Advertisement
MIRROR FOCUS

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

Share

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು ರಾಜ್ಯಗಳು ಎರಡನೇ ಆನೆ ಗಣತಿಯನ್ನು ಇದೇ ಮೇ 23ರಿಂದ ಪ್ರಾರಂಭಿಸಲಿವೆ. ಮೂರು ದಿನ ನಡೆಯುವ ಈ ಗಣತಿಯಲ್ಲಿ ವಿವಿಧ ಮಾದರಿಗಳನ್ನು ಅನುಸರಿಸಿ ಆನೆಗಳ ಲೆಕ್ಕ ನಡೆಯಲಿದೆ. ಈ ಮೊದಲು ಮೇ 17ರಂದು ಆನೆ ಗಣತಿಗೆ ಉದ್ದೇಶಿಸಲಾಗಿತ್ತು. ಆದರೆ, ಕೇರಳ ಸರ್ಕಾರದ ವಿನಂತಿಯ ಮೇರೆಗೆ ಒಂದು ವಾರ ವಿಸ್ತರಿಸಲಾಗಿದ್ದು, ಮೇ 23ರಿಂದ ನಾಲ್ಕು ರಾಜ್ಯದಲ್ಲಿ ಏಕಕಾಲದಲ್ಲಿ ಈ ಕಾರ್ಯ ಆರಂಭವಾಗಲಿದೆ.

Advertisement

ಮೊದಲ ದಿನ ನೇರ ಆನೆ ಗಣತಿ ಮಾಡಲಾಗುತ್ತದೆ. ಎರಡನೇ ದಿನ ಲದ್ದಿ ಗಣತಿ, ಮೂರನೇ ದಿನ ವಾಟರ್​ಹೋಲ್​ ಗಣತಿ ನಡೆಸಲು ತೀರ್ಮಾನಿಸಲಾಗಿದೆ. ನಾಲ್ಕು ರಾಜ್ಯಗಳ ಅರಣ್ಯ ಇಲಾಖೆಗಳ ಮುಖ್ಯಸ್ಥರು ಮಂಗಳವಾರ ಆನ್‌ಲೈನ್ ಮೂಲಕ ಸಭೆ ನಡೆಸಿ ಗಣತಿ ವಿಧಾನದ ಕುರಿತು ಚರ್ಚಿಸಿದ್ದಾರೆ.

ತಮಿಳುನಾಡು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ, ಕಳೆದ ವರ್ಷದ ವಿಧಾನವನ್ನೇ ಈ ಬಾರಿಯೂ ಅನುಸರಿಸಲಾಗುವುದು. ಗಣತಿಯಲ್ಲಿ ಭಾಗಿಯಾಗುತ್ತಿರುವ ಅರಣ್ಯ ಸಿಬ್ಬಂದಿ ಮತ್ತು ಸ್ವಯಂ ಕಾರ್ಯಕರ್ತರ ಸಂಖ್ಯೆಯನ್ನು ಮುಂದಿನ ದಿನಗಳಲ್ಲಿ ಗುರುತಿಸಲಾಗುತ್ತದೆ. ನಿಗದಿತ ಪ್ರದೇಶದಲ್ಲಿ ಸುಮಾರು 15 ಕಿ.ಮೀ ದೂರವನ್ನು ತಂಡದ ನಾಲ್ಕರಿಂದ ಐದು ಸದಸ್ಯರು ಕ್ರಮಿಸಿ ಗಣತಿ ಮಾಡಲಿದ್ದಾರೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕಾಲ್ನಡಿಗೆಯಲ್ಲೇ ಈ ಕಾರ್ಯ ನಡೆಸುತ್ತಾರೆ. ಈ ವೇಳೆ ಆನೆಯ ವಯಸ್ಸು ಮತ್ತು ಲಿಂಗವನ್ನು ನೇರವಾಗಿ ನಿರ್ಣಯಿಸಲಿದ್ದಾರೆ. ಆನೆಗಳ ಬಾಹ್ಯ ಗಾಯಗಳು, ದಂತದ ಗಾತ್ರ ಮತ್ತು ಅದರ ಮುಖ್ನಾ (ದಂತವಿಲ್ಲದ ಗಂಡು ಆನೆ) ಸಂಖ್ಯೆಯನ್ನೂ ಪತ್ತೆ ಮಾಡಲಿದ್ದಾರೆ. ಆನೆಗಳ ನಡುವಿನ ವ್ಯತ್ಯಾಸವನ್ನು ಲದ್ದಿಯ ಮೂಲಕ ನಿರ್ಣಯಿಸಲಾಗುತ್ತದೆ. ಈ ತಂಡವು ಆನೆಯ ನಡವಳಿಕೆ ಮತ್ತು ಚಲನವಲನಗಳನ್ನೂ ಸಹ ಅಧ್ಯಯನ ಮಾಡುತ್ತದೆ.

ಕಳೆದ ವರ್ಷ ದಕ್ಷಿಣ ರಾಜ್ಯಗಳು ಒಟ್ಟಾಗಿ ಮೊದಲ ಬಾರಿಗೆ ಆನೆ ಗಣತಿ ನಡೆಸಿದ್ದವು. ಈ ಗಣತಿ 2023ರ ಮೇ 17ರಿಂದ ಮೇ 19ರವರೆಗೆ ಸಾಗಿತ್ತು. ಒಟ್ಟು 2,961 ಆನೆಗಳು ಕಂಡುಬಂದಿದ್ದವು. 2017ರ ಗಣತಿಗೆ ಹೋಲಿಸಿದಾಗ ಆನೆಗಳ ಸಂಖ್ಯೆ ಹೆಚ್ಚಾಗಿತ್ತು. ಇದಾದ ಬಳಿಕ ನಾಲ್ಕು ರಾಜ್ಯಗಳು ತಮ್ಮ ರಾಜ್ಯದಲ್ಲಿರುವ ಆನೆಗಳ ಸಂಖ್ಯೆಯನ್ನು ಬಿಡುಗಡೆ ಮಾಡಿದ್ದವು ಎಂದು ಮಾಹಿತಿ ನೀಡಿದ್ದಾರೆ.

  • ಅಂತರ್ಜಾಲ ಮಾಹಿತಿ(IANS​)
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

8 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

8 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

9 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

9 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

9 hours ago

ಚಿಕ್ಕಮಗಳೂರು : ಅರಣ್ಯ ಸಂರಕ್ಷಣೆಗೆ ಇಲಾಖೆ ಸನ್ನದ್ಧ; 970 ಕಿ.ಮೀ. ‘ಬೆಂಕಿ ಪಥ’ ನಿರ್ಮಾಣ

ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…

9 hours ago