MIRROR FOCUS

ಮಾವಿಗೆ ಸಿಂಪಡಿಸಿದ ಔಷಧಿ ವಾಸನೆಗೆ 40 ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರು ಅಸ್ವಸ್ಥ…?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾವು ಬೆಳೆದ ಬೆಳೆ(Crop) ಚೆನ್ನಾಗಿ ಬರಬೇಕು. ಯಾವುದೇ ಕೀಟ(Insect), ಹುಳ, ಹಕ್ಕಿಗಳಿಂದ (Birds) ಬಾಧೆಗೆ ಒಳಗಾಗಬಾರದು ಅನ್ನುವುದು ಪ್ರತಿಯೊಬ್ಬ ರೈತನ(Farmer) ಆಸೆ. ಯಾವ ರೈತನೂ ತನಗೆ ಬರುವ ಫಸಲನ್ನು ಕಳೆದುಕೊಳ್ಳಲು ಇಷ್ಟಪಡುವುದಿಲ್ಲ. ಇದಕ್ಕೆ ಅವನು ಮೊರೆ ಹೋಗೋದು ರಾಸಾಯನಿಕ(Chemical) ಸಿಂಪಡಣೆ(Pesticides). ಇದರಿಂದ ಆತನ ಬೆಳೆಯೇನೋ ಚೆನ್ನಾಗಿ ಬರಬಹುದು. ಆದರೆ ಅದನ್ನು ತಿಂದ ಮಾನವ(Human), ಹುಳು ಹುಪ್ಪಟೆ, ಪಕ್ಷಿಗಳು ತೊಂದರೆ ಅನುಭವಿಸಬೇಕಾಗುತ್ತದೆ. ರೈತ ಹೀಗೆ ಮಾಡಿ ಏನೆಲ್ಲ ಅನಾಹುತ ಸಂಭವಿಸಬಹುದು..?  ಇದೊಂದು ಉದಾಹರಣೆ ಇದೆ.

Advertisement

ಶಾಲೆಗೆ(School)) ಹೊಂದಿಕೊಂಡಂತಿರುವ ಮಾವಿನ ತೋಟಕ್ಕೆ(Mango Farm) ಸಿಂಪಡಿಸಿದ ಔಷಧಿಯ ವಾಸನೆಯಿಂದ 40 ವಿದ್ಯಾರ್ಥಿಗಳು(Students), ಇಬ್ಬರು ಶಿಕ್ಷಕರು ಅಸ್ವಸ್ಥರಾದ ಘಟನೆ ತುಮಕೂರು(Tumkuru) ಜಿಲ್ಲೆ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿಯ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅವರೆಲ್ಲಾ ಈಗ ಗುಣಮುಖರಾಗಿದ್ದಾರೆ. ಬುಧವಾರ ಶಾಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿತ್ತು. ಮಧ್ಯಾಹ್ನದ ಊಟಕ್ಕೆ ಇವರು ಮೊಸರನ್ನ ಸೇವಿಸಿದ್ದರು.

ಇದೇ ವೇಳೆ, ಶಾಲೆಗೆ ಹೊಂದಿಕೊಂಡಂತಿರುವ ಮಾವಿನ ತೋಟಕ್ಕೆ ಔಷಧಿಯನ್ನು ಸಿಂಪಡಿಸುತ್ತಿದ್ದರು. ಈ ಸಂದರ್ಭದಲ್ಲಿ ವಾಸನೆ ಉಂಟಾಗಿದ್ದು, ಶಾಲೆಯ ಕಿಟಕಿಗಳನ್ನು ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ನಂತರ, ಮನೆಗೆ ಹೋಗಿ ರಾತ್ರಿ ಊಟ ಮಾಡಿ ಮಲಗಿದರು. ಗುರುವಾರ ಬೆಳಗಿನ ಜಾವ ಇವರಿಗೆ ನಿತ್ರಾಣ, ರಕ್ತಭೇದಿ, ವಾಂತಿ, ತಲೆನೋವು ಸೇರಿ ಹಲವು ಸಮಸ್ಯೆಗಳು ಉಂಟಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಯಿತು.

ಈ ಪ್ರಕರಣದಲ್ಲಿ ಡಿಎಚ್‌ಒ ಡಾ. ಮಂಜುನಾಥ್‌ ಆಸ್ಪತ್ರೆಗೆ ಭೇಟಿ ನೀಡಿದರು. ಬಳಿಕ ಮಾತನಾಡಿ, ಪ್ರಾಥಮಿಕ ವರದಿ ಪ್ರಕಾರ ಆಹಾರದಲ್ಲಿ ವ್ಯತ್ಯಾಸವಾಗಿರುವ ಕಾರಣ ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು , ಕ್ರಿಮಿನಾಶಕದಿಂದಲ್ಲ. ಶಾಲಾ ಮಕ್ಕಳನ್ನು ಹೊರತುಪಡಿಸಿದರೆ ಶಾಲೆಯ ಅಕ್ಕಪಕ್ಕ ವಾಸವಿರುವ ಗ್ರಾಮಸ್ಥರಿಗೆ ಯಾವುದೇ ಸಮಸ್ಯೆಯಾಗಿಲ್ಲ ಬಿಸಿಯೂಟದ ಬದಲು ಮೋಸರನ್ನ ನೀಡಿದ್ದೆ ಘಟನೆಗೆ ಕಾರಣವಾಗಿದೆ. ಶಾಲೆಯ ಆಡಳಿತ ಮಂಡಳಿಯವರು ಹಾಗು ಶಿಕ್ಷಕರು ಪ್ರಕರಣವನ್ನು ಮುಚ್ಚಿಹಾಕಲು ಮಾವಿನ ಗಿಡಗಳಿಗೆ ಔಷಧಿ ಸಿಂಪಡಣೆ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುತ್ತಿರುವುದು ಈಗ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

2 hours ago

ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…

3 hours ago

ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ

ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…

3 hours ago

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

24 hours ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

1 day ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

1 day ago