ಗಣೇಶ ಹಬ್ಬ ವಿಶೇಷವಾಗಿ ನಡೆಯುವುದು ಮುಂಬೈನಲ್ಲಿ. ಲಕ್ಷಾಂತರ ಭಕ್ತರು ಇಲ್ಲಿ ಸೇರುತ್ತಾರೆ. ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ವಿಘ್ನೇಶ್ವರನ ಭಕ್ತರು ಬಗೆಬಗೆಯ ಗಣೇಶ ಮೂರ್ತಿಗಳನ್ನಕೂರಿಸಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಕಲ ವಿಘ್ನಗಳು ನಿವಾರಣೆಯಾಗಲಿ ವಿನಾಯಕನು ನಂಬಿದ ಭಕ್ತರಿಗೆ ಬುದ್ಧಿ, ಆಯುಷ್ಯ, ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ದಯಪಾಲಿಸುತ್ತಾನೆ ಎಂಬ ನಂಬಿಕೆಯೊಂದಿಗೆ ಗಣೇಶೋತ್ಸವ ಆಚರಣೆ ಮಾಡುತ್ತಿದ್ದಾರೆ.
ಈ ಗಣೇಶನಿಗೆ ವೈಭವೋಪೇತ ಅಲಂಕಾರ ಮಾಡಲಾಗುತ್ತಿದ್ದು, ಈ ಸಲ ಅಲಂಕಾರಕ್ಕೆಂದೇ 69 ಕೆಜಿ ಚಿನ್ನ ಹಾಗೂ 336 ಕೆಜಿ ಬೆಳ್ಳಿ ಬಳಸಲಾಗಿದೆ. ದುಬಾರಿ ಅಲಂಕಾರ ಮತ್ತಿತರ ಕಾರಣಗಳಿಂದಾಗಿ ಈ ಗಣೇಶನಿಗೆ ಪ್ರತಿವರ್ಷ ವಿಮೆ ಕೂಡ ಮಾಡಿಸಲಾಗುತ್ತಿದ್ದು, ಈ ಬಾರಿ 360 ಕೋಟಿ ರೂ.ಗೆ ವಿಮೆ ಮಾಡಿಸಲಾಗಿದೆ. ಕಳೆದ ವರ್ಷ ಜಿಎಸ್ಬಿ ಮಂಡಲವು 316.40 ಕೋಟಿ ರೂ. ವಿಮೆ ಮಾಡಿಸಿತ್ತು. ಆದರೆ ಈ ಬಾರಿ ವಿಮೆ ಮೊತ್ತವು 44 ಕೋಟಿ ರೂ. ಹೆಚ್ಚಾಗಿದೆ. ಅದ್ರೆ ಎಷ್ಟು ಪ್ರೀಮಿಯಂ ಪಾವತಿಸಲಾಗಿದೆ ಎಂಬ ಮಾಹಿತಿಯನ್ನು ಅಧಿಕೃತಗೊಳಿಸಿಲ್ಲ.
Source: News Agencies
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…