Advertisement
MIRROR FOCUS

ಮಾವಿಗೆ ಸಿಂಪಡಿಸಿದ ಔಷಧಿ ವಾಸನೆಗೆ 40 ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರು ಅಸ್ವಸ್ಥ…?

Share

ನಾವು ಬೆಳೆದ ಬೆಳೆ(Crop) ಚೆನ್ನಾಗಿ ಬರಬೇಕು. ಯಾವುದೇ ಕೀಟ(Insect), ಹುಳ, ಹಕ್ಕಿಗಳಿಂದ (Birds) ಬಾಧೆಗೆ ಒಳಗಾಗಬಾರದು ಅನ್ನುವುದು ಪ್ರತಿಯೊಬ್ಬ ರೈತನ(Farmer) ಆಸೆ. ಯಾವ ರೈತನೂ ತನಗೆ ಬರುವ ಫಸಲನ್ನು ಕಳೆದುಕೊಳ್ಳಲು ಇಷ್ಟಪಡುವುದಿಲ್ಲ. ಇದಕ್ಕೆ ಅವನು ಮೊರೆ ಹೋಗೋದು ರಾಸಾಯನಿಕ(Chemical) ಸಿಂಪಡಣೆ(Pesticides). ಇದರಿಂದ ಆತನ ಬೆಳೆಯೇನೋ ಚೆನ್ನಾಗಿ ಬರಬಹುದು. ಆದರೆ ಅದನ್ನು ತಿಂದ ಮಾನವ(Human), ಹುಳು ಹುಪ್ಪಟೆ, ಪಕ್ಷಿಗಳು ತೊಂದರೆ ಅನುಭವಿಸಬೇಕಾಗುತ್ತದೆ. ರೈತ ಹೀಗೆ ಮಾಡಿ ಏನೆಲ್ಲ ಅನಾಹುತ ಸಂಭವಿಸಬಹುದು..?  ಇದೊಂದು ಉದಾಹರಣೆ ಇದೆ.

ಶಾಲೆಗೆ(School)) ಹೊಂದಿಕೊಂಡಂತಿರುವ ಮಾವಿನ ತೋಟಕ್ಕೆ(Mango Farm) ಸಿಂಪಡಿಸಿದ ಔಷಧಿಯ ವಾಸನೆಯಿಂದ 40 ವಿದ್ಯಾರ್ಥಿಗಳು(Students), ಇಬ್ಬರು ಶಿಕ್ಷಕರು ಅಸ್ವಸ್ಥರಾದ ಘಟನೆ ತುಮಕೂರು(Tumkuru) ಜಿಲ್ಲೆ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿಯ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅವರೆಲ್ಲಾ ಈಗ ಗುಣಮುಖರಾಗಿದ್ದಾರೆ. ಬುಧವಾರ ಶಾಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿತ್ತು. ಮಧ್ಯಾಹ್ನದ ಊಟಕ್ಕೆ ಇವರು ಮೊಸರನ್ನ ಸೇವಿಸಿದ್ದರು.

ಇದೇ ವೇಳೆ, ಶಾಲೆಗೆ ಹೊಂದಿಕೊಂಡಂತಿರುವ ಮಾವಿನ ತೋಟಕ್ಕೆ ಔಷಧಿಯನ್ನು ಸಿಂಪಡಿಸುತ್ತಿದ್ದರು. ಈ ಸಂದರ್ಭದಲ್ಲಿ ವಾಸನೆ ಉಂಟಾಗಿದ್ದು, ಶಾಲೆಯ ಕಿಟಕಿಗಳನ್ನು ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ನಂತರ, ಮನೆಗೆ ಹೋಗಿ ರಾತ್ರಿ ಊಟ ಮಾಡಿ ಮಲಗಿದರು. ಗುರುವಾರ ಬೆಳಗಿನ ಜಾವ ಇವರಿಗೆ ನಿತ್ರಾಣ, ರಕ್ತಭೇದಿ, ವಾಂತಿ, ತಲೆನೋವು ಸೇರಿ ಹಲವು ಸಮಸ್ಯೆಗಳು ಉಂಟಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಯಿತು.

ಈ ಪ್ರಕರಣದಲ್ಲಿ ಡಿಎಚ್‌ಒ ಡಾ. ಮಂಜುನಾಥ್‌ ಆಸ್ಪತ್ರೆಗೆ ಭೇಟಿ ನೀಡಿದರು. ಬಳಿಕ ಮಾತನಾಡಿ, ಪ್ರಾಥಮಿಕ ವರದಿ ಪ್ರಕಾರ ಆಹಾರದಲ್ಲಿ ವ್ಯತ್ಯಾಸವಾಗಿರುವ ಕಾರಣ ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು , ಕ್ರಿಮಿನಾಶಕದಿಂದಲ್ಲ. ಶಾಲಾ ಮಕ್ಕಳನ್ನು ಹೊರತುಪಡಿಸಿದರೆ ಶಾಲೆಯ ಅಕ್ಕಪಕ್ಕ ವಾಸವಿರುವ ಗ್ರಾಮಸ್ಥರಿಗೆ ಯಾವುದೇ ಸಮಸ್ಯೆಯಾಗಿಲ್ಲ ಬಿಸಿಯೂಟದ ಬದಲು ಮೋಸರನ್ನ ನೀಡಿದ್ದೆ ಘಟನೆಗೆ ಕಾರಣವಾಗಿದೆ. ಶಾಲೆಯ ಆಡಳಿತ ಮಂಡಳಿಯವರು ಹಾಗು ಶಿಕ್ಷಕರು ಪ್ರಕರಣವನ್ನು ಮುಚ್ಚಿಹಾಕಲು ಮಾವಿನ ಗಿಡಗಳಿಗೆ ಔಷಧಿ ಸಿಂಪಡಣೆ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುತ್ತಿರುವುದು ಈಗ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

4 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

5 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

5 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

8 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

19 hours ago