Advertisement
ನಮ್ಮೂರ ಸುದ್ದಿ

5 ರೂ ಗೆ 20 ಲೀಟರ್ ಶುದ್ಧ ನೀರು : ನ.ಪಂ ವತಿಯಿಂದ ಹೊಸ ಯೋಜನೆ

Share

ಸುಳ್ಯ: ಸುಳ್ಯ ನಗರದಲ್ಲಿ ಐದು ರೂ ನೀಡಿದರೆ ಇನ್ನು 20 ಲೀಟರ್ ಶುದ್ಧ ಕುಡಿಯುವ ನೀರು ದೊರೆಯಲಿದೆ. ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರಿಗೆ ಜನರು ಹಾಹಾಕಾರ ಪಡುವುದನ್ನು ತಪ್ಪಿಸಲು ಸುಳ್ಯ ನಗರ ಪಂಚಾಯತ್ ಹೊಸ ಯೋಜನೆ ರೂಪಿಸಿದೆ. ನ.ಪಂ. ವತಿಯಿಂದ ಎರಡು ಕಡೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದ್ದು ಸೋಮವಾರ ಉದ್ಘಾಟನೆಗೊಂಡಿತು.

 

ನಗರ ಪಂಚಾಯತ್ ಸಮೀಪ ಮತ್ತು ಗಾಂಧಿನಗರದಲ್ಲಿ ಘಟಕಗಳು ಕಾರ್ಯಾಚರಿಸಲಿದೆ. ತಲಾ ನಾಲ್ಕು ಲಕ್ಷ ರೂ ವೆಚ್ಚದಲ್ಲಿ ಒಟ್ಟು ಎಂಟು ಲಕ್ಷ ರೂ ಖರ್ಚಿನಲ್ಲಿ ಎರಡು ಘಟಕವನ್ನು ಸ್ಥಾಪಿಸಲಾಗಿದೆ. ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್ ಆಸಕ್ತಿ ವಹಿಸಿ ಘಟಕವನ್ನು ಸ್ಥಾಪಿಸಲಾಗಿದೆ. ಬೆಳಿಗ್ಗೆ ಒಂಭತ್ತರಿಂದ ಸಂಜೆ ಆರರವರೆಗೆ ಘಟಕ ಕಾರ್ಯಾಚರಿಸಲಿದೆ. ಘಟಕದ ನಿರ್ವಹಣೆಗೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು‌. ಜನರ ಬೇಡಿಕೆಯನ್ನು ಗಮನಿಸಿ ಇನ್ನೂ ಹೆಚ್ಚಿನ ಕಡೆಗಳಲ್ಲಿ ಘಟಕ ತೆರೆಯುವ ಯೋಜನೆ ರೂಪಿಸಲಾಗುತ್ತದೆ. 5 ರೂಗೆ 20 ಲೀಟರ್ ಮತ್ತು 2 ರೂಗೆ 10 ಲೀಟರ್ ನಂತೆ ನೀರು ಸರಬರಾಜು ಮಾಡಲಾಗುತ್ತದೆ. ಕುಡಿಯಲು ಮತ್ತು ಅಡುಗೆ ಮಾಡಲು ಈ ನೀರನ್ನು ಬಳಸಬಹುದು.

 

ನ.ಪಂ. ಅಡಳಿತಾಧಿಕಾರಿಯಾದ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಉದ್ಘಾಟಿಸಿದರು. ನ.ಪಂ.ಮುಖ್ಯಾಧಿಕಾರಿ ಶ್ರೀಧರ್, ಇಂಜಿನಿಯರ್ ಶಿವಕುಮಾರ್, ಕಂದಾಯ ನಿರೀಕ್ಷಕ ದೀಪಕ್, ಗ್ರಾಮ ಕರಣಿಕ ತಿಪ್ಪೇಶ್, ನ.ಪಂ.ಆರೋಗ್ಯಾಧಿಕಾರಿ ರವಿಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago