ಜಾಗತಿಕ ತಾಪಮಾನದ ಬಗ್ಗೆ ಎಚ್ಚರಿಕೆ ಕೇಳಿ ಬರುತ್ತಲೇ ಇದೆ. ಇದಕ್ಕೆ ಕಾರಣ ಜಾಗತಿಕ ತಾಪಮಾನದಿಂದಾಗಿ ಉಂಟಾಗುವ ಸಮಸ್ಯೆಗಳು. ಸಮದ್ರ ಮಟ್ಟ ಏರಿಕೆ, ಹವಾಮಾನಬದಲಾವಣೆ, ಅತಿಯಾದ ತಾಪಮಾನ ಹೀಗೆ ಇವುಗಳು ಗ್ಲೋಬಲ್ ವಾರ್ಮಿಂಗ್ ಜೊತೆ ನೇರವಾದ ಸಂಬಂಧ ಹೊಂದಿವೆ. ಈ ಹಿಂದೆ ಬಂದ ಸುಮಾರು ಅಧ್ಯಯನಗಳು ಜಾಗತಿಕ ತಾಪಮಾನದಿಂದಾಗಿ ಸಮುದ್ರಗಳ ಮಟ್ಟ ಏರಿಕೆ ಆಗುತ್ತಿದೆ, ಇದರಿಂದ 2050ರ ವೇಳೆಗೆ ಹಲವು ಪ್ರದೇಶಗಳು ಮುಳುಗಡೆಯಾಗಬಹುದು ಎಂದು ಸೂಚಿಸಿವೆ. ಭಾರತದಲ್ಲಿ ಮುಂಬೈ, ಮಹಾರಾಷ್ಟ್, ಕೇರಳ#Kerala, ಗುಜರಾತ್ ಕರಾವಳಯಂತಹ ಪ್ರದೇಶಗಳು ಅಪಾಯದಲ್ಲಿವೆ ಎಂದು ತಿಳಿಸಿವೆ.
ಕೇರಳದ ನಾಲ್ಕು ಜಿಲ್ಲೆಗಳಿಗೆ ಹೆಚ್ಚಿನ ಅಪಾಯ: ಇದೇ ರೀತಿಯ ಮತ್ತೊಂದು ವರದಿ ಬಹಿರಂಗವಾಗಿದ್ದು, ಜಾಗತಿಕ ತಾಪಮಾನದ ಕಾರಣ 2050ರ ವೇಳೆಗೆ ಕೇರಳದ 4 ಜಿಲ್ಲೆಗಳು ಸಮುದ್ರ ಮಟ್ಟಕ್ಕಿಂತ ಕೆಳಕ್ಕೆ ಹೋಗಬಹುದು ಎಂದು ಎಚ್ಚರಿಸಿದೆ. ನ್ಯೂಜೆರ್ಸಿ ಮೂಲದ ವಿಜ್ಞಾನ ಸಂಸ್ಥೆಯಾದ ಕ್ಲೈಮೇಟ್ ಸೆಂಟ್ರಲ್ ನಿರ್ಮಿಸಿದ ಹೊಸ ಡಿಜಿಟಲ್ ಎಲಿವೇಶನ್ ಮಾಡೆಲ್#DEM ಮೊದಲ ವರದಿಯಲ್ಲಿ ಮಧ್ಯ ಕೇರಳದ ಭಾಗಗಳು ಸಮುದ್ರ ಮಟ್ಟ ಏರಿಕೆಯ ಹೆಚ್ಚಿನ ಅಪಾಯದ ವಲಯಗಳು ಎಂದು ತಿಳಿಸಿತ್ತು. ಆದರೆ ಇದೀಗ ಮತ್ತೊಂದು ವರದಿಯನ್ನು ಬಿಡುಗಡೆ ಮಾಡಿದ್ದು, 2050 ರ ವೇಳೆಗೆ ಜಿಲ್ಲೆಯ ಹಲವು ಭಾಗಗಳು ಮುಳುಗಡೆಯಾಗಬಹುದು ಎಂದು ತಿಳಿಸಿದೆ.
ಪ್ರಮುಖ ಕರಾವಳಿ ನಗರಗಳಿಗೆ ಸಂಬಂಧಿಸಿದ ಇಂಟರ್ಗವರ್ನಮೆಂಟಲ್ ಪ್ಯಾನೆಲ್ ಆನ್ ಕ್ಲೈಮೇಟ್ ಚೇಂಜ್#IPCC ವರದಿಯು ಸಮುದ್ರ ಮಟ್ಟವು 2050 ರ ವೇಳೆಗೆ ಗಣನೀಯವಾಗಿ ಏರಿಕೆಯಾಗಲಿದೆ ಎಂದು ಸೂಚಿಸಿದೆ. ಉತ್ತರ ಹಿಂದೂ ಮಹಾಸಾಗರದಲ್ಲಿ#NIO ಸಮುದ್ರ ಮಟ್ಟ ಏರಿಕೆಯು ವರ್ಷಕ್ಕೆ 1.06-1.75mm ದರದಲ್ಲಿ ಸಂಭವಿಸಿದೆ. 1874 ರಿಂದ 2004 ರವರೆಗೆ ಮತ್ತು 25 ವರ್ಷಗಳಲ್ಲಿ ವರ್ಷಕ್ಕೆ 3mm ಗಿಂತ ಹೆಚ್ಚಾಗಿದೆ. ಈ ಬಗ್ಗೆ ಮಾತನಾಡಿದ ಹಿರಿಯ ಪರಿಸರ ವಿಜ್ಞಾನಿ ಕೆ ಕೆ ರಾಮಚಂದ್ರನ್ “1m ಏರಿಕೆಯ ಪ್ರಕ್ಷೇಪಣವನ್ನು ಈಗಾಗಲೇ ಮಾಡಲಾಗಿದೆ ಮತ್ತು ರಾಜ್ಯ ಹವಾಮಾನ ಕ್ರಿಯಾ ಯೋಜನೆಯು ಈ ಪ್ರಕ್ಷೇಪಣೆಯ ಆಧಾರದ ಮೇಲೆ ಈ ಸ್ಥಳಗಳ ಬಗ್ಗೆ ಎಚ್ಚರಿಕೆ ವಹಿಸಿದೆ. ಹವಮಾನವನ್ನು ಸುಧಾರಿಸುವ ಅನಿವಾರ್ಯತೆ ಈಗ ಬಂದಿದೆ. ರಾಜ್ಯ ಸರ್ಕಾರ ಹವಮಾನಕ್ಕೆ ಸಂಬಂಧಿಸಿದ ಗ್ರೀನ್ ಕ್ರೆಡಿಟ್ ಕಾರ್ಯಕ್ರಮವನ್ನು ಬೇಗ ಕೈಗೆತ್ತಿಕೊಳ್ಳಬೇಕು ಎಂದು ಕೆ ಕೆ ರಾಮಚಂದ್ರನ್ ಹೇಳಿದ್ದಾರೆ.
– ಆಂತರ್ಜಾಲ ಮಾಹಿತಿ
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…