Advertisement
MIRROR FOCUS

ಅಯೋಧ್ಯೆಗೆ ಪಾದಯಾತ್ರೆ ಮಾಡಿದ 350 ಮುಸ್ಲಿಂ ಭಕ್ತರು | 6 ದಿನಗಳ ಪಾದಯಾತ್ರೆಯ ಬಳಿಕ ರಾಮಲಲ್ಲಾನಿಗೆ ಪೂಜೆ|

Share

ಲಕ್ನೋದಿಂದ ಆರು ದಿನಗಳ ಪಾದಯಾತ್ರೆಯನ್ನು ಪೂರ್ಣಗೊಳಿಸಿದ 350 ಮುಸ್ಲಿಂ ಭಕ್ತರು ಅಯೋಧ್ಯೆಗೆ ತಲುಪಿ ರಾಮ ಮಂದಿರಕ್ಕೆ ಪೂಜೆ ಸಲ್ಲಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೆಂಬಲಿತ ಮುಸ್ಲಿಂ ಸಂಘಟನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್  ನೇತೃತ್ವದ  ಗುಂಪು ತಮ್ಮ ಕಾಲ್ನಡಿಗೆಯನ್ನು ಆರಂಭಿಸಿತ್ತು.

ಲಕ್ನೋ ಮತ್ತು ಅಯೋಧ್ಯೆ ನಡುವೆ ಸುಮಾರು 150 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಕ್ರಮಿಸಿದರು ಮತ್ತು ಅಯೋಧ್ಯೆಗೆ ತಲುಪಲು ಪ್ರತಿದಿನ 25 ಕಿಲೋಮೀಟರ್ ನಡೆದರು.ಕೊರೆಯುವ ಚಳಿಯ ನಡುವೆ ‘ಜೈ ಶ್ರೀ ರಾಮ್’ ಎಂದು ಜಪಿಸುತ್ತಾ ಮುಂದೆ ಸಾಗಿದ್ದರು. ಪ್ರತಿ 25 ಕಿಲೋಮೀಟರ್‌ ನಡೆದು ನಂತರ ಪಾದಯಾತ್ರೆ ನಿಲ್ಲಿಸಿದ್ದರು. ಮರುದಿನ ಬೆಳಿಗ್ಗೆ ತಮ್ಮ ಪ್ರಯಾಣವನ್ನು ಮುಂದುವರೆಸುತ್ತಿದ್ದರು.

ಮುಸ್ಲಿಂ ಆರಾಧಕರ ಈ ಕಾರ್ಯವು ಏಕತೆ, ಸಮಗ್ರತೆ, ಸಾರ್ವಭೌಮತೆ ಮತ್ತು ಸಾಮರಸ್ಯದ ಸಂದೇಶವನ್ನು ರವಾನಿಸುತ್ತದೆ ಎಂದು ಯಾತ್ರೆಯ ನೇತೃತ್ವ ವಹಿಸಿದ್ದ  ರಾಜಾ ರಯೀಸ್ ಮತ್ತು ಸಂಯೋಜಕ ಶೇರ್ ಅಲಿ ಖಾನ್ ಹೇಳಿದ್ದರು. ದೇಶ ಮತ್ತು ಮಾನವೀಯತೆಯ ಮೇಲಿನ ಪ್ರೀತಿಯು ಧರ್ಮ, ಜಾತಿ ಮತ್ತು ಪಂಥಕ್ಕಿಂತಲೂ ಮೊದಲಿನ ಆದ್ಯತೆ ನೀಡುತ್ತದೆ. ಯಾವುದೇ ಧರ್ಮವು ಇತರರಿಗೆ ಟೀಕೆ, ಅಪಹಾಸ್ಯ ಅಥವಾ ತಿರಸ್ಕಾರವನ್ನು ಕಲಿಸುವುದಿಲ್ಲ ಎಂದು ಅವರು ಹೇಳಿದರು.

350 Muslims undertake 6-day Padyatra to offer prayers at Ram Temple in Ayodhya. They covered approximately 150 kilometers on foot between Lucknow and Ayodhya & walked 25 kilometers daily to reach Ayodhya.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

51 minutes ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

10 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

18 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago