Advertisement
MIRROR FOCUS

ಅಯೋಧ್ಯೆಗೆ ಪಾದಯಾತ್ರೆ ಮಾಡಿದ 350 ಮುಸ್ಲಿಂ ಭಕ್ತರು | 6 ದಿನಗಳ ಪಾದಯಾತ್ರೆಯ ಬಳಿಕ ರಾಮಲಲ್ಲಾನಿಗೆ ಪೂಜೆ|

Share

ಲಕ್ನೋದಿಂದ ಆರು ದಿನಗಳ ಪಾದಯಾತ್ರೆಯನ್ನು ಪೂರ್ಣಗೊಳಿಸಿದ 350 ಮುಸ್ಲಿಂ ಭಕ್ತರು ಅಯೋಧ್ಯೆಗೆ ತಲುಪಿ ರಾಮ ಮಂದಿರಕ್ಕೆ ಪೂಜೆ ಸಲ್ಲಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೆಂಬಲಿತ ಮುಸ್ಲಿಂ ಸಂಘಟನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್  ನೇತೃತ್ವದ  ಗುಂಪು ತಮ್ಮ ಕಾಲ್ನಡಿಗೆಯನ್ನು ಆರಂಭಿಸಿತ್ತು.

ಲಕ್ನೋ ಮತ್ತು ಅಯೋಧ್ಯೆ ನಡುವೆ ಸುಮಾರು 150 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಕ್ರಮಿಸಿದರು ಮತ್ತು ಅಯೋಧ್ಯೆಗೆ ತಲುಪಲು ಪ್ರತಿದಿನ 25 ಕಿಲೋಮೀಟರ್ ನಡೆದರು.ಕೊರೆಯುವ ಚಳಿಯ ನಡುವೆ ‘ಜೈ ಶ್ರೀ ರಾಮ್’ ಎಂದು ಜಪಿಸುತ್ತಾ ಮುಂದೆ ಸಾಗಿದ್ದರು. ಪ್ರತಿ 25 ಕಿಲೋಮೀಟರ್‌ ನಡೆದು ನಂತರ ಪಾದಯಾತ್ರೆ ನಿಲ್ಲಿಸಿದ್ದರು. ಮರುದಿನ ಬೆಳಿಗ್ಗೆ ತಮ್ಮ ಪ್ರಯಾಣವನ್ನು ಮುಂದುವರೆಸುತ್ತಿದ್ದರು.

ಮುಸ್ಲಿಂ ಆರಾಧಕರ ಈ ಕಾರ್ಯವು ಏಕತೆ, ಸಮಗ್ರತೆ, ಸಾರ್ವಭೌಮತೆ ಮತ್ತು ಸಾಮರಸ್ಯದ ಸಂದೇಶವನ್ನು ರವಾನಿಸುತ್ತದೆ ಎಂದು ಯಾತ್ರೆಯ ನೇತೃತ್ವ ವಹಿಸಿದ್ದ  ರಾಜಾ ರಯೀಸ್ ಮತ್ತು ಸಂಯೋಜಕ ಶೇರ್ ಅಲಿ ಖಾನ್ ಹೇಳಿದ್ದರು. ದೇಶ ಮತ್ತು ಮಾನವೀಯತೆಯ ಮೇಲಿನ ಪ್ರೀತಿಯು ಧರ್ಮ, ಜಾತಿ ಮತ್ತು ಪಂಥಕ್ಕಿಂತಲೂ ಮೊದಲಿನ ಆದ್ಯತೆ ನೀಡುತ್ತದೆ. ಯಾವುದೇ ಧರ್ಮವು ಇತರರಿಗೆ ಟೀಕೆ, ಅಪಹಾಸ್ಯ ಅಥವಾ ತಿರಸ್ಕಾರವನ್ನು ಕಲಿಸುವುದಿಲ್ಲ ಎಂದು ಅವರು ಹೇಳಿದರು.

350 Muslims undertake 6-day Padyatra to offer prayers at Ram Temple in Ayodhya. They covered approximately 150 kilometers on foot between Lucknow and Ayodhya & walked 25 kilometers daily to reach Ayodhya.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

21 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 days ago