ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು ಅಸಹಜವಾಗಿ ಸಾವಿಗೀಡಾಗಿದ್ದು, ಪಿಸಿಸಿಎಫ್ ನೇತೃತ್ವದ ತಂಡ ತನಿಖೆ ನಡೆಸಲಿದೆ ಎಂದು ಪರಿಸರ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ಘಟನೆ ಅರಣ್ಯ ಇಲಾಖೆ ಮತ್ತು ಪ್ರಾಣಿ ಪ್ರೇಮಿಗಳಲ್ಲಿ ಆತಂಕ ಉಂಟು ಮಾಡಿದ್ದು, ಕಿಡಿಗೇಡಿಗಳು ವಿಷಪ್ರಸನ ಮಾಡಿ ಸಾಯಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ತನಿಖೆಗೆ ಆದೇಶ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯ ವನ್ಯಧಾಮದಲ್ಲಿ ಅರಣ್ಯ ಸಿಬ್ಬಂದಿ ಬೀಟ್ಗೆ ತೆರಳಿದ್ದಾಗ ಹುಲಿಗಳು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…