Advertisement
MIRROR FOCUS

ಅಯೋಧ್ಯೆಗೆ ಪಾದಯಾತ್ರೆ ಮಾಡಿದ 350 ಮುಸ್ಲಿಂ ಭಕ್ತರು | 6 ದಿನಗಳ ಪಾದಯಾತ್ರೆಯ ಬಳಿಕ ರಾಮಲಲ್ಲಾನಿಗೆ ಪೂಜೆ|

Share

ಲಕ್ನೋದಿಂದ ಆರು ದಿನಗಳ ಪಾದಯಾತ್ರೆಯನ್ನು ಪೂರ್ಣಗೊಳಿಸಿದ 350 ಮುಸ್ಲಿಂ ಭಕ್ತರು ಅಯೋಧ್ಯೆಗೆ ತಲುಪಿ ರಾಮ ಮಂದಿರಕ್ಕೆ ಪೂಜೆ ಸಲ್ಲಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೆಂಬಲಿತ ಮುಸ್ಲಿಂ ಸಂಘಟನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್  ನೇತೃತ್ವದ  ಗುಂಪು ತಮ್ಮ ಕಾಲ್ನಡಿಗೆಯನ್ನು ಆರಂಭಿಸಿತ್ತು.

ಲಕ್ನೋ ಮತ್ತು ಅಯೋಧ್ಯೆ ನಡುವೆ ಸುಮಾರು 150 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಕ್ರಮಿಸಿದರು ಮತ್ತು ಅಯೋಧ್ಯೆಗೆ ತಲುಪಲು ಪ್ರತಿದಿನ 25 ಕಿಲೋಮೀಟರ್ ನಡೆದರು.ಕೊರೆಯುವ ಚಳಿಯ ನಡುವೆ ‘ಜೈ ಶ್ರೀ ರಾಮ್’ ಎಂದು ಜಪಿಸುತ್ತಾ ಮುಂದೆ ಸಾಗಿದ್ದರು. ಪ್ರತಿ 25 ಕಿಲೋಮೀಟರ್‌ ನಡೆದು ನಂತರ ಪಾದಯಾತ್ರೆ ನಿಲ್ಲಿಸಿದ್ದರು. ಮರುದಿನ ಬೆಳಿಗ್ಗೆ ತಮ್ಮ ಪ್ರಯಾಣವನ್ನು ಮುಂದುವರೆಸುತ್ತಿದ್ದರು.

ಮುಸ್ಲಿಂ ಆರಾಧಕರ ಈ ಕಾರ್ಯವು ಏಕತೆ, ಸಮಗ್ರತೆ, ಸಾರ್ವಭೌಮತೆ ಮತ್ತು ಸಾಮರಸ್ಯದ ಸಂದೇಶವನ್ನು ರವಾನಿಸುತ್ತದೆ ಎಂದು ಯಾತ್ರೆಯ ನೇತೃತ್ವ ವಹಿಸಿದ್ದ  ರಾಜಾ ರಯೀಸ್ ಮತ್ತು ಸಂಯೋಜಕ ಶೇರ್ ಅಲಿ ಖಾನ್ ಹೇಳಿದ್ದರು. ದೇಶ ಮತ್ತು ಮಾನವೀಯತೆಯ ಮೇಲಿನ ಪ್ರೀತಿಯು ಧರ್ಮ, ಜಾತಿ ಮತ್ತು ಪಂಥಕ್ಕಿಂತಲೂ ಮೊದಲಿನ ಆದ್ಯತೆ ನೀಡುತ್ತದೆ. ಯಾವುದೇ ಧರ್ಮವು ಇತರರಿಗೆ ಟೀಕೆ, ಅಪಹಾಸ್ಯ ಅಥವಾ ತಿರಸ್ಕಾರವನ್ನು ಕಲಿಸುವುದಿಲ್ಲ ಎಂದು ಅವರು ಹೇಳಿದರು.

350 Muslims undertake 6-day Padyatra to offer prayers at Ram Temple in Ayodhya. They covered approximately 150 kilometers on foot between Lucknow and Ayodhya & walked 25 kilometers daily to reach Ayodhya.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

24 minutes ago

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

41 minutes ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

49 minutes ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

15 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

16 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

16 hours ago