Advertisement
MIRROR FOCUS

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

Share

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು ರಾಜ್ಯಗಳು ಎರಡನೇ ಆನೆ ಗಣತಿಯನ್ನು ಇದೇ ಮೇ 23ರಿಂದ ಪ್ರಾರಂಭಿಸಲಿವೆ. ಮೂರು ದಿನ ನಡೆಯುವ ಈ ಗಣತಿಯಲ್ಲಿ ವಿವಿಧ ಮಾದರಿಗಳನ್ನು ಅನುಸರಿಸಿ ಆನೆಗಳ ಲೆಕ್ಕ ನಡೆಯಲಿದೆ. ಈ ಮೊದಲು ಮೇ 17ರಂದು ಆನೆ ಗಣತಿಗೆ ಉದ್ದೇಶಿಸಲಾಗಿತ್ತು. ಆದರೆ, ಕೇರಳ ಸರ್ಕಾರದ ವಿನಂತಿಯ ಮೇರೆಗೆ ಒಂದು ವಾರ ವಿಸ್ತರಿಸಲಾಗಿದ್ದು, ಮೇ 23ರಿಂದ ನಾಲ್ಕು ರಾಜ್ಯದಲ್ಲಿ ಏಕಕಾಲದಲ್ಲಿ ಈ ಕಾರ್ಯ ಆರಂಭವಾಗಲಿದೆ.

Advertisement
Advertisement

ಮೊದಲ ದಿನ ನೇರ ಆನೆ ಗಣತಿ ಮಾಡಲಾಗುತ್ತದೆ. ಎರಡನೇ ದಿನ ಲದ್ದಿ ಗಣತಿ, ಮೂರನೇ ದಿನ ವಾಟರ್​ಹೋಲ್​ ಗಣತಿ ನಡೆಸಲು ತೀರ್ಮಾನಿಸಲಾಗಿದೆ. ನಾಲ್ಕು ರಾಜ್ಯಗಳ ಅರಣ್ಯ ಇಲಾಖೆಗಳ ಮುಖ್ಯಸ್ಥರು ಮಂಗಳವಾರ ಆನ್‌ಲೈನ್ ಮೂಲಕ ಸಭೆ ನಡೆಸಿ ಗಣತಿ ವಿಧಾನದ ಕುರಿತು ಚರ್ಚಿಸಿದ್ದಾರೆ.

ತಮಿಳುನಾಡು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ, ಕಳೆದ ವರ್ಷದ ವಿಧಾನವನ್ನೇ ಈ ಬಾರಿಯೂ ಅನುಸರಿಸಲಾಗುವುದು. ಗಣತಿಯಲ್ಲಿ ಭಾಗಿಯಾಗುತ್ತಿರುವ ಅರಣ್ಯ ಸಿಬ್ಬಂದಿ ಮತ್ತು ಸ್ವಯಂ ಕಾರ್ಯಕರ್ತರ ಸಂಖ್ಯೆಯನ್ನು ಮುಂದಿನ ದಿನಗಳಲ್ಲಿ ಗುರುತಿಸಲಾಗುತ್ತದೆ. ನಿಗದಿತ ಪ್ರದೇಶದಲ್ಲಿ ಸುಮಾರು 15 ಕಿ.ಮೀ ದೂರವನ್ನು ತಂಡದ ನಾಲ್ಕರಿಂದ ಐದು ಸದಸ್ಯರು ಕ್ರಮಿಸಿ ಗಣತಿ ಮಾಡಲಿದ್ದಾರೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕಾಲ್ನಡಿಗೆಯಲ್ಲೇ ಈ ಕಾರ್ಯ ನಡೆಸುತ್ತಾರೆ. ಈ ವೇಳೆ ಆನೆಯ ವಯಸ್ಸು ಮತ್ತು ಲಿಂಗವನ್ನು ನೇರವಾಗಿ ನಿರ್ಣಯಿಸಲಿದ್ದಾರೆ. ಆನೆಗಳ ಬಾಹ್ಯ ಗಾಯಗಳು, ದಂತದ ಗಾತ್ರ ಮತ್ತು ಅದರ ಮುಖ್ನಾ (ದಂತವಿಲ್ಲದ ಗಂಡು ಆನೆ) ಸಂಖ್ಯೆಯನ್ನೂ ಪತ್ತೆ ಮಾಡಲಿದ್ದಾರೆ. ಆನೆಗಳ ನಡುವಿನ ವ್ಯತ್ಯಾಸವನ್ನು ಲದ್ದಿಯ ಮೂಲಕ ನಿರ್ಣಯಿಸಲಾಗುತ್ತದೆ. ಈ ತಂಡವು ಆನೆಯ ನಡವಳಿಕೆ ಮತ್ತು ಚಲನವಲನಗಳನ್ನೂ ಸಹ ಅಧ್ಯಯನ ಮಾಡುತ್ತದೆ.

ಕಳೆದ ವರ್ಷ ದಕ್ಷಿಣ ರಾಜ್ಯಗಳು ಒಟ್ಟಾಗಿ ಮೊದಲ ಬಾರಿಗೆ ಆನೆ ಗಣತಿ ನಡೆಸಿದ್ದವು. ಈ ಗಣತಿ 2023ರ ಮೇ 17ರಿಂದ ಮೇ 19ರವರೆಗೆ ಸಾಗಿತ್ತು. ಒಟ್ಟು 2,961 ಆನೆಗಳು ಕಂಡುಬಂದಿದ್ದವು. 2017ರ ಗಣತಿಗೆ ಹೋಲಿಸಿದಾಗ ಆನೆಗಳ ಸಂಖ್ಯೆ ಹೆಚ್ಚಾಗಿತ್ತು. ಇದಾದ ಬಳಿಕ ನಾಲ್ಕು ರಾಜ್ಯಗಳು ತಮ್ಮ ರಾಜ್ಯದಲ್ಲಿರುವ ಆನೆಗಳ ಸಂಖ್ಯೆಯನ್ನು ಬಿಡುಗಡೆ ಮಾಡಿದ್ದವು ಎಂದು ಮಾಹಿತಿ ನೀಡಿದ್ದಾರೆ.

  • ಅಂತರ್ಜಾಲ ಮಾಹಿತಿ(IANS​)
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

4 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

4 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

4 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

5 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

5 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

15 hours ago