Advertisement
MIRROR FOCUS

#GaneshaChaturthi | ಅತ್ಯಂತ ಶ್ರೀಮಂತ ಗಣೇಶನಿಗೆ 360 ಕೋಟಿ ಇನ್ಸೂರೆನ್ಸ್‌ | 69 ಕೆಜಿ ಚಿನ್ನ, 336 ಕೆಜಿ ಬೆಳ್ಳಿ ಅಲಂಕಾರ |

Share

ಗಣೇಶ ಹಬ್ಬ ವಿಶೇಷವಾಗಿ ನಡೆಯುವುದು ಮುಂಬೈನಲ್ಲಿ. ಲಕ್ಷಾಂತರ ಭಕ್ತರು ಇಲ್ಲಿ ಸೇರುತ್ತಾರೆ. ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ವಿಘ್ನೇಶ್ವರನ ಭಕ್ತರು ಬಗೆಬಗೆಯ ಗಣೇಶ ಮೂರ್ತಿಗಳನ್ನಕೂರಿಸಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಕಲ ವಿಘ್ನಗಳು ನಿವಾರಣೆಯಾಗಲಿ ವಿನಾಯಕನು ನಂಬಿದ ಭಕ್ತರಿಗೆ ಬುದ್ಧಿ, ಆಯುಷ್ಯ, ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ದಯಪಾಲಿಸುತ್ತಾನೆ ಎಂಬ ನಂಬಿಕೆಯೊಂದಿಗೆ ಗಣೇಶೋತ್ಸವ ಆಚರಣೆ ಮಾಡುತ್ತಿದ್ದಾರೆ.

ಈ ನಡುವೆ ಮುಂಬೈನ ಜಿಎಸ್‌ಬಿ ಸೇವಾ ಮಂಡಲ ದೇಶದಲ್ಲೇ ಅಂತ್ಯಂತ ಶ್ರೀಮಂತ ಗಣೇಶ ಮೂರ್ತಿಯನ್ನ ಕೂರಿಸಿ, ಗಣೇಶೋತ್ಸವವನ್ನು ಆಚರಿಸುತ್ತಿದೆ. ವಿಶೇಷವೆಂದರೆ ಈ ಗಣೇಶನ ಮೂರ್ತಿಯ ಅಲಂಕಾರಕ್ಕೇ 69 ಕೆಜಿ ಚಿನ್ನ ಹಾಗೂ 336 ಕೆಜಿ ಬೆಳ್ಳಿಯನ್ನು ಬಳಕೆ ಮಾಡಲಾಗಿದೆ. ಹೌದು.. ಮುಂಬೈನ ಅತ್ಯಂತ ದೊಡ್ಡ ಗಣೇಶ ಎನ್ನಲಾದ ಕಿಂಗ್ಸ್​ ಸರ್ಕಲ್​​ನ ಈ ಗಣಪತಿಗೆ ಹೀಗೆ ಚಿನ್ನ-ಬೆಳ್ಳಿಯಲ್ಲಿ ಭರ್ಜರಿ ಅಲಂಕಾರ ಮಾಡಲಾಗಿದೆ. ಜಿಎಸ್​​ಬಿ ಸೇವಾ ಮಂಡಲದವರು ಅದ್ಧೂರಿಯಾಗಿ ವರ್ಷಪೂರ್ತಿ ಆಚರಿಸುವ ಈ ಗಣೇಶ ಉತ್ಸವ ಪ್ರಸಿದ್ಧಿ ಪಡೆದಿದ್ದು, ಪ್ರತಿ ವರ್ಷವೂ ದೇಶದ ಗಮನ ಸೆಳೆಯುತ್ತದೆ. ಈ ಬಾರಿ ಸೆ.19ರಿಂದ 23ರ ವರೆಗೂ ಇಲ್ಲಿ ಗಣೇಶ ಚತುರ್ಥಿ ಉತ್ಸವ ಆಚರಣೆ ಆಗಲಿದೆ.

ಈ ಗಣೇಶನಿಗೆ ವೈಭವೋಪೇತ ಅಲಂಕಾರ ಮಾಡಲಾಗುತ್ತಿದ್ದು, ಈ ಸಲ ಅಲಂಕಾರಕ್ಕೆಂದೇ 69 ಕೆಜಿ ಚಿನ್ನ ಹಾಗೂ 336 ಕೆಜಿ ಬೆಳ್ಳಿ ಬಳಸಲಾಗಿದೆ. ದುಬಾರಿ ಅಲಂಕಾರ ಮತ್ತಿತರ ಕಾರಣಗಳಿಂದಾಗಿ ಈ ಗಣೇಶನಿಗೆ ಪ್ರತಿವರ್ಷ ವಿಮೆ ಕೂಡ ಮಾಡಿಸಲಾಗುತ್ತಿದ್ದು, ಈ ಬಾರಿ 360 ಕೋಟಿ ರೂ.ಗೆ ವಿಮೆ ಮಾಡಿಸಲಾಗಿದೆ. ಕಳೆದ ವರ್ಷ ಜಿಎಸ್‌ಬಿ ಮಂಡಲವು 316.40 ಕೋಟಿ ರೂ. ವಿಮೆ ಮಾಡಿಸಿತ್ತು. ಆದರೆ ಈ ಬಾರಿ ವಿಮೆ ಮೊತ್ತವು 44 ಕೋಟಿ ರೂ. ಹೆಚ್ಚಾಗಿದೆ. ಅದ್ರೆ ಎಷ್ಟು ಪ್ರೀಮಿಯಂ ಪಾವತಿಸಲಾಗಿದೆ ಎಂಬ ಮಾಹಿತಿಯನ್ನು ಅಧಿಕೃತಗೊಳಿಸಿಲ್ಲ.

Source: News Agencies

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

9 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

9 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago