Advertisement
MIRROR FOCUS

ಮಾವಿಗೆ ಸಿಂಪಡಿಸಿದ ಔಷಧಿ ವಾಸನೆಗೆ 40 ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರು ಅಸ್ವಸ್ಥ…?

Share

ನಾವು ಬೆಳೆದ ಬೆಳೆ(Crop) ಚೆನ್ನಾಗಿ ಬರಬೇಕು. ಯಾವುದೇ ಕೀಟ(Insect), ಹುಳ, ಹಕ್ಕಿಗಳಿಂದ (Birds) ಬಾಧೆಗೆ ಒಳಗಾಗಬಾರದು ಅನ್ನುವುದು ಪ್ರತಿಯೊಬ್ಬ ರೈತನ(Farmer) ಆಸೆ. ಯಾವ ರೈತನೂ ತನಗೆ ಬರುವ ಫಸಲನ್ನು ಕಳೆದುಕೊಳ್ಳಲು ಇಷ್ಟಪಡುವುದಿಲ್ಲ. ಇದಕ್ಕೆ ಅವನು ಮೊರೆ ಹೋಗೋದು ರಾಸಾಯನಿಕ(Chemical) ಸಿಂಪಡಣೆ(Pesticides). ಇದರಿಂದ ಆತನ ಬೆಳೆಯೇನೋ ಚೆನ್ನಾಗಿ ಬರಬಹುದು. ಆದರೆ ಅದನ್ನು ತಿಂದ ಮಾನವ(Human), ಹುಳು ಹುಪ್ಪಟೆ, ಪಕ್ಷಿಗಳು ತೊಂದರೆ ಅನುಭವಿಸಬೇಕಾಗುತ್ತದೆ. ರೈತ ಹೀಗೆ ಮಾಡಿ ಏನೆಲ್ಲ ಅನಾಹುತ ಸಂಭವಿಸಬಹುದು..?  ಇದೊಂದು ಉದಾಹರಣೆ ಇದೆ.

ಶಾಲೆಗೆ(School)) ಹೊಂದಿಕೊಂಡಂತಿರುವ ಮಾವಿನ ತೋಟಕ್ಕೆ(Mango Farm) ಸಿಂಪಡಿಸಿದ ಔಷಧಿಯ ವಾಸನೆಯಿಂದ 40 ವಿದ್ಯಾರ್ಥಿಗಳು(Students), ಇಬ್ಬರು ಶಿಕ್ಷಕರು ಅಸ್ವಸ್ಥರಾದ ಘಟನೆ ತುಮಕೂರು(Tumkuru) ಜಿಲ್ಲೆ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿಯ ಅಂಬಾ ಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅವರೆಲ್ಲಾ ಈಗ ಗುಣಮುಖರಾಗಿದ್ದಾರೆ. ಬುಧವಾರ ಶಾಲೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿತ್ತು. ಮಧ್ಯಾಹ್ನದ ಊಟಕ್ಕೆ ಇವರು ಮೊಸರನ್ನ ಸೇವಿಸಿದ್ದರು.

ಇದೇ ವೇಳೆ, ಶಾಲೆಗೆ ಹೊಂದಿಕೊಂಡಂತಿರುವ ಮಾವಿನ ತೋಟಕ್ಕೆ ಔಷಧಿಯನ್ನು ಸಿಂಪಡಿಸುತ್ತಿದ್ದರು. ಈ ಸಂದರ್ಭದಲ್ಲಿ ವಾಸನೆ ಉಂಟಾಗಿದ್ದು, ಶಾಲೆಯ ಕಿಟಕಿಗಳನ್ನು ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ನಂತರ, ಮನೆಗೆ ಹೋಗಿ ರಾತ್ರಿ ಊಟ ಮಾಡಿ ಮಲಗಿದರು. ಗುರುವಾರ ಬೆಳಗಿನ ಜಾವ ಇವರಿಗೆ ನಿತ್ರಾಣ, ರಕ್ತಭೇದಿ, ವಾಂತಿ, ತಲೆನೋವು ಸೇರಿ ಹಲವು ಸಮಸ್ಯೆಗಳು ಉಂಟಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸೇರಿಸಲಾಯಿತು.

ಈ ಪ್ರಕರಣದಲ್ಲಿ ಡಿಎಚ್‌ಒ ಡಾ. ಮಂಜುನಾಥ್‌ ಆಸ್ಪತ್ರೆಗೆ ಭೇಟಿ ನೀಡಿದರು. ಬಳಿಕ ಮಾತನಾಡಿ, ಪ್ರಾಥಮಿಕ ವರದಿ ಪ್ರಕಾರ ಆಹಾರದಲ್ಲಿ ವ್ಯತ್ಯಾಸವಾಗಿರುವ ಕಾರಣ ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು , ಕ್ರಿಮಿನಾಶಕದಿಂದಲ್ಲ. ಶಾಲಾ ಮಕ್ಕಳನ್ನು ಹೊರತುಪಡಿಸಿದರೆ ಶಾಲೆಯ ಅಕ್ಕಪಕ್ಕ ವಾಸವಿರುವ ಗ್ರಾಮಸ್ಥರಿಗೆ ಯಾವುದೇ ಸಮಸ್ಯೆಯಾಗಿಲ್ಲ ಬಿಸಿಯೂಟದ ಬದಲು ಮೋಸರನ್ನ ನೀಡಿದ್ದೆ ಘಟನೆಗೆ ಕಾರಣವಾಗಿದೆ. ಶಾಲೆಯ ಆಡಳಿತ ಮಂಡಳಿಯವರು ಹಾಗು ಶಿಕ್ಷಕರು ಪ್ರಕರಣವನ್ನು ಮುಚ್ಚಿಹಾಕಲು ಮಾವಿನ ಗಿಡಗಳಿಗೆ ಔಷಧಿ ಸಿಂಪಡಣೆ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುತ್ತಿರುವುದು ಈಗ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

4 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

6 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

13 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

20 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago