MIRROR FOCUS

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು ರಾಜ್ಯಗಳು ಎರಡನೇ ಆನೆ ಗಣತಿಯನ್ನು ಇದೇ ಮೇ 23ರಿಂದ ಪ್ರಾರಂಭಿಸಲಿವೆ. ಮೂರು ದಿನ ನಡೆಯುವ ಈ ಗಣತಿಯಲ್ಲಿ ವಿವಿಧ ಮಾದರಿಗಳನ್ನು ಅನುಸರಿಸಿ ಆನೆಗಳ ಲೆಕ್ಕ ನಡೆಯಲಿದೆ. ಈ ಮೊದಲು ಮೇ 17ರಂದು ಆನೆ ಗಣತಿಗೆ ಉದ್ದೇಶಿಸಲಾಗಿತ್ತು. ಆದರೆ, ಕೇರಳ ಸರ್ಕಾರದ ವಿನಂತಿಯ ಮೇರೆಗೆ ಒಂದು ವಾರ ವಿಸ್ತರಿಸಲಾಗಿದ್ದು, ಮೇ 23ರಿಂದ ನಾಲ್ಕು ರಾಜ್ಯದಲ್ಲಿ ಏಕಕಾಲದಲ್ಲಿ ಈ ಕಾರ್ಯ ಆರಂಭವಾಗಲಿದೆ.

Advertisement
Advertisement

ಮೊದಲ ದಿನ ನೇರ ಆನೆ ಗಣತಿ ಮಾಡಲಾಗುತ್ತದೆ. ಎರಡನೇ ದಿನ ಲದ್ದಿ ಗಣತಿ, ಮೂರನೇ ದಿನ ವಾಟರ್​ಹೋಲ್​ ಗಣತಿ ನಡೆಸಲು ತೀರ್ಮಾನಿಸಲಾಗಿದೆ. ನಾಲ್ಕು ರಾಜ್ಯಗಳ ಅರಣ್ಯ ಇಲಾಖೆಗಳ ಮುಖ್ಯಸ್ಥರು ಮಂಗಳವಾರ ಆನ್‌ಲೈನ್ ಮೂಲಕ ಸಭೆ ನಡೆಸಿ ಗಣತಿ ವಿಧಾನದ ಕುರಿತು ಚರ್ಚಿಸಿದ್ದಾರೆ.

ತಮಿಳುನಾಡು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ, ಕಳೆದ ವರ್ಷದ ವಿಧಾನವನ್ನೇ ಈ ಬಾರಿಯೂ ಅನುಸರಿಸಲಾಗುವುದು. ಗಣತಿಯಲ್ಲಿ ಭಾಗಿಯಾಗುತ್ತಿರುವ ಅರಣ್ಯ ಸಿಬ್ಬಂದಿ ಮತ್ತು ಸ್ವಯಂ ಕಾರ್ಯಕರ್ತರ ಸಂಖ್ಯೆಯನ್ನು ಮುಂದಿನ ದಿನಗಳಲ್ಲಿ ಗುರುತಿಸಲಾಗುತ್ತದೆ. ನಿಗದಿತ ಪ್ರದೇಶದಲ್ಲಿ ಸುಮಾರು 15 ಕಿ.ಮೀ ದೂರವನ್ನು ತಂಡದ ನಾಲ್ಕರಿಂದ ಐದು ಸದಸ್ಯರು ಕ್ರಮಿಸಿ ಗಣತಿ ಮಾಡಲಿದ್ದಾರೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕಾಲ್ನಡಿಗೆಯಲ್ಲೇ ಈ ಕಾರ್ಯ ನಡೆಸುತ್ತಾರೆ. ಈ ವೇಳೆ ಆನೆಯ ವಯಸ್ಸು ಮತ್ತು ಲಿಂಗವನ್ನು ನೇರವಾಗಿ ನಿರ್ಣಯಿಸಲಿದ್ದಾರೆ. ಆನೆಗಳ ಬಾಹ್ಯ ಗಾಯಗಳು, ದಂತದ ಗಾತ್ರ ಮತ್ತು ಅದರ ಮುಖ್ನಾ (ದಂತವಿಲ್ಲದ ಗಂಡು ಆನೆ) ಸಂಖ್ಯೆಯನ್ನೂ ಪತ್ತೆ ಮಾಡಲಿದ್ದಾರೆ. ಆನೆಗಳ ನಡುವಿನ ವ್ಯತ್ಯಾಸವನ್ನು ಲದ್ದಿಯ ಮೂಲಕ ನಿರ್ಣಯಿಸಲಾಗುತ್ತದೆ. ಈ ತಂಡವು ಆನೆಯ ನಡವಳಿಕೆ ಮತ್ತು ಚಲನವಲನಗಳನ್ನೂ ಸಹ ಅಧ್ಯಯನ ಮಾಡುತ್ತದೆ.

ಕಳೆದ ವರ್ಷ ದಕ್ಷಿಣ ರಾಜ್ಯಗಳು ಒಟ್ಟಾಗಿ ಮೊದಲ ಬಾರಿಗೆ ಆನೆ ಗಣತಿ ನಡೆಸಿದ್ದವು. ಈ ಗಣತಿ 2023ರ ಮೇ 17ರಿಂದ ಮೇ 19ರವರೆಗೆ ಸಾಗಿತ್ತು. ಒಟ್ಟು 2,961 ಆನೆಗಳು ಕಂಡುಬಂದಿದ್ದವು. 2017ರ ಗಣತಿಗೆ ಹೋಲಿಸಿದಾಗ ಆನೆಗಳ ಸಂಖ್ಯೆ ಹೆಚ್ಚಾಗಿತ್ತು. ಇದಾದ ಬಳಿಕ ನಾಲ್ಕು ರಾಜ್ಯಗಳು ತಮ್ಮ ರಾಜ್ಯದಲ್ಲಿರುವ ಆನೆಗಳ ಸಂಖ್ಯೆಯನ್ನು ಬಿಡುಗಡೆ ಮಾಡಿದ್ದವು ಎಂದು ಮಾಹಿತಿ ನೀಡಿದ್ದಾರೆ.

  • ಅಂತರ್ಜಾಲ ಮಾಹಿತಿ(IANS​)
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

5 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

6 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

6 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

6 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

6 hours ago

ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ

ವಿದ್ಯುತ್ ಸರಬರಾಜು ಕಂಪನಿಗಳಿಗೆ  ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …

7 hours ago