ಇನ್ಫೋಸಿಸ್ನ ಮಾಜಿ ಮುಖ್ಯಸ್ಥ ಎನ್ ಆರ್ ನಾರಾಯಣಮೂರ್ತಿ ಅವರು ನೀಡಿರುವ ವಾರದ 70 ಗಂಟೆ ಕೆಲಸದ ಬಗೆಗಿನ ಸಲಹೆ ವಿವಿಧ ಆಯಾಮಗಳಿಂದ ಚರ್ಚೆ ನಡೆಯುತ್ತಲೇ ಇದೆ. ಈ ನಡುವೆಯೇ, ಇನ್ನೊಬ್ಬ ಉದ್ಯಮ ದಿಗ್ಗಜ , ಟೆಕ್ ಮಹೀಂದ್ರ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಸಿಪಿ ಗುರ್ನಾನಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಟೆಕ್ ಮಹೀಂದ್ರ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಸಿಪಿ ಗುರ್ನಾನಿ ಅವರು ಸಾಮಾಜಿಕ ಜಾಲತಾಣ ಎಕ್(X), ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿ, ಬಹುಶ: ನಾರಾಯಣಮೂರ್ತಿ ಅವರು 70 ಗಂಟೆ ಕೆಲಸ ಮಾಡಬೇಕೆಂದು ಹೇಳಿದ್ದು ನಿಮಗಾಗಿ, ಕಂಪನಿಗಾಗಿ ಮತ್ತು ದೇಶಕ್ಕಾಗಿ ಎಂಬ ಹೊಸ ವಿವರಣೆ ನೀಡಿದ್ದಾರೆ.ಕಂಪನಿಗಾಗಿ 70 ಗಂಟೆ ಕೆಲಸ ಮಾಡಿ ಎಂದು ಹೇಳಿಲ್ಲ. ಕಂಪನಿಗೆ 40 ಗಂಟೆ ಕೆಲಸ ಮಾಡಿ, ನಿಮಗಾಗಿ 30 ಗಂಟೆ ಕೆಲಸ ಮಾಡಿ ಹೇಳಿರಬೇಕು ಹೇಳಿದ್ದಾರೆ.ನಿಮ್ಮ ಕ್ಷೇತ್ರದಲ್ಲಿ ನೈಪುಣ್ಯತೆ ಸಾಧಿಸಲು 10,000 ಗಂಟೆಗಳನ್ನು ವಿನಿಯೋಗಿಸಿ, ಹಗಲು ರಾತ್ರಿ ಕಷ್ಟ ಪಟ್ಟು ಕೆಲಸ ಮಾಡಿ, ಪರಿಣತಿಯನ್ನು ಸಾಧಿಸಿ” ಎಂದು ಗುರ್ನಾನಿ ಅವರು ಎಕ್ಸ್ನಲ್ಲಿ(ಟ್ವಿಟರ್ ) ತಮ್ಮ ಅಭಿಪ್ರಾಯ ದಾಖಲಿಸಿದ್ದಾರೆ. ಈ ಮೂಲಕ ಯುವಜನರಿಗೆ ಪರಿಶ್ರಮಿಗಳಾಗುವಂತೆ ಸಲಹೆ ನೀಡಿದ್ದಾರೆ.
ನೀವು 10 ಗಂಟೆ ಕೆಲಸ ಮಾಡಲು ಮುಂದಾದರೆ, ನಿಮ್ಮ ವ್ಯಕ್ತಿತ್ವ ಇತರರಿಗಿಂತಲೂ ಭಿನ್ನವಾಗುತ್ತದೆ. ದೇಶದ ಪಥವೂ ಬದಲಾಗುತ್ತದೆ, ಎಂದೂ ಅವರು ಹೇಳಿದ್ದಾರೆ. ಕಠಿಣ ಪರಿಶ್ರಮವು ಯಶಸ್ಸಿನ ಬೆನ್ನೆಲುಬು, ಆದರೆ ವಾರಕ್ಕೆ 70 ಗಂಟೆಗಳ ಕೆಲಸ ಎನ್ನುವುದು ಕೇವಲ ಗಡಿಯಾರದ ಗಂಟೆಗಳ ಕುರಿತಾದ ಸಂಗತಿಯಲ್ಲ. ಆ ಗಂಟೆಗಳಲ್ಲಿ ವ್ಯಕ್ತಿಯು ಕೆಲಸದಲ್ಲಿ ತೋರಿಸುವ ಉತ್ಸಾಹ ಮತ್ತು ಗುಣಮಟ್ಟ ಬಹಳ ಮುಖ್ಯ, ಗಂಟೆಗಳ ಕೆಲಸ ಎನ್ನುವ ಸವಾಲನ್ನು ಯುವಜನರು ಸ್ವೀಕರಿಸಬೇಕು, ಇದರಿಂದ ವೇತನದ ಬೆಳವಣಿಗೆ ಮತ್ತು ಕಲಿಕೆಯು ಸಾಧ್ಯವಾಗುತ್ತದೆ ಎಂದು ಮಾರಿಕೊ ಗ್ರೂಪ್ ಅಧ್ಯಕ್ಷ ಹರ್ಟ್ ಮಾರಿವಾಲಾ ಕೂಡಾ ಹೇಳಿದ್ದಾರೆ.
ಟೆಕ್ ಮಹೀಂದ್ರ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಒ ಸಿಪಿ ಗುರ್ನಾನಿ ಅವರು ಸಾಮಾಜಿಕ ಜಾಲತಾಣ ಎಕ್(X), ನಲ್ಲಿ ಅಭಿಪ್ರಾಯ ಹೀಗಿದೆ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…