ನಾವು ಬೆಳೆದ ಬೆಳೆ(Crop) ಚೆನ್ನಾಗಿ ಬರಬೇಕು. ಯಾವುದೇ ಕೀಟ(Insect), ಹುಳ, ಹಕ್ಕಿಗಳಿಂದ (Birds) ಬಾಧೆಗೆ ಒಳಗಾಗಬಾರದು ಅನ್ನುವುದು ಪ್ರತಿಯೊಬ್ಬ ರೈತನ(Farmer) ಆಸೆ. ಯಾವ ರೈತನೂ ತನಗೆ ಬರುವ ಫಸಲನ್ನು ಕಳೆದುಕೊಳ್ಳಲು ಇಷ್ಟಪಡುವುದಿಲ್ಲ. ಇದಕ್ಕೆ ಅವನು ಮೊರೆ ಹೋಗೋದು ರಾಸಾಯನಿಕ(Chemical) ಸಿಂಪಡಣೆ(Pesticides). ಇದರಿಂದ ಆತನ ಬೆಳೆಯೇನೋ ಚೆನ್ನಾಗಿ ಬರಬಹುದು. ಆದರೆ ಅದನ್ನು ತಿಂದ ಮಾನವ(Human), ಹುಳು ಹುಪ್ಪಟೆ, ಪಕ್ಷಿಗಳು ತೊಂದರೆ ಅನುಭವಿಸಬೇಕಾಗುತ್ತದೆ. ರೈತ ಹೀಗೆ ಮಾಡಿ ಏನೆಲ್ಲ ಅನಾಹುತ ಸಂಭವಿಸಬಹುದು..? ಇದೊಂದು ಉದಾಹರಣೆ ಇದೆ.
ಶಾಲೆಗೆ(School)) ಹೊಂದಿಕೊಂಡಂತಿರುವ ಮಾವಿನ ತೋಟಕ್ಕೆ(Mango Farm) ಸಿಂಪಡಿಸಿದ ಔಷಧಿಯ ವಾಸನೆಯಿಂದ 40 ವಿದ್ಯಾರ್ಥಿಗಳು(Students), ಇಬ್ಬರು ಶಿಕ್ಷಕರು ಅಸ್ವಸ್ಥರಾದ ಘಟನೆ ತುಮಕೂರು(Tumkuru) ಜಿಲ್ಲೆ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿಯ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅವರೆಲ್ಲಾ ಈಗ ಗುಣಮುಖರಾಗಿದ್ದಾರೆ. ಬುಧವಾರ ಶಾಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿತ್ತು. ಮಧ್ಯಾಹ್ನದ ಊಟಕ್ಕೆ ಇವರು ಮೊಸರನ್ನ ಸೇವಿಸಿದ್ದರು.
ಇದೇ ವೇಳೆ, ಶಾಲೆಗೆ ಹೊಂದಿಕೊಂಡಂತಿರುವ ಮಾವಿನ ತೋಟಕ್ಕೆ ಔಷಧಿಯನ್ನು ಸಿಂಪಡಿಸುತ್ತಿದ್ದರು. ಈ ಸಂದರ್ಭದಲ್ಲಿ ವಾಸನೆ ಉಂಟಾಗಿದ್ದು, ಶಾಲೆಯ ಕಿಟಕಿಗಳನ್ನು ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ನಂತರ, ಮನೆಗೆ ಹೋಗಿ ರಾತ್ರಿ ಊಟ ಮಾಡಿ ಮಲಗಿದರು. ಗುರುವಾರ ಬೆಳಗಿನ ಜಾವ ಇವರಿಗೆ ನಿತ್ರಾಣ, ರಕ್ತಭೇದಿ, ವಾಂತಿ, ತಲೆನೋವು ಸೇರಿ ಹಲವು ಸಮಸ್ಯೆಗಳು ಉಂಟಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಯಿತು.
ಈ ಪ್ರಕರಣದಲ್ಲಿ ಡಿಎಚ್ಒ ಡಾ. ಮಂಜುನಾಥ್ ಆಸ್ಪತ್ರೆಗೆ ಭೇಟಿ ನೀಡಿದರು. ಬಳಿಕ ಮಾತನಾಡಿ, ಪ್ರಾಥಮಿಕ ವರದಿ ಪ್ರಕಾರ ಆಹಾರದಲ್ಲಿ ವ್ಯತ್ಯಾಸವಾಗಿರುವ ಕಾರಣ ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು , ಕ್ರಿಮಿನಾಶಕದಿಂದಲ್ಲ. ಶಾಲಾ ಮಕ್ಕಳನ್ನು ಹೊರತುಪಡಿಸಿದರೆ ಶಾಲೆಯ ಅಕ್ಕಪಕ್ಕ ವಾಸವಿರುವ ಗ್ರಾಮಸ್ಥರಿಗೆ ಯಾವುದೇ ಸಮಸ್ಯೆಯಾಗಿಲ್ಲ ಬಿಸಿಯೂಟದ ಬದಲು ಮೋಸರನ್ನ ನೀಡಿದ್ದೆ ಘಟನೆಗೆ ಕಾರಣವಾಗಿದೆ. ಶಾಲೆಯ ಆಡಳಿತ ಮಂಡಳಿಯವರು ಹಾಗು ಶಿಕ್ಷಕರು ಪ್ರಕರಣವನ್ನು ಮುಚ್ಚಿಹಾಕಲು ಮಾವಿನ ಗಿಡಗಳಿಗೆ ಔಷಧಿ ಸಿಂಪಡಣೆ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುತ್ತಿರುವುದು ಈಗ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…