Advertisement
ಸುದ್ದಿಗಳು

#Fishermen | ಬಂಗಾಳಕೊಲ್ಲಿಯಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರು | ಸುರಕ್ಷಿತವಾಗಿ ಕರೆತಂದ ಭಾರತೀಯ ನೌಕಾಪಡೆ |

Share

ಮೀನುಗಾರಿಕೆ ಮೀನುಗಾರರ ಬದುಕು. ಸಮುದ್ರದಲ್ಲಿ ದೂರ ಹೋದಷ್ಟು ಮೀನು ಜಾಸ್ತಿ ಹಿಡಿಯಲು ಸಾಧ್ಯ. ಹಾಗಾಗಿ ಕಡಲ ಮಕ್ಕಳು ಸಮುದ್ರದಲ್ಲಿ ಕೆಲವೊಮ್ಮೆ ಮಿತಿ ಅರಿಯದೆ ದೂರ ಸಾಗುತ್ತಾರೆ. ಇದು ಅವರ ಪ್ರಾಣಕ್ಕೆ ಕುತ್ತು ತರುತ್ತೆ. ಅಂತಹ ಮೀನುಗಾರರನ್ನು ರಕ್ಷಿಸಲು ಭಾರತೀಯ ನೌಕಾಪಡೆ ಸದಾ ಸರ್ವ ಸನ್ನದ್ಧವಾಗಿರುತ್ತದೆ.

ಮೀನುಗಾರಿಕೆಂದು #Fishing ತೆರಳಿ ಬಂಗಾಳಕೊಲ್ಲಿಯಲ್ಲಿ #BayOfBengal ಸಿಲುಕಿಕೊಂಡಿದ್ದ 36 ಭಾರತೀಯ ಮೀನುಗಾರರನ್ನು ರಕ್ಷಿಸಿ ಸುರಕ್ಷಿತವಾಗಿ ಕರೆತರಲಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಭಾರತೀಯ ನೌಕಾ ಹಡಗುS ಖಂಜಾರ್ ಮೂಲಕ ತಮಿಳುನಾಡು ಕರಾವಳಿಯಿಂದ 130 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರನ್ನು ಸುರಕ್ಷಿತವಾಗಿ ಕರೆತರಲಾಗಿದೆ ಎಂದು ನೌಕಾಪಡೆಯ ವಕ್ತಾರ ಕಮಾಂಡರ್ ವಿವೇಕ್ ಮಧ್ವಲ್ ತಿಳಿಸಿದ್ದಾರೆ.

ಮೀನುಗಾರರು 3 ಮೀನುಗಾರಿಕಾ ಹಡಗುಗಳಲ್ಲಿ ತೆರಳಿದ್ದು, 30 ಗಂಟೆಗಳ ಕಾರ್ಯಾಚರಣೆಯ ಮೂಲಕ ಮೀನುಗಾರರನ್ನು ಅಪಾಯದಿಂದ ಪಾರು ಮಾಡಲಾಗಿದೆ. ಖಂಜಾರ್ ನೌಕೆ ಸಮುದ್ರದಲ್ಲಿ ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ತಮಿಳುನಾಡು  ಕರಾವಳಿಯಿಂದ ಸರಿಸುಮಾರು 130 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮೂರು ಮೀನುಗಾರಿಕಾ ಹಡಗುಗಳಾದ ಶಬರನಾಥನ್, ಕಲೈವಾಣಿ ಮತ್ತು ಮಿಸಾಮಿ ಪತ್ತೆಯಾಗಿದೆ.

36 ಮೀನುಗಾರರು  ಮೂರು ಹಡಗುಗಳಲ್ಲಿ ತಮಿಳುನಾಡಿನ ನಾಗಪಟ್ಟಣದಿಂದ ತೆರಳಿದ್ದ ವೇಳೆ ಹಡಗಿನ ಇಂಧನ ಖಾಲಿಯಾಗಿದ್ದಲ್ಲದೇ ಪ್ರತಿಕೂಲ ಹವಾಮಾನ ಹಾಗೂ ಎಂಜಿನ್ ಸ್ಥಗಿತಗೊಂಡ ಕಾರಣ ಎರಡು ದಿನಗಳಿಂದ ಸಮುದ್ರದಲ್ಲಿ ಸಿಲುಕಿಕೊಂಡಿದ್ದರು ಎಂದು ಕಮಾಂಡರ್ ಮಧ್ವಲ್ ಹೇಳಿದ್ದಾರೆ. ಪ್ರತಿಕೂಲ ಹವಾಮಾನದ ನಡುವೆಯೂ 30 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಮೀನುಗಾರರನ್ನು ಸುರಕ್ಷಿತವಾಗಿ ಚೆನ್ನೈ ಬಂದರಿಗೆ ಕರೆತರಲಾಗಿದೆ ಎಂದು ವರದಿಗಳು ತಿಳಿಸಿವೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

6 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

7 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

14 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

17 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

23 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

1 day ago