BHMS(Intern)
ಮಳೆಗಾಲ ಎಂದರೆ ವಿವಿಧ ರೋಗಗಳು ಮನುಷ್ಯನನ್ನು ಕಾಡುತ್ತವೆ ಎಂಬ ಮಾತಿದೆ. ಆದರೆ ಅಪಾಯವಾಗುವ ಮುನ್ನವೇ ಮುನ್ನಚ್ಚರಿಕೆ ವಹಿಸುವುದು ಉತ್ತಮ. ಹೀಗಾಗಿ ಮಳೆಗಾದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾವೇನು ಮಾಡಬಹುದು ?
1. ಮಳೆ ನೀರು ಯಾವುದೇ ಪುಟ್ಟ ತೊಟ್ಟಿ ಪ್ಲಾಸ್ಟಿಕ್ನಲ್ಲಿ ನಿಂತುಕೊಳ್ಳದಂತೆ ಮಾಡುವುದು. ಈ ತರಹ ಮಾಡುವುದರಿಂದ Mosquito borne (ಸೊಳ್ಳೆಯ ಮುಖಾಂತರ)ಹರಡುವಂತಹ ರೋಗಗಳು ಮಲೇರಿಯಾ ಡೆಂಗೂ ಜ್ವರ,ವಾಂತಿ ಮುಂತಾದ ಕಾಯಿಲೆಗಳನ್ನು ತಡೆಗಟ್ಟಬಹುದು.
ಹೀಗೆ ಮಲೇರಿಯಾ ಬರುತ್ತದೆ:
ಒಮ್ಮೆ ಈ ಸೊಳ್ಳೆಗಳು ಮಲೇರಿಯಾ ಸೋಂಕಿತ ಮನುಷ್ಯನನ್ನು ಕಚ್ಚಿದಾಗ ಅದು ಮತ್ತೊಮ್ಮೆ ಮಲೇರಿಯಾ ಸೋಂಕಿತನಲ್ಲದ ವ್ಯಕ್ತಿಗೆ ಕಚ್ಚಿದರೆ ಮಲೇರಿಯಾ ಹರಡುತ್ತದೆ ಈ ಮಲೇರಿಯಾ ಹರಡುವ ಹೆಣ್ಣು ಅನಾಫಿಲಿಸ್ ಸೊಳ್ಳೆಯು ಕಲುಷಿತ ಶೇಖರಣೆಯಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿ ಮಾಡುತ್ತದೆ .ಈ ರೋಗದ ಲಕ್ಷಣಗಳು: ತಲೆಸುತ್ತುವುದು ಜ್ವರ ಚಳಿ ವಾಕಡಿಕೆ ಮುಂತಾದವುಗಳು ಮೊದಲನೆಯದಾಗಿ ಕಾಣುವ ರೋಗದ ಲಕ್ಷಣಗಳು.
2. ರಸ್ತೆ ಬದಿ ಸಿಗುವ ತಿಂಡಿ ಪದಾರ್ಥಗಳನ್ನು ತಿನ್ನುವುದನ್ನು ಸದ್ಯ ನಿಲ್ಲಿಸಿ:
ಏಕೆಂದರೆ ಇದರಲ್ಲಿ Germ(ರೋಗಾಣುವಿನ ಅಂಶ)ದ ಬೆಳವಣಿಗೆ ತುಂಬಾ ಹೆಚ್ಚಿನ ಪ್ರಮಾಣದಲ್ಲಿ ಆಗುತ್ತದೆ.ಇದು ಮಳೆಗಾಲದಲ್ಲಿ ಹೆಚ್ಚು. ಏಕೆಂದರೆ ಕಲುಷಿತವಾದ ನೀರಿನ ಬಳಿ ಇರುವ ಅಂಗಡಿಯಲ್ಲಿ ತಯಾರಾದ ವಸ್ತುವಿನಲ್ಲಿ ರೋಗಾಣುಗಳಿದ್ದರೆ ಅದರಿಂದ ರೋಗ ಹರಡುವುದು ಸುಲಭ.
3.ಮಳೆಯಲ್ಲಿ ನೆನೆಯುವುದನ್ನು ನಿಲ್ಲಿಸಿ ಅಥವಾ ನೆನೆದರೂ ಶುಚಿಯಾಗಿರುವ ಬೆಚ್ಚನೆಯ ಬಟ್ಟೆಯಿಂದ ಪೂರ್ತಿ ಮಯ್ಯನ್ನು ಒರೆಸಿಕೊಳ್ಳಿ.ಮುಖ್ಯವಾಗಿ ತಲೆಯನ್ನು ಒದ್ದೆಯಾಗಿದಲು ಬಿಡದಿರಿ.
4.ಕೈಯನ್ನು ಶುಭ್ರವಾಗಿ ಒರೆಸಿರಿ ಅಥವಾ ತೊಳೆಯಿರಿ . ಇದು ಅತ್ಯಂತ ಮುಖ್ಯವಾದ ಅಂಶ ಮತ್ತು ಅತಿ ಹೆಚ್ಚು ರೋಗಗಳು ಬರುವ ದಾರಿಯಾಗಿದೆ.
5.ಆಹಾರ ಪದಾರ್ಥದಲ್ಲಿ ಕೊಂಚ ಬದಲಾವಣೆ ಅಗತ್ಯ. ಹಣ್ಣುಗಳು – ಇದು ದೇಹಕ್ಕೆ Enegry(ತ್ರಾಣ) ಬರಲು ಸಹಾಯ ಮಾಡುತ್ತದೆ. ಮಾವು ,ದಾಳಿಂಬೆ ,ಪೇರಳೆ ಇತ್ಯಾದಿ . ಆದಷ್ಟು ಹಸಿರು ತರಕಾರಿ ಧಾನ್ಯ ಮುಂತಾದವುಗಳನ್ನು ನಿತ್ಯದ ಊಟದಲ್ಲಿ ಹೆಚ್ಚಿನ ಪ್ರಮಾಣದಲ್ಲಿರಲಿ. ಕೊಂಚ ತಂಪಾದ ಪಾನಿಯಕ್ಕೆ ತಡೆ ಇಟ್ಟರೆ ನಿಮ್ಮ ಈ ಮಳೆಗಾಲ ರೋಗಮುಕ್ತ ಮಳೆಗಾಲವಾಗುವುದರಲ್ಲಿ ಸಂಶಯವೇ ಇಲ್ಲ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…