790 ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಯೋಜನೆ ಮಾಡಲಾಗುತ್ತಿದೆ. ಈಗಿರುವ ವ್ಯವಸ್ಥೆಗೂ, ಹೊಸ ವ್ಯವಸ್ಥೆಗೂ ಬೇಕಾದಷ್ಟು ವ್ಯತ್ಯಾಸಗಳಿವೆ. ಕಸ ವಿಂಗಡಣೆ, ವಾಹನಗಳ ಜವಾಬ್ದಾರಿ, ಕಟ್ಟಡ ತ್ಯಾಜ್ಯ ಪ್ರತ್ಯೇಕತೆ ಸೇರಿದಂತೆ ಅನೇಕ ಜವಾಬ್ದಾರಿ ನೀಡಲಾಗುವುದು” ಎಂದು ವಿವರಿಸಿದ್ದಾರೆ.
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…