Advertisement
MIRROR FOCUS

ಮಾವಿಗೆ ಸಿಂಪಡಿಸಿದ ಔಷಧಿ ವಾಸನೆಗೆ 40 ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರು ಅಸ್ವಸ್ಥ…?

Share

ನಾವು ಬೆಳೆದ ಬೆಳೆ(Crop) ಚೆನ್ನಾಗಿ ಬರಬೇಕು. ಯಾವುದೇ ಕೀಟ(Insect), ಹುಳ, ಹಕ್ಕಿಗಳಿಂದ (Birds) ಬಾಧೆಗೆ ಒಳಗಾಗಬಾರದು ಅನ್ನುವುದು ಪ್ರತಿಯೊಬ್ಬ ರೈತನ(Farmer) ಆಸೆ. ಯಾವ ರೈತನೂ ತನಗೆ ಬರುವ ಫಸಲನ್ನು ಕಳೆದುಕೊಳ್ಳಲು ಇಷ್ಟಪಡುವುದಿಲ್ಲ. ಇದಕ್ಕೆ ಅವನು ಮೊರೆ ಹೋಗೋದು ರಾಸಾಯನಿಕ(Chemical) ಸಿಂಪಡಣೆ(Pesticides). ಇದರಿಂದ ಆತನ ಬೆಳೆಯೇನೋ ಚೆನ್ನಾಗಿ ಬರಬಹುದು. ಆದರೆ ಅದನ್ನು ತಿಂದ ಮಾನವ(Human), ಹುಳು ಹುಪ್ಪಟೆ, ಪಕ್ಷಿಗಳು ತೊಂದರೆ ಅನುಭವಿಸಬೇಕಾಗುತ್ತದೆ. ರೈತ ಹೀಗೆ ಮಾಡಿ ಏನೆಲ್ಲ ಅನಾಹುತ ಸಂಭವಿಸಬಹುದು..?  ಇದೊಂದು ಉದಾಹರಣೆ ಇದೆ.

ಶಾಲೆಗೆ(School)) ಹೊಂದಿಕೊಂಡಂತಿರುವ ಮಾವಿನ ತೋಟಕ್ಕೆ(Mango Farm) ಸಿಂಪಡಿಸಿದ ಔಷಧಿಯ ವಾಸನೆಯಿಂದ 40 ವಿದ್ಯಾರ್ಥಿಗಳು(Students), ಇಬ್ಬರು ಶಿಕ್ಷಕರು ಅಸ್ವಸ್ಥರಾದ ಘಟನೆ ತುಮಕೂರು(Tumkuru) ಜಿಲ್ಲೆ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿಯ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅವರೆಲ್ಲಾ ಈಗ ಗುಣಮುಖರಾಗಿದ್ದಾರೆ. ಬುಧವಾರ ಶಾಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿತ್ತು. ಮಧ್ಯಾಹ್ನದ ಊಟಕ್ಕೆ ಇವರು ಮೊಸರನ್ನ ಸೇವಿಸಿದ್ದರು.

Advertisement

ಇದೇ ವೇಳೆ, ಶಾಲೆಗೆ ಹೊಂದಿಕೊಂಡಂತಿರುವ ಮಾವಿನ ತೋಟಕ್ಕೆ ಔಷಧಿಯನ್ನು ಸಿಂಪಡಿಸುತ್ತಿದ್ದರು. ಈ ಸಂದರ್ಭದಲ್ಲಿ ವಾಸನೆ ಉಂಟಾಗಿದ್ದು, ಶಾಲೆಯ ಕಿಟಕಿಗಳನ್ನು ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ನಂತರ, ಮನೆಗೆ ಹೋಗಿ ರಾತ್ರಿ ಊಟ ಮಾಡಿ ಮಲಗಿದರು. ಗುರುವಾರ ಬೆಳಗಿನ ಜಾವ ಇವರಿಗೆ ನಿತ್ರಾಣ, ರಕ್ತಭೇದಿ, ವಾಂತಿ, ತಲೆನೋವು ಸೇರಿ ಹಲವು ಸಮಸ್ಯೆಗಳು ಉಂಟಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಯಿತು.

ಈ ಪ್ರಕರಣದಲ್ಲಿ ಡಿಎಚ್‌ಒ ಡಾ. ಮಂಜುನಾಥ್‌ ಆಸ್ಪತ್ರೆಗೆ ಭೇಟಿ ನೀಡಿದರು. ಬಳಿಕ ಮಾತನಾಡಿ, ಪ್ರಾಥಮಿಕ ವರದಿ ಪ್ರಕಾರ ಆಹಾರದಲ್ಲಿ ವ್ಯತ್ಯಾಸವಾಗಿರುವ ಕಾರಣ ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು , ಕ್ರಿಮಿನಾಶಕದಿಂದಲ್ಲ. ಶಾಲಾ ಮಕ್ಕಳನ್ನು ಹೊರತುಪಡಿಸಿದರೆ ಶಾಲೆಯ ಅಕ್ಕಪಕ್ಕ ವಾಸವಿರುವ ಗ್ರಾಮಸ್ಥರಿಗೆ ಯಾವುದೇ ಸಮಸ್ಯೆಯಾಗಿಲ್ಲ ಬಿಸಿಯೂಟದ ಬದಲು ಮೋಸರನ್ನ ನೀಡಿದ್ದೆ ಘಟನೆಗೆ ಕಾರಣವಾಗಿದೆ. ಶಾಲೆಯ ಆಡಳಿತ ಮಂಡಳಿಯವರು ಹಾಗು ಶಿಕ್ಷಕರು ಪ್ರಕರಣವನ್ನು ಮುಚ್ಚಿಹಾಕಲು ಮಾವಿನ ಗಿಡಗಳಿಗೆ ಔಷಧಿ ಸಿಂಪಡಣೆ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುತ್ತಿರುವುದು ಈಗ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

19 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

21 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago