ಮೀನುಗಾರಿಕೆ ಮೀನುಗಾರರ ಬದುಕು. ಸಮುದ್ರದಲ್ಲಿ ದೂರ ಹೋದಷ್ಟು ಮೀನು ಜಾಸ್ತಿ ಹಿಡಿಯಲು ಸಾಧ್ಯ. ಹಾಗಾಗಿ ಕಡಲ ಮಕ್ಕಳು ಸಮುದ್ರದಲ್ಲಿ ಕೆಲವೊಮ್ಮೆ ಮಿತಿ ಅರಿಯದೆ ದೂರ ಸಾಗುತ್ತಾರೆ. ಇದು ಅವರ ಪ್ರಾಣಕ್ಕೆ ಕುತ್ತು ತರುತ್ತೆ. ಅಂತಹ ಮೀನುಗಾರರನ್ನು ರಕ್ಷಿಸಲು ಭಾರತೀಯ ನೌಕಾಪಡೆ ಸದಾ ಸರ್ವ ಸನ್ನದ್ಧವಾಗಿರುತ್ತದೆ.
ಮೀನುಗಾರಿಕೆಂದು #Fishing ತೆರಳಿ ಬಂಗಾಳಕೊಲ್ಲಿಯಲ್ಲಿ #BayOfBengal ಸಿಲುಕಿಕೊಂಡಿದ್ದ 36 ಭಾರತೀಯ ಮೀನುಗಾರರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರಲಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಭಾರತೀಯ ನೌಕಾ ಹಡಗುS ಖಂಜಾರ್ ಮೂಲಕ ತಮಿಳುನಾಡು ಕರಾವಳಿಯಿಂದ 130 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ಕರೆತರಲಾಗಿದೆ ಎಂದು ನೌಕಾಪಡೆಯ ವಕ್ತಾರ ಕಮಾಂಡರ್ ವಿವೇಕ್ ಮಧ್ವಲ್ ತಿಳಿಸಿದ್ದಾರೆ.
ಮೀನುಗಾರರು 3 ಮೀನುಗಾರಿಕಾ ಹಡಗುಗಳಲ್ಲಿ ತೆರಳಿದ್ದು, 30 ಗಂಟೆಗಳ ಕಾರ್ಯಾಚರಣೆಯ ಮೂಲಕ ಮೀನುಗಾರರನ್ನು ಅಪಾಯದಿಂದ ಪಾರು ಮಾಡಲಾಗಿದೆ. ಖಂಜಾರ್ ನೌಕೆ ಸಮುದ್ರದಲ್ಲಿ ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ತಮಿಳುನಾಡು ಕರಾವಳಿಯಿಂದ ಸರಿಸುಮಾರು 130 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮೂರು ಮೀನುಗಾರಿಕಾ ಹಡಗುಗಳಾದ ಶಬರನಾಥನ್, ಕಲೈವಾಣಿ ಮತ್ತು ಮಿಸಾಮಿ ಪತ್ತೆಯಾಗಿದೆ.
36 ಮೀನುಗಾರರು ಮೂರು ಹಡಗುಗಳಲ್ಲಿ ತಮಿಳುನಾಡಿನ ನಾಗಪಟ್ಟಣದಿಂದ ತೆರಳಿದ್ದ ವೇಳೆ ಹಡಗಿನ ಇಂಧನ ಖಾಲಿಯಾಗಿದ್ದಲ್ಲದೇ ಪ್ರತಿಕೂಲ ಹವಾಮಾನ ಹಾಗೂ ಎಂಜಿನ್ ಸ್ಥಗಿತಗೊಂಡ ಕಾರಣ ಎರಡು ದಿನಗಳಿಂದ ಸಮುದ್ರದಲ್ಲಿ ಸಿಲುಕಿಕೊಂಡಿದ್ದರು ಎಂದು ಕಮಾಂಡರ್ ಮಧ್ವಲ್ ಹೇಳಿದ್ದಾರೆ. ಪ್ರತಿಕೂಲ ಹವಾಮಾನದ ನಡುವೆಯೂ 30 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಮೀನುಗಾರರನ್ನು ಸುರಕ್ಷಿತವಾಗಿ ಚೆನ್ನೈ ಬಂದರಿಗೆ ಕರೆತರಲಾಗಿದೆ ಎಂದು ವರದಿಗಳು ತಿಳಿಸಿವೆ
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…