#Fishermen | ಬಂಗಾಳಕೊಲ್ಲಿಯಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರು | ಸುರಕ್ಷಿತವಾಗಿ ಕರೆತಂದ ಭಾರತೀಯ ನೌಕಾಪಡೆ |

July 29, 2023
5:05 PM
ಭಾರತೀಯ ನೌಕಾ ಹಡಗು ಖಂಜಾರ್ ಮೂಲಕ ತಮಿಳುನಾಡು ಕರಾವಳಿಯಿಂದ 130 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ಕರೆತರಲಾಗಿದೆ.

ಮೀನುಗಾರಿಕೆ ಮೀನುಗಾರರ ಬದುಕು. ಸಮುದ್ರದಲ್ಲಿ ದೂರ ಹೋದಷ್ಟು ಮೀನು ಜಾಸ್ತಿ ಹಿಡಿಯಲು ಸಾಧ್ಯ. ಹಾಗಾಗಿ ಕಡಲ ಮಕ್ಕಳು ಸಮುದ್ರದಲ್ಲಿ ಕೆಲವೊಮ್ಮೆ ಮಿತಿ ಅರಿಯದೆ ದೂರ ಸಾಗುತ್ತಾರೆ. ಇದು ಅವರ ಪ್ರಾಣಕ್ಕೆ ಕುತ್ತು ತರುತ್ತೆ. ಅಂತಹ ಮೀನುಗಾರರನ್ನು ರಕ್ಷಿಸಲು ಭಾರತೀಯ ನೌಕಾಪಡೆ ಸದಾ ಸರ್ವ ಸನ್ನದ್ಧವಾಗಿರುತ್ತದೆ.

ಮೀನುಗಾರಿಕೆಂದು #Fishing ತೆರಳಿ ಬಂಗಾಳಕೊಲ್ಲಿಯಲ್ಲಿ #BayOfBengal ಸಿಲುಕಿಕೊಂಡಿದ್ದ 36 ಭಾರತೀಯ ಮೀನುಗಾರರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರಲಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಭಾರತೀಯ ನೌಕಾ ಹಡಗುS ಖಂಜಾರ್ ಮೂಲಕ ತಮಿಳುನಾಡು ಕರಾವಳಿಯಿಂದ 130 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ಕರೆತರಲಾಗಿದೆ ಎಂದು ನೌಕಾಪಡೆಯ ವಕ್ತಾರ ಕಮಾಂಡರ್ ವಿವೇಕ್ ಮಧ್ವಲ್ ತಿಳಿಸಿದ್ದಾರೆ.

ಮೀನುಗಾರರು 3 ಮೀನುಗಾರಿಕಾ ಹಡಗುಗಳಲ್ಲಿ ತೆರಳಿದ್ದು, 30 ಗಂಟೆಗಳ ಕಾರ್ಯಾಚರಣೆಯ ಮೂಲಕ ಮೀನುಗಾರರನ್ನು ಅಪಾಯದಿಂದ ಪಾರು ಮಾಡಲಾಗಿದೆ. ಖಂಜಾರ್ ನೌಕೆ ಸಮುದ್ರದಲ್ಲಿ ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ತಮಿಳುನಾಡು  ಕರಾವಳಿಯಿಂದ ಸರಿಸುಮಾರು 130 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮೂರು ಮೀನುಗಾರಿಕಾ ಹಡಗುಗಳಾದ ಶಬರನಾಥನ್, ಕಲೈವಾಣಿ ಮತ್ತು ಮಿಸಾಮಿ ಪತ್ತೆಯಾಗಿದೆ.

36 ಮೀನುಗಾರರು  ಮೂರು ಹಡಗುಗಳಲ್ಲಿ ತಮಿಳುನಾಡಿನ ನಾಗಪಟ್ಟಣದಿಂದ ತೆರಳಿದ್ದ ವೇಳೆ ಹಡಗಿನ ಇಂಧನ ಖಾಲಿಯಾಗಿದ್ದಲ್ಲದೇ ಪ್ರತಿಕೂಲ ಹವಾಮಾನ ಹಾಗೂ ಎಂಜಿನ್ ಸ್ಥಗಿತಗೊಂಡ ಕಾರಣ ಎರಡು ದಿನಗಳಿಂದ ಸಮುದ್ರದಲ್ಲಿ ಸಿಲುಕಿಕೊಂಡಿದ್ದರು ಎಂದು ಕಮಾಂಡರ್ ಮಧ್ವಲ್ ಹೇಳಿದ್ದಾರೆ. ಪ್ರತಿಕೂಲ ಹವಾಮಾನದ ನಡುವೆಯೂ 30 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಮೀನುಗಾರರನ್ನು ಸುರಕ್ಷಿತವಾಗಿ ಚೆನ್ನೈ ಬಂದರಿಗೆ ಕರೆತರಲಾಗಿದೆ ಎಂದು ವರದಿಗಳು ತಿಳಿಸಿವೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?
April 14, 2026
2:10 PM
by: ದ ರೂರಲ್ ಮಿರರ್.ಕಾಂ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ
ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ
April 14, 2026
7:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror