Advertisement
MIRROR FOCUS

ಅಯೋಧ್ಯೆಗೆ ಪಾದಯಾತ್ರೆ ಮಾಡಿದ 350 ಮುಸ್ಲಿಂ ಭಕ್ತರು | 6 ದಿನಗಳ ಪಾದಯಾತ್ರೆಯ ಬಳಿಕ ರಾಮಲಲ್ಲಾನಿಗೆ ಪೂಜೆ|

Share

ಲಕ್ನೋದಿಂದ ಆರು ದಿನಗಳ ಪಾದಯಾತ್ರೆಯನ್ನು ಪೂರ್ಣಗೊಳಿಸಿದ 350 ಮುಸ್ಲಿಂ ಭಕ್ತರು ಅಯೋಧ್ಯೆಗೆ ತಲುಪಿ ರಾಮ ಮಂದಿರಕ್ಕೆ ಪೂಜೆ ಸಲ್ಲಿಸಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬೆಂಬಲಿತ ಮುಸ್ಲಿಂ ಸಂಘಟನೆಯಾದ ಮುಸ್ಲಿಂ ರಾಷ್ಟ್ರೀಯ ಮಂಚ್  ನೇತೃತ್ವದ  ಗುಂಪು ತಮ್ಮ ಕಾಲ್ನಡಿಗೆಯನ್ನು ಆರಂಭಿಸಿತ್ತು.

ಲಕ್ನೋ ಮತ್ತು ಅಯೋಧ್ಯೆ ನಡುವೆ ಸುಮಾರು 150 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಕ್ರಮಿಸಿದರು ಮತ್ತು ಅಯೋಧ್ಯೆಗೆ ತಲುಪಲು ಪ್ರತಿದಿನ 25 ಕಿಲೋಮೀಟರ್ ನಡೆದರು.ಕೊರೆಯುವ ಚಳಿಯ ನಡುವೆ ‘ಜೈ ಶ್ರೀ ರಾಮ್’ ಎಂದು ಜಪಿಸುತ್ತಾ ಮುಂದೆ ಸಾಗಿದ್ದರು. ಪ್ರತಿ 25 ಕಿಲೋಮೀಟರ್‌ ನಡೆದು ನಂತರ ಪಾದಯಾತ್ರೆ ನಿಲ್ಲಿಸಿದ್ದರು. ಮರುದಿನ ಬೆಳಿಗ್ಗೆ ತಮ್ಮ ಪ್ರಯಾಣವನ್ನು ಮುಂದುವರೆಸುತ್ತಿದ್ದರು.

ಮುಸ್ಲಿಂ ಆರಾಧಕರ ಈ ಕಾರ್ಯವು ಏಕತೆ, ಸಮಗ್ರತೆ, ಸಾರ್ವಭೌಮತೆ ಮತ್ತು ಸಾಮರಸ್ಯದ ಸಂದೇಶವನ್ನು ರವಾನಿಸುತ್ತದೆ ಎಂದು ಯಾತ್ರೆಯ ನೇತೃತ್ವ ವಹಿಸಿದ್ದ  ರಾಜಾ ರಯೀಸ್ ಮತ್ತು ಸಂಯೋಜಕ ಶೇರ್ ಅಲಿ ಖಾನ್ ಹೇಳಿದ್ದರು. ದೇಶ ಮತ್ತು ಮಾನವೀಯತೆಯ ಮೇಲಿನ ಪ್ರೀತಿಯು ಧರ್ಮ, ಜಾತಿ ಮತ್ತು ಪಂಥಕ್ಕಿಂತಲೂ ಮೊದಲಿನ ಆದ್ಯತೆ ನೀಡುತ್ತದೆ. ಯಾವುದೇ ಧರ್ಮವು ಇತರರಿಗೆ ಟೀಕೆ, ಅಪಹಾಸ್ಯ ಅಥವಾ ತಿರಸ್ಕಾರವನ್ನು ಕಲಿಸುವುದಿಲ್ಲ ಎಂದು ಅವರು ಹೇಳಿದರು.

350 Muslims undertake 6-day Padyatra to offer prayers at Ram Temple in Ayodhya. They covered approximately 150 kilometers on foot between Lucknow and Ayodhya & walked 25 kilometers daily to reach Ayodhya.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

10 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

10 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

10 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

11 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

23 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago