ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮತ್ತು ಬೆಂಗಳೂರಿನಲ್ಲಿ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡುಬಂದರೂ, ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಈ ವರ್ಷ ಇಲ್ಲಿಯವರೆಗೆ, ನಾವು 35 ಪ್ರಕರಣಗಳು ವರದಿಯಾಗಿದ್ದು, ಕಳೆದ 15 ದಿನಗಳಲ್ಲಿ ಸ್ವಲ್ಪ ಏರಿಕೆಯಾಗಿದೆ ಎಂದು ಹೇಳಿದ್ದಾರೆ. ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಗರ್ಭಿಣಿಯರು ಮತ್ತು ಮಕ್ಕಳು ಜನದಟ್ಟಣೆಯ ಸ್ಥಳಗಳಿಗೆ ಭೇಟಿ ನೀಡುವಾಗ ಜಾಗರೂಕರಾಗಿರಬೇಕು. ಜನದಟ್ಟಣೆಯ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ್ದಾರೆ. ತೀವ್ರ ಉಸಿರಾಟದ ಸೋಂಕು ಪ್ರಕರಣಗಳಿಗೆ ಮಾತ್ರ ಕೋವಿಡ್-19 ಪರೀಕ್ಷೆಗಳು ಕಡ್ಡಾಯ ಎಂದು ಸಚಿವರು ತಿಳಿಸಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…