ಅಯೋಧ್ಯೆಗೆ ಪಾದಯಾತ್ರೆ ಮಾಡಿದ 350 ಮುಸ್ಲಿಂ ಭಕ್ತರು | 6 ದಿನಗಳ ಪಾದಯಾತ್ರೆಯ ಬಳಿಕ ರಾಮಲಲ್ಲಾನಿಗೆ ಪೂಜೆ|

January 31, 2024
10:09 PM
ಲಕ್ನೋದಿಂದ ಆರು ದಿನಗಳ ಪಾದಯಾತ್ರೆಯನ್ನು ಪೂರ್ಣಗೊಳಿಸಿದ 350 ಮುಸ್ಲಿಂ ಭಕ್ತರು ಅಯೋಧ್ಯೆಗೆ ತಲುಪಿ ರಾಮ ಮಂದಿರಕ್ಕೆ ಪೂಜೆ ಸಲ್ಲಿಸಿದರು.

ಲಕ್ನೋದಿಂದ ಆರು ದಿನಗಳ ಪಾದಯಾತ್ರೆಯನ್ನು ಪೂರ್ಣಗೊಳಿಸಿದ 350 ಮುಸ್ಲಿಂ ಭಕ್ತರು ಅಯೋಧ್ಯೆಗೆ ತಲುಪಿ ರಾಮ ಮಂದಿರಕ್ಕೆ ಪೂಜೆ ಸಲ್ಲಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೆಂಬಲಿತ ಮುಸ್ಲಿಂ ಸಂಘಟನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್  ನೇತೃತ್ವದ  ಗುಂಪು ತಮ್ಮ ಕಾಲ್ನಡಿಗೆಯನ್ನು ಆರಂಭಿಸಿತ್ತು.

ಲಕ್ನೋ ಮತ್ತು ಅಯೋಧ್ಯೆ ನಡುವೆ ಸುಮಾರು 150 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಕ್ರಮಿಸಿದರು ಮತ್ತು ಅಯೋಧ್ಯೆಗೆ ತಲುಪಲು ಪ್ರತಿದಿನ 25 ಕಿಲೋಮೀಟರ್ ನಡೆದರು.ಕೊರೆಯುವ ಚಳಿಯ ನಡುವೆ ‘ಜೈ ಶ್ರೀ ರಾಮ್’ ಎಂದು ಜಪಿಸುತ್ತಾ ಮುಂದೆ ಸಾಗಿದ್ದರು. ಪ್ರತಿ 25 ಕಿಲೋಮೀಟರ್‌ ನಡೆದು ನಂತರ ಪಾದಯಾತ್ರೆ ನಿಲ್ಲಿಸಿದ್ದರು. ಮರುದಿನ ಬೆಳಿಗ್ಗೆ ತಮ್ಮ ಪ್ರಯಾಣವನ್ನು ಮುಂದುವರೆಸುತ್ತಿದ್ದರು.

ಮುಸ್ಲಿಂ ಆರಾಧಕರ ಈ ಕಾರ್ಯವು ಏಕತೆ, ಸಮಗ್ರತೆ, ಸಾರ್ವಭೌಮತೆ ಮತ್ತು ಸಾಮರಸ್ಯದ ಸಂದೇಶವನ್ನು ರವಾನಿಸುತ್ತದೆ ಎಂದು ಯಾತ್ರೆಯ ನೇತೃತ್ವ ವಹಿಸಿದ್ದ  ರಾಜಾ ರಯೀಸ್ ಮತ್ತು ಸಂಯೋಜಕ ಶೇರ್ ಅಲಿ ಖಾನ್ ಹೇಳಿದ್ದರು. ದೇಶ ಮತ್ತು ಮಾನವೀಯತೆಯ ಮೇಲಿನ ಪ್ರೀತಿಯು ಧರ್ಮ, ಜಾತಿ ಮತ್ತು ಪಂಥಕ್ಕಿಂತಲೂ ಮೊದಲಿನ ಆದ್ಯತೆ ನೀಡುತ್ತದೆ. ಯಾವುದೇ ಧರ್ಮವು ಇತರರಿಗೆ ಟೀಕೆ, ಅಪಹಾಸ್ಯ ಅಥವಾ ತಿರಸ್ಕಾರವನ್ನು ಕಲಿಸುವುದಿಲ್ಲ ಎಂದು ಅವರು ಹೇಳಿದರು.

350 Muslims undertake 6-day Padyatra to offer prayers at Ram Temple in Ayodhya. They covered approximately 150 kilometers on foot between Lucknow and Ayodhya & walked 25 kilometers daily to reach Ayodhya.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ
June 13, 2026
7:41 AM
by: ಮಿರರ್‌ ಡೆಸ್ಕ್
ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು
June 13, 2026
7:23 AM
by: ದ ರೂರಲ್ ಮಿರರ್.ಕಾಂ
Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ
June 12, 2026
8:37 PM
by: ದ ರೂರಲ್ ಮಿರರ್.ಕಾಂ
ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ
June 12, 2026
7:52 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror