ಗಣೇಶ ಹಬ್ಬ ವಿಶೇಷವಾಗಿ ನಡೆಯುವುದು ಮುಂಬೈನಲ್ಲಿ. ಲಕ್ಷಾಂತರ ಭಕ್ತರು ಇಲ್ಲಿ ಸೇರುತ್ತಾರೆ. ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ವಿಘ್ನೇಶ್ವರನ ಭಕ್ತರು ಬಗೆಬಗೆಯ ಗಣೇಶ ಮೂರ್ತಿಗಳನ್ನಕೂರಿಸಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಕಲ ವಿಘ್ನಗಳು ನಿವಾರಣೆಯಾಗಲಿ ವಿನಾಯಕನು ನಂಬಿದ ಭಕ್ತರಿಗೆ ಬುದ್ಧಿ, ಆಯುಷ್ಯ, ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ದಯಪಾಲಿಸುತ್ತಾನೆ ಎಂಬ ನಂಬಿಕೆಯೊಂದಿಗೆ ಗಣೇಶೋತ್ಸವ ಆಚರಣೆ ಮಾಡುತ್ತಿದ್ದಾರೆ.
ಈ ಗಣೇಶನಿಗೆ ವೈಭವೋಪೇತ ಅಲಂಕಾರ ಮಾಡಲಾಗುತ್ತಿದ್ದು, ಈ ಸಲ ಅಲಂಕಾರಕ್ಕೆಂದೇ 69 ಕೆಜಿ ಚಿನ್ನ ಹಾಗೂ 336 ಕೆಜಿ ಬೆಳ್ಳಿ ಬಳಸಲಾಗಿದೆ. ದುಬಾರಿ ಅಲಂಕಾರ ಮತ್ತಿತರ ಕಾರಣಗಳಿಂದಾಗಿ ಈ ಗಣೇಶನಿಗೆ ಪ್ರತಿವರ್ಷ ವಿಮೆ ಕೂಡ ಮಾಡಿಸಲಾಗುತ್ತಿದ್ದು, ಈ ಬಾರಿ 360 ಕೋಟಿ ರೂ.ಗೆ ವಿಮೆ ಮಾಡಿಸಲಾಗಿದೆ. ಕಳೆದ ವರ್ಷ ಜಿಎಸ್ಬಿ ಮಂಡಲವು 316.40 ಕೋಟಿ ರೂ. ವಿಮೆ ಮಾಡಿಸಿತ್ತು. ಆದರೆ ಈ ಬಾರಿ ವಿಮೆ ಮೊತ್ತವು 44 ಕೋಟಿ ರೂ. ಹೆಚ್ಚಾಗಿದೆ. ಅದ್ರೆ ಎಷ್ಟು ಪ್ರೀಮಿಯಂ ಪಾವತಿಸಲಾಗಿದೆ ಎಂಬ ಮಾಹಿತಿಯನ್ನು ಅಧಿಕೃತಗೊಳಿಸಿಲ್ಲ.
Source: News Agencies
ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…
ಕಿಸಾನ್ ಸಮ್ಮಾನ್ ನಿಧಿಯಿಂದ 9 ಕೋಟಿ 50 ಲಕ್ಷ ರೈತರಿಗೆ 21 ಸಾವಿರ…
ತುಮಕೂರು ಜಿಲ್ಲೆಯಲ್ಲಿ 1351 ಹಾಲು ಉತ್ಪಾದಕರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿನಿತ್ಯ 9.40…
ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿನ ಜೈವಿಕ ತ್ಯಾಜ್ಯಗಳನ್ನು ನಗರಸಭೆ ಕಸ ಹಾಗೂ ಜನನಿಬಿಡ ಪ್ರದೇಶಗಳಲ್ಲಿ…
ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16 ಸಾವಿರದ 114…
ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಪ್ರಸಿದ್ದ ಅನ್ನಪೂರ್ಣೇಶ್ವರಿ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಲಾಗಿದೆ…