Advertisement
MIRROR FOCUS

ಸ್ಕ್ರ್ಯಾಪ್ ಟೈರ್‌ ಹೆಸರಿನಲ್ಲಿ ಬಂದರಿಗೆ ಬಂದ ಅಡಿಕೆ ವಶಕ್ಕೆ ಪಡೆದ ಡಿಆರ್‌ಐ | 39.44 ಟನ್‌ ಅಡಿಕೆ ವಶಕ್ಕೆ | ಅಡಿಕೆ ಆಮದು ತಡೆಗೆ ಸತತ ಪ್ರಯತ್ನ |

Share

ಗುಜರಾತ್‌ನ ಮುಂದ್ರಾ ಬಂದರು ಮೂಲಕ ಆಗಮನವಾಗಿದ್ದ 39.44 ಟನ್ ಅಡಕೆಯನ್ನು(Arecanut) ಡಿಆರ್‌ಐ ವಶಪಡಿಸಿಕೊಂಡಿದೆ. ಸ್ಕ್ರ್ಯಾಪ್ ಟೈರ್‌ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆ ಸಾಗಿಸಲಾಗುತ್ತಿತ್ತು. 10 ಕಂಟೈನರ್ ಗಳಲ್ಲಿ ಒಟ್ಟು 39.44 ಟನ್ ಅಡಿಕೆ ಬರುತ್ತಿತ್ತು. ಇದನ್ನು ಡಿಆರ್‌ಐ ವಶಪಡಿಸಿಕೊಂಡಿದೆ. ಇದೀಗ ಅಡಿಕೆ ಅಕ್ರಮ ಸಾಗಾಟಕ್ಕೆ ಬ್ರೇಕ್‌ ಬೀಳುತ್ತಿದ್ದು, ಇದು ಅಡಿಕೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಧಾರಣೆ ಏರಿಕೆಯ ನಿರೀಕ್ಷೆ ಇದೆ.

Advertisement

ಗುಜರಾತ್‌ ಮುಂದ್ರಾ ಬಂದರು ಮೂಲಕ  ಕಸ್ಟಮ್ಸ್ ಸುಂಕ ತಪ್ಪಿಸಿ ಅಡಿಕೆ ಕಳ್ಳಸಾಗಣೆ ಮಾಡುವ ಜಾಲವನ್ನು ಡಿಆರ್‌ಐ ಬೇಧಿಸಿದೆ. ಇದಕ್ಕೂ ಮುನ್ನ ಇದೇ ಬಂದರಿನಿಂದ ಇದೇ ಮಾದರಿಯಲ್ಲಿ ವಶಪಡಿಸಿಕೊಂಡ ಹಲವು ಪ್ರಕರಣಗಳು ನಡೆದಿದೆ. ಹೀಗಾಗಿ  ಕೇಂದ್ರ ಮತ್ತು ಗುಜರಾತ್‌ನ ಭದ್ರತಾ ಏಜೆನ್ಸಿಗಳು ಅಂತಹ ಅಂಶಗಳು ಮತ್ತು ಕಳ್ಳಸಾಗಾಣಿಕೆ ವಸ್ತುಗಳ ಮೇಲೆ, ಸಾಗಾಣಿಕೆದಾರರ ಚಲನವಲನಗಳ ಮೇಲೆ ನಿರಂತರ ನಿಗಾ ಇರಿಸುತ್ತವೆ. ಆದ್ದರಿಂದ, ಇದೀಗ ಇನ್ನೊಂದು ಪ್ರಕರಣ ಪತ್ತೆಯಾಗಿದೆ.

ಮಾಹಿತಿಯ ಪ್ರಕಾರ, ದುಬೈನಿಂದ ವಡೋದರಾ ಸಂಸ್ಥೆಯು ಈ ಅಡಿಕೆಯನ್ನು ಬುಕಿಂಗ್‌ ಮಾಡಿದೆ. ಸ್ಕ್ರ್ಯಾಪ್ ಟೈರ್‌ಗಳ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆಯನ್ನು ಸಾಗಿಸಲಾಗುತ್ತಿತ್ತು. ಇದೀಗ ಮತ್ತೊಂದು ಭಾರೀ ಪ್ರಮಾಣದ ಅಡಿಕೆಯನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

39.44 tonnes of Arecanuts were seized through Mundra port in Gujarat. Arecanuts were being transported illegally in the name of scrap tyres. A total of 39.44 tons of Arecanuts were coming in 10 containers. It has been seized by DRI.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

6 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

6 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

22 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

22 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

22 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

22 hours ago