Advertisement
MIRROR FOCUS

#GaneshaChaturthi | ಅತ್ಯಂತ ಶ್ರೀಮಂತ ಗಣೇಶನಿಗೆ 360 ಕೋಟಿ ಇನ್ಸೂರೆನ್ಸ್‌ | 69 ಕೆಜಿ ಚಿನ್ನ, 336 ಕೆಜಿ ಬೆಳ್ಳಿ ಅಲಂಕಾರ |

Share

ಗಣೇಶ ಹಬ್ಬ ವಿಶೇಷವಾಗಿ ನಡೆಯುವುದು ಮುಂಬೈನಲ್ಲಿ. ಲಕ್ಷಾಂತರ ಭಕ್ತರು ಇಲ್ಲಿ ಸೇರುತ್ತಾರೆ. ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ವಿಘ್ನೇಶ್ವರನ ಭಕ್ತರು ಬಗೆಬಗೆಯ ಗಣೇಶ ಮೂರ್ತಿಗಳನ್ನಕೂರಿಸಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಕಲ ವಿಘ್ನಗಳು ನಿವಾರಣೆಯಾಗಲಿ ವಿನಾಯಕನು ನಂಬಿದ ಭಕ್ತರಿಗೆ ಬುದ್ಧಿ, ಆಯುಷ್ಯ, ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ದಯಪಾಲಿಸುತ್ತಾನೆ ಎಂಬ ನಂಬಿಕೆಯೊಂದಿಗೆ ಗಣೇಶೋತ್ಸವ ಆಚರಣೆ ಮಾಡುತ್ತಿದ್ದಾರೆ.

ಈ ನಡುವೆ ಮುಂಬೈನ ಜಿಎಸ್‌ಬಿ ಸೇವಾ ಮಂಡಲ ದೇಶದಲ್ಲೇ ಅಂತ್ಯಂತ ಶ್ರೀಮಂತ ಗಣೇಶ ಮೂರ್ತಿಯನ್ನ ಕೂರಿಸಿ, ಗಣೇಶೋತ್ಸವವನ್ನು ಆಚರಿಸುತ್ತಿದೆ. ವಿಶೇಷವೆಂದರೆ ಈ ಗಣೇಶನ ಮೂರ್ತಿಯ ಅಲಂಕಾರಕ್ಕೇ 69 ಕೆಜಿ ಚಿನ್ನ ಹಾಗೂ 336 ಕೆಜಿ ಬೆಳ್ಳಿಯನ್ನು ಬಳಕೆ ಮಾಡಲಾಗಿದೆ. ಹೌದು.. ಮುಂಬೈನ ಅತ್ಯಂತ ದೊಡ್ಡ ಗಣೇಶ ಎನ್ನಲಾದ ಕಿಂಗ್ಸ್​ ಸರ್ಕಲ್​​ನ ಈ ಗಣಪತಿಗೆ ಹೀಗೆ ಚಿನ್ನ-ಬೆಳ್ಳಿಯಲ್ಲಿ ಭರ್ಜರಿ ಅಲಂಕಾರ ಮಾಡಲಾಗಿದೆ. ಜಿಎಸ್​​ಬಿ ಸೇವಾ ಮಂಡಲದವರು ಅದ್ಧೂರಿಯಾಗಿ ವರ್ಷಪೂರ್ತಿ ಆಚರಿಸುವ ಈ ಗಣೇಶ ಉತ್ಸವ ಪ್ರಸಿದ್ಧಿ ಪಡೆದಿದ್ದು, ಪ್ರತಿ ವರ್ಷವೂ ದೇಶದ ಗಮನ ಸೆಳೆಯುತ್ತದೆ. ಈ ಬಾರಿ ಸೆ.19ರಿಂದ 23ರ ವರೆಗೂ ಇಲ್ಲಿ ಗಣೇಶ ಚತುರ್ಥಿ ಉತ್ಸವ ಆಚರಣೆ ಆಗಲಿದೆ.

ಈ ಗಣೇಶನಿಗೆ ವೈಭವೋಪೇತ ಅಲಂಕಾರ ಮಾಡಲಾಗುತ್ತಿದ್ದು, ಈ ಸಲ ಅಲಂಕಾರಕ್ಕೆಂದೇ 69 ಕೆಜಿ ಚಿನ್ನ ಹಾಗೂ 336 ಕೆಜಿ ಬೆಳ್ಳಿ ಬಳಸಲಾಗಿದೆ. ದುಬಾರಿ ಅಲಂಕಾರ ಮತ್ತಿತರ ಕಾರಣಗಳಿಂದಾಗಿ ಈ ಗಣೇಶನಿಗೆ ಪ್ರತಿವರ್ಷ ವಿಮೆ ಕೂಡ ಮಾಡಿಸಲಾಗುತ್ತಿದ್ದು, ಈ ಬಾರಿ 360 ಕೋಟಿ ರೂ.ಗೆ ವಿಮೆ ಮಾಡಿಸಲಾಗಿದೆ. ಕಳೆದ ವರ್ಷ ಜಿಎಸ್‌ಬಿ ಮಂಡಲವು 316.40 ಕೋಟಿ ರೂ. ವಿಮೆ ಮಾಡಿಸಿತ್ತು. ಆದರೆ ಈ ಬಾರಿ ವಿಮೆ ಮೊತ್ತವು 44 ಕೋಟಿ ರೂ. ಹೆಚ್ಚಾಗಿದೆ. ಅದ್ರೆ ಎಷ್ಟು ಪ್ರೀಮಿಯಂ ಪಾವತಿಸಲಾಗಿದೆ ಎಂಬ ಮಾಹಿತಿಯನ್ನು ಅಧಿಕೃತಗೊಳಿಸಿಲ್ಲ.

Source: News Agencies

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

14 minutes ago

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

6 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

12 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

13 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

21 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

23 hours ago