MIRROR FOCUS

ಅಖಿಲ ಭಾರತೀಯ 3ನೇ ತೆಂಗು‌ ಬೆಳೆ  ರೈತರ  ಬೃಹತ್‌ ಸಮಾವೇಶ | 2025-26 ವರ್ಷವನ್ನು ತೆಂಗು ವರ್ಷ ಘೋಷಿಸಲು ಆಗ್ರಹ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತೀಯ ಕಿಸಾನ್ ಸಂಘದ ಅಖಿಲ ಭಾರತೀಯ 3ನೇ ತೆಂಗು‌ ಬೆಳೆ(Coconut Growers)  ರೈತರ  ಸಭೆಯು ಆಂಧ್ರಪ್ರದೇಶದ(AndraPradesha) ಅಮಲಾಪುರದಲ್ಲಿ ಸಮಾವೇಶಗೊಂಡಿದೆ(Meet). ಸಮಾವೇಶದಲ್ಲಿ ತೆಂಗು ಉತ್ಪಾದಕರ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು(Central. state Govt) ಏನೇನು ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಭಾರಿ ಚರ್ಚೆ ನಡೆಯಲಿದೆ.

Advertisement

ಹಾಗೇ ರೈತರು ಉತ್ತಮ ತೆಂಗು ಕೃಷಿ ಮಾಡಲು ಇರುವ ಅವಕಾಶಗಳು ಉಪ ಉತ್ಪನ್ನಗಳು ಮೌಲ್ಯ ವರ್ಧನೆ ಮಾರುಕಟ್ಟೆ ಸಾಗಾಣಿಕೆ ವ್ಯವಸ್ಥೆ ಇತ್ಯಾದಿ ವಿಷಯಗಳ ಬಗ್ಗೆ ‍ ಚರ್ಚಿಸಲಾಗುತ್ತಿದೆ. ಭಾರತೀಯ ಕಿಸಾನ್‌ ಸಂಘದ ಅಖಿಲ ಭಾರತೀಯ ತೆಂಗು‌ ಬೆಳೆ  ರೈತರ ವೇದಿಕೆ ವತಿಯಿಂದ ಬೃಹತ್  ಸಮಾವೇಶ‌ ನಡೆಯಲಿದ್ದು  ಬೃಹತ್ ಸಂಖ್ಯೆಯಲ್ಲಿ ಸೇರಿ‌‌ ಮೆರವಣಿಗೆ‌ ಶೋಭಾಯಾತ್ರೆ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗಮನ ಸೆಳೆದು ಮನವಿ ಸಲ್ಲಿಸಲಿದೆ‌.

ದೇಶದಲ್ಲಿರುವ ಧಾರ್ಮಿಕ ಕೇಂದ್ರಗಳು ಮಠಗಳು ಮಂದಿರಗಳು ಭಕ್ತರಿಗೆ  ಮತ್ತು ಸರಕಾರಗಳು‌  ಬಿಸಿಊಟ/ಮದ್ಯಾಹ್ನ ಊಟ ವಿದ್ಯಾರ್ಥಿ ನಿಲಯಗಳು ಇತ್ಯಾದಿಗಳಲ್ಲಿ ಸಾರ್ವಜನಿಕರಿಗೆ ಕಂಪನಿಗಳ ಕಲಬೆರಕೆ ಅಡುಗೆ ಎಣ್ಣೆ ಬಳಸುತ್ತಿರುವದನ್ನು ಬಿಟ್ಟು ಜನಸಾಮಾನ್ಯರ ಆರೋಗ್ಯ ದೃಷ್ಟಿಯಿಂದ ನೇರವಾಗಿ ಅಂದರೆ ಗಾಣದಿಂದ ತಯಾರಿಸಿದ / ಯಾವುದೇ ಕಲಬೆರಕೆ ಇಲ್ಲದ ಎಣ್ಣೆಯನ್ನು ರೈತರಿಂದ ರೈತ ಉತ್ಪಾದಕ ಕಂಪನಿಗಳ ಮೂಲಕ ನೇರವಾಗಿ ಖರೀದಿಸಿ ಬಳಸುವುದರ ಮೂಲಕ ರೈತರಿಗೆ ನೆರವಾಗುವದರ ಜೊತೆಗೆ  ಜನರ ಆರೋಗ್ಯ ಕಾಪಾಡಲು ಕಾರ್ಯ ಪ್ರವೃತ್ತ ರಾಗಬೇಕೆಂದು ಭಾರತೀಯ ಕಿಸಾನ್ ಸಂಘದ ಅಖಿಲ ಭಾರತ ತೆಂಗು ರೈತರ ವೇದಿಕೆಯು”  ಆಂಧ್ರಪ್ರದೇಶದ ಅಮಲಾಪುರ ಸಮಾವೇಶದಲ್ಲಿ ಆಗ್ರಹಿಸಲು‌ ತೀರ್ಮಾನ ಕೈಗೊಳ್ಳಲಾಗಿದೆ.

ಹಿಂದಿನ ವರ್ಷವನ್ನು ಮಿಲೆಟ್ ವರ್ಷ ಎಂದು ಘೋಷಿಸಿ ವಿಶ್ವಾದ್ಯಂತ ಪ್ರಚಾರ ಮಾಡಲಾಯಿತೋ ಹಾಗೆ ಮುಂದಿನ‌ (2025-26) ವರ್ಷವನ್ನು ತೆಂಗು ವರ್ಷ  ಎಂದು ಘೋಷಿಸಿ ದೇಶಾದ್ಯಂತ ತೆಂಗು ಮತ್ತು ತೆಂಗಿನ ಉತ್ಪನ್ನಗಳ ಬಗ್ಗೆ ಪ್ರಚಾರ ಪ್ರಸಾರ ಮಾಡಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಆಗ್ರಹಿಸಲು ನಿರ್ಣಯ ಕೈಗೊಳ್ಳಲಾಯಿತು ಎಂದು ಗಂಗಾಧರ್ ಕಾಸರಘಟ್ಟ, ರಾಜ್ಯ ಪ್ರಧಾನ ಕಾರ್ಯದರ್ಶಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಇವರು ಮಾಹತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

4 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

4 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

4 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

5 hours ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…

5 hours ago