ದೇಶದ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ, 2.28 ಲಕ್ಷ ಪಂಚಾಯತ್ ಗಳಿಗೆ ಕೆಲಸ ಮಾಡುವ ಸ್ಥಳಗಳಿವೆ. ದೇಶದ ಎಲ್ಲ ಪಂಚಾಯತ್ ಗಳಿಗೆ ಸಮಾನವಾಗಿ ಸಂಪನ್ಮೂಲಗಳ ಹಂಚಿಕೆಯನ್ನು ಕೇಂದ್ರ ಸರ್ಕಾರ ಖಾತರಿಪಡಿಸಲಿದೆ ಎಂದು ಕೇಂದ್ರ ಪಂಚಾಯತ್ ರಾಜ್ ಖಾತೆ ರಾಜ್ಯ ಸಚಿವ ಎಸ್.ಪಿ. ಸಿಂಗ್ ಬಘೇಲ್ ಲೋಕಸಭೆಯಲ್ಲಿ ಹೇಳಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಮಹಾರಾಷ್ಟ್ರ ಪಂಚಾಯತ್ ಚುನಾವಣೆಗಳನ್ನು ನಡೆಸುವ ಕುರಿತು ಸಂಸದ ಭಜರಂಗ್ ಸೋನೆವಾನೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚುನಾವಣಾ ವೆಚ್ಚವನ್ನೂ ಸಹ ರಾಜ್ಯ ಸರ್ಕಾರವೇ ಭರಿಸಬೇಕಾಗುತ್ತದೆ. ಸಂವಿಧಾನದ ನಿಬಂಧನೆಗಳನ್ನು ಪಾಲಿಸಲಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದಷ್ಟೇ ಕೇಂದ್ರ ಸರ್ಕಾರದ ಪಾತ್ರ ಎಂದು ಸ್ಪಷ್ಟಪಡಿಸಿದರು. ಪಂಚಾಯತ್ ರಾಜ್ ಚುನಾವಣೆ ನಡೆಸುವ ಸಾಂವಿಧಾನಿಕ ನಿಬಂಧನೆಗಳನ್ನು ರಾಜ್ಯ ಚುನಾವಣಾ ಆಯೋಗದ ವಿವೇಚನೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಪಂಚಾಯತ್ ರಾಜ್ ಖಾತೆ ರಾಜ್ಯ ಸಚಿವ ಎಸ್.ಪಿ. ಸಿಂಗ್ ಬಘೇಲ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…