ಕಂಪನಿಗಾಗಿ 40, ನಿಮಗಾಗಿ 30 ಗಂಟೆ ಕೆಲಸ ಮಾಡಿ | ಟೆಕ್ ಮಹೀಂದ್ರಾ ಸಿಇಒ ಗುರ್ನಾನಿ ಹೇಳಿದ್ದು ಹೀಗೆ… |

November 1, 2023
8:54 PM
ನಿಮ್ಮ ಕ್ಷೇತ್ರದಲ್ಲಿ ನೈಪುಣ್ಯತೆ ಸಾಧಿಸಲು 10,000 ಗಂಟೆಗಳನ್ನು ವಿನಿಯೋಗಿಸಿ, ಹಗಲು ರಾತ್ರಿ ಕಷ್ಟ ಪಟ್ಟು ಕೆಲಸ ಮಾಡಿ, ಪರಿಣತಿಯನ್ನು ಸಾಧಿಸಿ'' ಎಂದು ಗುರ್ನಾನಿ ಅವರು ಎಕ್ಸ್‌ನಲ್ಲಿ(ಟ್ವಿಟರ್ ) ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ.

ಇನ್ಫೋಸಿಸ್​ನ ಮಾಜಿ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರು ನೀಡಿರುವ ವಾರದ 70 ಗಂಟೆ ಕೆಲಸದ ಬಗೆಗಿನ ಸಲಹೆ ವಿವಿಧ ಆಯಾಮಗಳಿಂದ ಚರ್ಚೆ ನಡೆಯುತ್ತಲೇ ಇದೆ. ಈ ನಡುವೆಯೇ, ಇನ್ನೊಬ್ಬ ಉದ್ಯಮ ದಿಗ್ಗಜ , ಟೆಕ್ ಮಹೀಂದ್ರ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಸಿಪಿ ಗುರ್ನಾನಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಸಿ ಪಿ ಗುರ್ನಾನಿ

ಟೆಕ್ ಮಹೀಂದ್ರ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಸಿಪಿ ಗುರ್ನಾನಿ ಅವರು ಸಾಮಾಜಿಕ ಜಾಲತಾಣ ಎಕ್(X), ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿ, ಬಹುಶ:  ನಾರಾಯಣಮೂರ್ತಿ ಅವರು 70 ಗಂಟೆ ಕೆಲಸ ಮಾಡಬೇಕೆಂದು ಹೇಳಿದ್ದು ನಿಮಗಾಗಿ, ಕಂಪನಿಗಾಗಿ ಮತ್ತು ದೇಶಕ್ಕಾಗಿ ಎಂಬ ಹೊಸ ವಿವರಣೆ ನೀಡಿದ್ದಾರೆ.ಕಂಪನಿಗಾಗಿ 70 ಗಂಟೆ ಕೆಲಸ ಮಾಡಿ ಎಂದು  ಹೇಳಿಲ್ಲ. ಕಂಪನಿಗೆ 40 ಗಂಟೆ ಕೆಲಸ ಮಾಡಿ, ನಿಮಗಾಗಿ 30 ಗಂಟೆ ಕೆಲಸ ಮಾಡಿ ಹೇಳಿರಬೇಕು ಹೇಳಿದ್ದಾರೆ.ನಿಮ್ಮ ಕ್ಷೇತ್ರದಲ್ಲಿ ನೈಪುಣ್ಯತೆ ಸಾಧಿಸಲು 10,000 ಗಂಟೆಗಳನ್ನು ವಿನಿಯೋಗಿಸಿ, ಹಗಲು ರಾತ್ರಿ ಕಷ್ಟ ಪಟ್ಟು ಕೆಲಸ ಮಾಡಿ, ಪರಿಣತಿಯನ್ನು ಸಾಧಿಸಿ” ಎಂದು ಗುರ್ನಾನಿ ಅವರು ಎಕ್ಸ್‌ನಲ್ಲಿ(ಟ್ವಿಟರ್ ) ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ. ಈ ಮೂಲಕ ಯುವಜನರಿಗೆ  ಪರಿಶ್ರಮಿಗಳಾಗುವಂತೆ ಸಲಹೆ ನೀಡಿದ್ದಾರೆ.

ನೀವು 10 ಗಂಟೆ ಕೆಲಸ ಮಾಡಲು ಮುಂದಾದರೆ, ನಿಮ್ಮ ವ್ಯಕ್ತಿತ್ವ ಇತರರಿಗಿಂತಲೂ ಭಿನ್ನವಾಗುತ್ತದೆ.  ದೇಶದ ಪಥವೂ ಬದಲಾಗುತ್ತದೆ, ಎಂದೂ ಅವರು ಹೇಳಿದ್ದಾರೆ. ಕಠಿಣ ಪರಿಶ್ರಮವು ಯಶಸ್ಸಿನ ಬೆನ್ನೆಲುಬು, ಆದರೆ ವಾರಕ್ಕೆ 70 ಗಂಟೆಗಳ ಕೆಲಸ ಎನ್ನುವುದು ಕೇವಲ ಗಡಿಯಾರದ ಗಂಟೆಗಳ ಕುರಿತಾದ ಸಂಗತಿಯಲ್ಲ. ಆ ಗಂಟೆಗಳಲ್ಲಿ ವ್ಯಕ್ತಿಯು ಕೆಲಸದಲ್ಲಿ ತೋರಿಸುವ ಉತ್ಸಾಹ ಮತ್ತು ಗುಣಮಟ್ಟ ಬಹಳ ಮುಖ್ಯ, ಗಂಟೆಗಳ ಕೆಲಸ ಎನ್ನುವ ಸವಾಲನ್ನು ಯುವಜನರು ಸ್ವೀಕರಿಸಬೇಕು, ಇದರಿಂದ ವೇತನದ ಬೆಳವಣಿಗೆ ಮತ್ತು ಕಲಿಕೆಯು ಸಾಧ್ಯವಾಗುತ್ತದೆ ಎಂದು ಮಾರಿಕೊ ಗ್ರೂಪ್ ಅಧ್ಯಕ್ಷ ಹರ್ಟ್ ಮಾರಿವಾಲಾ ಕೂಡಾ ಹೇಳಿದ್ದಾರೆ.

ಟೆಕ್ ಮಹೀಂದ್ರ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಸಿಪಿ ಗುರ್ನಾನಿ ಅವರು ಸಾಮಾಜಿಕ ಜಾಲತಾಣ ಎಕ್(X), ನಲ್ಲಿ ಅಭಿಪ್ರಾಯ ಹೀಗಿದೆ…

Have been reading about the outrage to Narayana Murthy’s 70 hour work statement.. , I believe when he talks of work, it’s not limited to the company.. it extends to your self and to your country..  He hasn’t said work 70 hours for the company – work 40 hours for the company but work 30 hours for yourself.. Invest the 10,000 hours that makes one a master in one’s subject.. burn the midnight oil and become an expert in your field.  THAT is 70 hours of work which can differentiate you as a youngster and in the process your country..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್
ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?
May 16, 2026
9:45 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror