Advertisement
MIRROR FOCUS

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

Share

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು ರಾಜ್ಯಗಳು ಎರಡನೇ ಆನೆ ಗಣತಿಯನ್ನು ಇದೇ ಮೇ 23ರಿಂದ ಪ್ರಾರಂಭಿಸಲಿವೆ. ಮೂರು ದಿನ ನಡೆಯುವ ಈ ಗಣತಿಯಲ್ಲಿ ವಿವಿಧ ಮಾದರಿಗಳನ್ನು ಅನುಸರಿಸಿ ಆನೆಗಳ ಲೆಕ್ಕ ನಡೆಯಲಿದೆ. ಈ ಮೊದಲು ಮೇ 17ರಂದು ಆನೆ ಗಣತಿಗೆ ಉದ್ದೇಶಿಸಲಾಗಿತ್ತು. ಆದರೆ, ಕೇರಳ ಸರ್ಕಾರದ ವಿನಂತಿಯ ಮೇರೆಗೆ ಒಂದು ವಾರ ವಿಸ್ತರಿಸಲಾಗಿದ್ದು, ಮೇ 23ರಿಂದ ನಾಲ್ಕು ರಾಜ್ಯದಲ್ಲಿ ಏಕಕಾಲದಲ್ಲಿ ಈ ಕಾರ್ಯ ಆರಂಭವಾಗಲಿದೆ.

Advertisement
Advertisement

ಮೊದಲ ದಿನ ನೇರ ಆನೆ ಗಣತಿ ಮಾಡಲಾಗುತ್ತದೆ. ಎರಡನೇ ದಿನ ಲದ್ದಿ ಗಣತಿ, ಮೂರನೇ ದಿನ ವಾಟರ್​ಹೋಲ್​ ಗಣತಿ ನಡೆಸಲು ತೀರ್ಮಾನಿಸಲಾಗಿದೆ. ನಾಲ್ಕು ರಾಜ್ಯಗಳ ಅರಣ್ಯ ಇಲಾಖೆಗಳ ಮುಖ್ಯಸ್ಥರು ಮಂಗಳವಾರ ಆನ್‌ಲೈನ್ ಮೂಲಕ ಸಭೆ ನಡೆಸಿ ಗಣತಿ ವಿಧಾನದ ಕುರಿತು ಚರ್ಚಿಸಿದ್ದಾರೆ.

Advertisement

ತಮಿಳುನಾಡು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ, ಕಳೆದ ವರ್ಷದ ವಿಧಾನವನ್ನೇ ಈ ಬಾರಿಯೂ ಅನುಸರಿಸಲಾಗುವುದು. ಗಣತಿಯಲ್ಲಿ ಭಾಗಿಯಾಗುತ್ತಿರುವ ಅರಣ್ಯ ಸಿಬ್ಬಂದಿ ಮತ್ತು ಸ್ವಯಂ ಕಾರ್ಯಕರ್ತರ ಸಂಖ್ಯೆಯನ್ನು ಮುಂದಿನ ದಿನಗಳಲ್ಲಿ ಗುರುತಿಸಲಾಗುತ್ತದೆ. ನಿಗದಿತ ಪ್ರದೇಶದಲ್ಲಿ ಸುಮಾರು 15 ಕಿ.ಮೀ ದೂರವನ್ನು ತಂಡದ ನಾಲ್ಕರಿಂದ ಐದು ಸದಸ್ಯರು ಕ್ರಮಿಸಿ ಗಣತಿ ಮಾಡಲಿದ್ದಾರೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕಾಲ್ನಡಿಗೆಯಲ್ಲೇ ಈ ಕಾರ್ಯ ನಡೆಸುತ್ತಾರೆ. ಈ ವೇಳೆ ಆನೆಯ ವಯಸ್ಸು ಮತ್ತು ಲಿಂಗವನ್ನು ನೇರವಾಗಿ ನಿರ್ಣಯಿಸಲಿದ್ದಾರೆ. ಆನೆಗಳ ಬಾಹ್ಯ ಗಾಯಗಳು, ದಂತದ ಗಾತ್ರ ಮತ್ತು ಅದರ ಮುಖ್ನಾ (ದಂತವಿಲ್ಲದ ಗಂಡು ಆನೆ) ಸಂಖ್ಯೆಯನ್ನೂ ಪತ್ತೆ ಮಾಡಲಿದ್ದಾರೆ. ಆನೆಗಳ ನಡುವಿನ ವ್ಯತ್ಯಾಸವನ್ನು ಲದ್ದಿಯ ಮೂಲಕ ನಿರ್ಣಯಿಸಲಾಗುತ್ತದೆ. ಈ ತಂಡವು ಆನೆಯ ನಡವಳಿಕೆ ಮತ್ತು ಚಲನವಲನಗಳನ್ನೂ ಸಹ ಅಧ್ಯಯನ ಮಾಡುತ್ತದೆ.

ಕಳೆದ ವರ್ಷ ದಕ್ಷಿಣ ರಾಜ್ಯಗಳು ಒಟ್ಟಾಗಿ ಮೊದಲ ಬಾರಿಗೆ ಆನೆ ಗಣತಿ ನಡೆಸಿದ್ದವು. ಈ ಗಣತಿ 2023ರ ಮೇ 17ರಿಂದ ಮೇ 19ರವರೆಗೆ ಸಾಗಿತ್ತು. ಒಟ್ಟು 2,961 ಆನೆಗಳು ಕಂಡುಬಂದಿದ್ದವು. 2017ರ ಗಣತಿಗೆ ಹೋಲಿಸಿದಾಗ ಆನೆಗಳ ಸಂಖ್ಯೆ ಹೆಚ್ಚಾಗಿತ್ತು. ಇದಾದ ಬಳಿಕ ನಾಲ್ಕು ರಾಜ್ಯಗಳು ತಮ್ಮ ರಾಜ್ಯದಲ್ಲಿರುವ ಆನೆಗಳ ಸಂಖ್ಯೆಯನ್ನು ಬಿಡುಗಡೆ ಮಾಡಿದ್ದವು ಎಂದು ಮಾಹಿತಿ ನೀಡಿದ್ದಾರೆ.

Advertisement
  • ಅಂತರ್ಜಾಲ ಮಾಹಿತಿ(IANS​)
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಡ್ರಾಗನ್‌ ಫ್ರುಟ್‌ ಬೆಳೆದು ಮಾರುಕಟ್ಟೆ ಕಂಡುಕೊಂಡ ಕೃಷಿಕ | ಸಣ್ಣ ರೈತರು ಮಾರುಕಟ್ಟೆಗೆ ಚಿಂತಿಸಬೇಕಿಲ್ಲ…!

ಡ್ರಾಗನ್‌ ಫ್ರುಟ್‌ ಕೃಷಿ ಮಾಡಿ ಸ್ವತ: ಮಾರುಕಟ್ಟೆಯನ್ನೂ ಕಂಡುಕೊಂಡು ಮಾರಾಟವನ್ನೂ ಮಾಡುವ ಮೂಲಕ…

9 hours ago

ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ | ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿ ಆದೇಶ |

ಮುಂಗಾರು ಮಳೆ ಚುರುಕಾಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳು ಸಂಭವಿಸುತ್ತಿರುತ್ತವೆ. ಸಾರ್ವಜನಿಕರ ಹಿತಾಸಕ್ತಿಯನ್ನು…

11 hours ago

ಕುಸಿಯುತ್ತಿರುವ ಸೇತುವೆಗಳು ಮತ್ತು ಕಬ್ಬಿಣ ಹಾಗು ಸಿಮೆಂಟಿನ ಜಾಹೀರಾತುಗಳು…!

ಭೂಕಂಪಕ್ಕೂ(Earthquake) ಕುಗ್ಗಲ್ಲ, ಚಂಡಮಾರುತಕ್ಕೂ(Cyclone) ಜಗ್ಗಲ್ಲ, ನಮ್ಮ ಕಂಪನಿಯ ಕಬ್ಬಿಣ(Iron) ಮತ್ತು ಉಕ್ಕು(Steel). ಹಾಗೆಯೇ…

18 hours ago

ನಿಮಗಿದು ಗೊತ್ತೇ…? | RO ಹಾಗೂ ಬಾಟಲಿ ನೀರುಗಳನ್ನು ತ್ಯಜಿಸಿ ಮನೆಯಲ್ಲಿ ಸಜೀವಗೊಳಿಸಿದ ನೀರನ್ನು ಬಳಸಿ

"ಜಲವೇ ಜೀವನ," "ಜೀವ ಜಲ," "ಜಲವೇ ಅಮೃತ," "ಅಮೃತ ಜಲ"(Water) ಇತ್ಯಾದಿಯಾಗಿ ನೀರಿನ…

18 hours ago

ಪಶುಗಳ ಪಾಲಿನ “ಆನಂದ” ಡಾಕ್ಟರ್ ಆನಂದ್ | ಪಶು ವೈದ್ಯಕೀಯ ಸಚಿವಾಲಯ ಮಲೆನಾಡಿನ ಕಡೆಯಲ್ಲಿ ವೈದ್ಯರ ಸಂಖ್ಯೆ ಹೆಚ್ಚಿಸಬೇಕು |

ಗ್ರಾಮೀಣ ಭಾಗದಲ್ಲಿ ಪಶು ಸೇರಿದಂತೆ ಇತರ ಸಾಕುಪ್ರಾಣಿಗಳಿಗೆ ಚಿಕಿತ್ಸೆ ನೀಡಲು ಸೂಕ್ತ ವೈದ್ಯರ…

19 hours ago

ಕೀನ್ಯಾದಲ್ಲಿ ಕಾಗೆಗಳನ್ನು ಕೊಲ್ಲಲು ಆದೇಶ | ಈಗ ಅಮೇರಿಕಾದಲ್ಲಿ ನಾಲ್ಕೂವರೆ ಲಕ್ಷ ಗೂಬೆಗಳನ್ನು ಕೊಲ್ಲಲು ಆದೇಶ..! | ಕಾರಣ ಏನು ಗೊತ್ತಾ..?

ಅಮೇರಿಕಾದ ವನ್ಯಜೀವಿ ಅಧಿಕಾರಿಗಳು ಅಳಿವಿನಂಚಿನಲ್ಲಿರುವ ಮಚ್ಚೆಯುಳ್ಳ ಗೂಬೆಗಳನ್ನು ಉಳಿಸಲು ನಿಷೇಧಿತ ಗೂಬೆಗಳನ್ನು ಕೊಲ್ಲಲು…

19 hours ago