Advertisement
MIRROR FOCUS

ಸ್ಕ್ರ್ಯಾಪ್ ಟೈರ್‌ ಹೆಸರಿನಲ್ಲಿ ಬಂದರಿಗೆ ಬಂದ ಅಡಿಕೆ ವಶಕ್ಕೆ ಪಡೆದ ಡಿಆರ್‌ಐ | 39.44 ಟನ್‌ ಅಡಿಕೆ ವಶಕ್ಕೆ | ಅಡಿಕೆ ಆಮದು ತಡೆಗೆ ಸತತ ಪ್ರಯತ್ನ |

Share

ಗುಜರಾತ್‌ನ ಮುಂದ್ರಾ ಬಂದರು ಮೂಲಕ ಆಗಮನವಾಗಿದ್ದ 39.44 ಟನ್ ಅಡಕೆಯನ್ನು(Arecanut) ಡಿಆರ್‌ಐ ವಶಪಡಿಸಿಕೊಂಡಿದೆ. ಸ್ಕ್ರ್ಯಾಪ್ ಟೈರ್‌ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆ ಸಾಗಿಸಲಾಗುತ್ತಿತ್ತು. 10 ಕಂಟೈನರ್ ಗಳಲ್ಲಿ ಒಟ್ಟು 39.44 ಟನ್ ಅಡಿಕೆ ಬರುತ್ತಿತ್ತು. ಇದನ್ನು ಡಿಆರ್‌ಐ ವಶಪಡಿಸಿಕೊಂಡಿದೆ. ಇದೀಗ ಅಡಿಕೆ ಅಕ್ರಮ ಸಾಗಾಟಕ್ಕೆ ಬ್ರೇಕ್‌ ಬೀಳುತ್ತಿದ್ದು, ಇದು ಅಡಿಕೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಧಾರಣೆ ಏರಿಕೆಯ ನಿರೀಕ್ಷೆ ಇದೆ.

ಗುಜರಾತ್‌ ಮುಂದ್ರಾ ಬಂದರು ಮೂಲಕ  ಕಸ್ಟಮ್ಸ್ ಸುಂಕ ತಪ್ಪಿಸಿ ಅಡಿಕೆ ಕಳ್ಳಸಾಗಣೆ ಮಾಡುವ ಜಾಲವನ್ನು ಡಿಆರ್‌ಐ ಬೇಧಿಸಿದೆ. ಇದಕ್ಕೂ ಮುನ್ನ ಇದೇ ಬಂದರಿನಿಂದ ಇದೇ ಮಾದರಿಯಲ್ಲಿ ವಶಪಡಿಸಿಕೊಂಡ ಹಲವು ಪ್ರಕರಣಗಳು ನಡೆದಿದೆ. ಹೀಗಾಗಿ  ಕೇಂದ್ರ ಮತ್ತು ಗುಜರಾತ್‌ನ ಭದ್ರತಾ ಏಜೆನ್ಸಿಗಳು ಅಂತಹ ಅಂಶಗಳು ಮತ್ತು ಕಳ್ಳಸಾಗಾಣಿಕೆ ವಸ್ತುಗಳ ಮೇಲೆ, ಸಾಗಾಣಿಕೆದಾರರ ಚಲನವಲನಗಳ ಮೇಲೆ ನಿರಂತರ ನಿಗಾ ಇರಿಸುತ್ತವೆ. ಆದ್ದರಿಂದ, ಇದೀಗ ಇನ್ನೊಂದು ಪ್ರಕರಣ ಪತ್ತೆಯಾಗಿದೆ.

ಮಾಹಿತಿಯ ಪ್ರಕಾರ, ದುಬೈನಿಂದ ವಡೋದರಾ ಸಂಸ್ಥೆಯು ಈ ಅಡಿಕೆಯನ್ನು ಬುಕಿಂಗ್‌ ಮಾಡಿದೆ. ಸ್ಕ್ರ್ಯಾಪ್ ಟೈರ್‌ಗಳ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆಯನ್ನು ಸಾಗಿಸಲಾಗುತ್ತಿತ್ತು. ಇದೀಗ ಮತ್ತೊಂದು ಭಾರೀ ಪ್ರಮಾಣದ ಅಡಿಕೆಯನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

39.44 tonnes of Arecanuts were seized through Mundra port in Gujarat. Arecanuts were being transported illegally in the name of scrap tyres. A total of 39.44 tons of Arecanuts were coming in 10 containers. It has been seized by DRI.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

8 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

14 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

22 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago