ಇನ್ಫೋಸಿಸ್ನ ಮಾಜಿ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರು ನೀಡಿರುವ ವಾರದ 70 ಗಂಟೆ ಕೆಲಸದ ಬಗೆಗಿನ ಸಲಹೆ ವಿವಿಧ ಆಯಾಮಗಳಿಂದ ಚರ್ಚೆ ನಡೆಯುತ್ತಲೇ ಇದೆ. ಈ ನಡುವೆಯೇ, ಇನ್ನೊಬ್ಬ ಉದ್ಯಮ ದಿಗ್ಗಜ , ಟೆಕ್ ಮಹೀಂದ್ರ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಸಿಪಿ ಗುರ್ನಾನಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಟೆಕ್ ಮಹೀಂದ್ರ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಸಿಪಿ ಗುರ್ನಾನಿ ಅವರು ಸಾಮಾಜಿಕ ಜಾಲತಾಣ ಎಕ್(X), ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿ, ಬಹುಶ: ನಾರಾಯಣಮೂರ್ತಿ ಅವರು 70 ಗಂಟೆ ಕೆಲಸ ಮಾಡಬೇಕೆಂದು ಹೇಳಿದ್ದು ನಿಮಗಾಗಿ, ಕಂಪನಿಗಾಗಿ ಮತ್ತು ದೇಶಕ್ಕಾಗಿ ಎಂಬ ಹೊಸ ವಿವರಣೆ ನೀಡಿದ್ದಾರೆ.ಕಂಪನಿಗಾಗಿ 70 ಗಂಟೆ ಕೆಲಸ ಮಾಡಿ ಎಂದು ಹೇಳಿಲ್ಲ. ಕಂಪನಿಗೆ 40 ಗಂಟೆ ಕೆಲಸ ಮಾಡಿ, ನಿಮಗಾಗಿ 30 ಗಂಟೆ ಕೆಲಸ ಮಾಡಿ ಹೇಳಿರಬೇಕು ಹೇಳಿದ್ದಾರೆ.ನಿಮ್ಮ ಕ್ಷೇತ್ರದಲ್ಲಿ ನೈಪುಣ್ಯತೆ ಸಾಧಿಸಲು 10,000 ಗಂಟೆಗಳನ್ನು ವಿನಿಯೋಗಿಸಿ, ಹಗಲು ರಾತ್ರಿ ಕಷ್ಟ ಪಟ್ಟು ಕೆಲಸ ಮಾಡಿ, ಪರಿಣತಿಯನ್ನು ಸಾಧಿಸಿ” ಎಂದು ಗುರ್ನಾನಿ ಅವರು ಎಕ್ಸ್ನಲ್ಲಿ(ಟ್ವಿಟರ್ ) ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ. ಈ ಮೂಲಕ ಯುವಜನರಿಗೆ ಪರಿಶ್ರಮಿಗಳಾಗುವಂತೆ ಸಲಹೆ ನೀಡಿದ್ದಾರೆ.
ನೀವು 10 ಗಂಟೆ ಕೆಲಸ ಮಾಡಲು ಮುಂದಾದರೆ, ನಿಮ್ಮ ವ್ಯಕ್ತಿತ್ವ ಇತರರಿಗಿಂತಲೂ ಭಿನ್ನವಾಗುತ್ತದೆ. ದೇಶದ ಪಥವೂ ಬದಲಾಗುತ್ತದೆ, ಎಂದೂ ಅವರು ಹೇಳಿದ್ದಾರೆ. ಕಠಿಣ ಪರಿಶ್ರಮವು ಯಶಸ್ಸಿನ ಬೆನ್ನೆಲುಬು, ಆದರೆ ವಾರಕ್ಕೆ 70 ಗಂಟೆಗಳ ಕೆಲಸ ಎನ್ನುವುದು ಕೇವಲ ಗಡಿಯಾರದ ಗಂಟೆಗಳ ಕುರಿತಾದ ಸಂಗತಿಯಲ್ಲ. ಆ ಗಂಟೆಗಳಲ್ಲಿ ವ್ಯಕ್ತಿಯು ಕೆಲಸದಲ್ಲಿ ತೋರಿಸುವ ಉತ್ಸಾಹ ಮತ್ತು ಗುಣಮಟ್ಟ ಬಹಳ ಮುಖ್ಯ, ಗಂಟೆಗಳ ಕೆಲಸ ಎನ್ನುವ ಸವಾಲನ್ನು ಯುವಜನರು ಸ್ವೀಕರಿಸಬೇಕು, ಇದರಿಂದ ವೇತನದ ಬೆಳವಣಿಗೆ ಮತ್ತು ಕಲಿಕೆಯು ಸಾಧ್ಯವಾಗುತ್ತದೆ ಎಂದು ಮಾರಿಕೊ ಗ್ರೂಪ್ ಅಧ್ಯಕ್ಷ ಹರ್ಟ್ ಮಾರಿವಾಲಾ ಕೂಡಾ ಹೇಳಿದ್ದಾರೆ.
ಟೆಕ್ ಮಹೀಂದ್ರ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಸಿಪಿ ಗುರ್ನಾನಿ ಅವರು ಸಾಮಾಜಿಕ ಜಾಲತಾಣ ಎಕ್(X), ನಲ್ಲಿ ಅಭಿಪ್ರಾಯ ಹೀಗಿದೆ…
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…