Advertisement
MIRROR FOCUS

ಮಾವಿಗೆ ಸಿಂಪಡಿಸಿದ ಔಷಧಿ ವಾಸನೆಗೆ 40 ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರು ಅಸ್ವಸ್ಥ…?

Share

ನಾವು ಬೆಳೆದ ಬೆಳೆ(Crop) ಚೆನ್ನಾಗಿ ಬರಬೇಕು. ಯಾವುದೇ ಕೀಟ(Insect), ಹುಳ, ಹಕ್ಕಿಗಳಿಂದ (Birds) ಬಾಧೆಗೆ ಒಳಗಾಗಬಾರದು ಅನ್ನುವುದು ಪ್ರತಿಯೊಬ್ಬ ರೈತನ(Farmer) ಆಸೆ. ಯಾವ ರೈತನೂ ತನಗೆ ಬರುವ ಫಸಲನ್ನು ಕಳೆದುಕೊಳ್ಳಲು ಇಷ್ಟಪಡುವುದಿಲ್ಲ. ಇದಕ್ಕೆ ಅವನು ಮೊರೆ ಹೋಗೋದು ರಾಸಾಯನಿಕ(Chemical) ಸಿಂಪಡಣೆ(Pesticides). ಇದರಿಂದ ಆತನ ಬೆಳೆಯೇನೋ ಚೆನ್ನಾಗಿ ಬರಬಹುದು. ಆದರೆ ಅದನ್ನು ತಿಂದ ಮಾನವ(Human), ಹುಳು ಹುಪ್ಪಟೆ, ಪಕ್ಷಿಗಳು ತೊಂದರೆ ಅನುಭವಿಸಬೇಕಾಗುತ್ತದೆ. ರೈತ ಹೀಗೆ ಮಾಡಿ ಏನೆಲ್ಲ ಅನಾಹುತ ಸಂಭವಿಸಬಹುದು..?  ಇದೊಂದು ಉದಾಹರಣೆ ಇದೆ.

ಶಾಲೆಗೆ(School)) ಹೊಂದಿಕೊಂಡಂತಿರುವ ಮಾವಿನ ತೋಟಕ್ಕೆ(Mango Farm) ಸಿಂಪಡಿಸಿದ ಔಷಧಿಯ ವಾಸನೆಯಿಂದ 40 ವಿದ್ಯಾರ್ಥಿಗಳು(Students), ಇಬ್ಬರು ಶಿಕ್ಷಕರು ಅಸ್ವಸ್ಥರಾದ ಘಟನೆ ತುಮಕೂರು(Tumkuru) ಜಿಲ್ಲೆ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿಯ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅವರೆಲ್ಲಾ ಈಗ ಗುಣಮುಖರಾಗಿದ್ದಾರೆ. ಬುಧವಾರ ಶಾಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿತ್ತು. ಮಧ್ಯಾಹ್ನದ ಊಟಕ್ಕೆ ಇವರು ಮೊಸರನ್ನ ಸೇವಿಸಿದ್ದರು.

ಇದೇ ವೇಳೆ, ಶಾಲೆಗೆ ಹೊಂದಿಕೊಂಡಂತಿರುವ ಮಾವಿನ ತೋಟಕ್ಕೆ ಔಷಧಿಯನ್ನು ಸಿಂಪಡಿಸುತ್ತಿದ್ದರು. ಈ ಸಂದರ್ಭದಲ್ಲಿ ವಾಸನೆ ಉಂಟಾಗಿದ್ದು, ಶಾಲೆಯ ಕಿಟಕಿಗಳನ್ನು ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ನಂತರ, ಮನೆಗೆ ಹೋಗಿ ರಾತ್ರಿ ಊಟ ಮಾಡಿ ಮಲಗಿದರು. ಗುರುವಾರ ಬೆಳಗಿನ ಜಾವ ಇವರಿಗೆ ನಿತ್ರಾಣ, ರಕ್ತಭೇದಿ, ವಾಂತಿ, ತಲೆನೋವು ಸೇರಿ ಹಲವು ಸಮಸ್ಯೆಗಳು ಉಂಟಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಯಿತು.

ಈ ಪ್ರಕರಣದಲ್ಲಿ ಡಿಎಚ್‌ಒ ಡಾ. ಮಂಜುನಾಥ್‌ ಆಸ್ಪತ್ರೆಗೆ ಭೇಟಿ ನೀಡಿದರು. ಬಳಿಕ ಮಾತನಾಡಿ, ಪ್ರಾಥಮಿಕ ವರದಿ ಪ್ರಕಾರ ಆಹಾರದಲ್ಲಿ ವ್ಯತ್ಯಾಸವಾಗಿರುವ ಕಾರಣ ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು , ಕ್ರಿಮಿನಾಶಕದಿಂದಲ್ಲ. ಶಾಲಾ ಮಕ್ಕಳನ್ನು ಹೊರತುಪಡಿಸಿದರೆ ಶಾಲೆಯ ಅಕ್ಕಪಕ್ಕ ವಾಸವಿರುವ ಗ್ರಾಮಸ್ಥರಿಗೆ ಯಾವುದೇ ಸಮಸ್ಯೆಯಾಗಿಲ್ಲ ಬಿಸಿಯೂಟದ ಬದಲು ಮೋಸರನ್ನ ನೀಡಿದ್ದೆ ಘಟನೆಗೆ ಕಾರಣವಾಗಿದೆ. ಶಾಲೆಯ ಆಡಳಿತ ಮಂಡಳಿಯವರು ಹಾಗು ಶಿಕ್ಷಕರು ಪ್ರಕರಣವನ್ನು ಮುಚ್ಚಿಹಾಕಲು ಮಾವಿನ ಗಿಡಗಳಿಗೆ ಔಷಧಿ ಸಿಂಪಡಣೆ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುತ್ತಿರುವುದು ಈಗ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

9 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

9 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

9 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

9 hours ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

10 hours ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

10 hours ago