MIRROR FOCUS

#GaneshaChaturthi | ಅತ್ಯಂತ ಶ್ರೀಮಂತ ಗಣೇಶನಿಗೆ 360 ಕೋಟಿ ಇನ್ಸೂರೆನ್ಸ್‌ | 69 ಕೆಜಿ ಚಿನ್ನ, 336 ಕೆಜಿ ಬೆಳ್ಳಿ ಅಲಂಕಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗಣೇಶ ಹಬ್ಬ ವಿಶೇಷವಾಗಿ ನಡೆಯುವುದು ಮುಂಬೈನಲ್ಲಿ. ಲಕ್ಷಾಂತರ ಭಕ್ತರು ಇಲ್ಲಿ ಸೇರುತ್ತಾರೆ. ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ವಿಘ್ನೇಶ್ವರನ ಭಕ್ತರು ಬಗೆಬಗೆಯ ಗಣೇಶ ಮೂರ್ತಿಗಳನ್ನಕೂರಿಸಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಕಲ ವಿಘ್ನಗಳು ನಿವಾರಣೆಯಾಗಲಿ ವಿನಾಯಕನು ನಂಬಿದ ಭಕ್ತರಿಗೆ ಬುದ್ಧಿ, ಆಯುಷ್ಯ, ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ದಯಪಾಲಿಸುತ್ತಾನೆ ಎಂಬ ನಂಬಿಕೆಯೊಂದಿಗೆ ಗಣೇಶೋತ್ಸವ ಆಚರಣೆ ಮಾಡುತ್ತಿದ್ದಾರೆ.

Advertisement
ಈ ನಡುವೆ ಮುಂಬೈನ ಜಿಎಸ್‌ಬಿ ಸೇವಾ ಮಂಡಲ ದೇಶದಲ್ಲೇ ಅಂತ್ಯಂತ ಶ್ರೀಮಂತ ಗಣೇಶ ಮೂರ್ತಿಯನ್ನ ಕೂರಿಸಿ, ಗಣೇಶೋತ್ಸವವನ್ನು ಆಚರಿಸುತ್ತಿದೆ. ವಿಶೇಷವೆಂದರೆ ಈ ಗಣೇಶನ ಮೂರ್ತಿಯ ಅಲಂಕಾರಕ್ಕೇ 69 ಕೆಜಿ ಚಿನ್ನ ಹಾಗೂ 336 ಕೆಜಿ ಬೆಳ್ಳಿಯನ್ನು ಬಳಕೆ ಮಾಡಲಾಗಿದೆ. ಹೌದು.. ಮುಂಬೈನ ಅತ್ಯಂತ ದೊಡ್ಡ ಗಣೇಶ ಎನ್ನಲಾದ ಕಿಂಗ್ಸ್​ ಸರ್ಕಲ್​​ನ ಈ ಗಣಪತಿಗೆ ಹೀಗೆ ಚಿನ್ನ-ಬೆಳ್ಳಿಯಲ್ಲಿ ಭರ್ಜರಿ ಅಲಂಕಾರ ಮಾಡಲಾಗಿದೆ. ಜಿಎಸ್​​ಬಿ ಸೇವಾ ಮಂಡಲದವರು ಅದ್ಧೂರಿಯಾಗಿ ವರ್ಷಪೂರ್ತಿ ಆಚರಿಸುವ ಈ ಗಣೇಶ ಉತ್ಸವ ಪ್ರಸಿದ್ಧಿ ಪಡೆದಿದ್ದು, ಪ್ರತಿ ವರ್ಷವೂ ದೇಶದ ಗಮನ ಸೆಳೆಯುತ್ತದೆ. ಈ ಬಾರಿ ಸೆ.19ರಿಂದ 23ರ ವರೆಗೂ ಇಲ್ಲಿ ಗಣೇಶ ಚತುರ್ಥಿ ಉತ್ಸವ ಆಚರಣೆ ಆಗಲಿದೆ.

ಈ ಗಣೇಶನಿಗೆ ವೈಭವೋಪೇತ ಅಲಂಕಾರ ಮಾಡಲಾಗುತ್ತಿದ್ದು, ಈ ಸಲ ಅಲಂಕಾರಕ್ಕೆಂದೇ 69 ಕೆಜಿ ಚಿನ್ನ ಹಾಗೂ 336 ಕೆಜಿ ಬೆಳ್ಳಿ ಬಳಸಲಾಗಿದೆ. ದುಬಾರಿ ಅಲಂಕಾರ ಮತ್ತಿತರ ಕಾರಣಗಳಿಂದಾಗಿ ಈ ಗಣೇಶನಿಗೆ ಪ್ರತಿವರ್ಷ ವಿಮೆ ಕೂಡ ಮಾಡಿಸಲಾಗುತ್ತಿದ್ದು, ಈ ಬಾರಿ 360 ಕೋಟಿ ರೂ.ಗೆ ವಿಮೆ ಮಾಡಿಸಲಾಗಿದೆ. ಕಳೆದ ವರ್ಷ ಜಿಎಸ್‌ಬಿ ಮಂಡಲವು 316.40 ಕೋಟಿ ರೂ. ವಿಮೆ ಮಾಡಿಸಿತ್ತು. ಆದರೆ ಈ ಬಾರಿ ವಿಮೆ ಮೊತ್ತವು 44 ಕೋಟಿ ರೂ. ಹೆಚ್ಚಾಗಿದೆ. ಅದ್ರೆ ಎಷ್ಟು ಪ್ರೀಮಿಯಂ ಪಾವತಿಸಲಾಗಿದೆ ಎಂಬ ಮಾಹಿತಿಯನ್ನು ಅಧಿಕೃತಗೊಳಿಸಿಲ್ಲ.

Source: News Agencies

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

52 minutes ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

57 minutes ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

12 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

12 hours ago

ಕೇಂದ್ರದ ಬೆಂಬಲಕ್ಕಾಗಿ  ವಿಶೇಷ ಜಾಥಾ | ಪಕ್ಷಾತೀತವಾಗಿ  ಬೆಂಬಲ

ದೇಶದ  ಸೈನಿಕರಿಗೆ ಗೌರವ ಸಲ್ಲಿಸಿ  ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ  ನಾಳೆ…

12 hours ago