ಸುಳ್ಯ: ಸುಳ್ಯ ನಗರದಲ್ಲಿ ಐದು ರೂ ನೀಡಿದರೆ ಇನ್ನು 20 ಲೀಟರ್ ಶುದ್ಧ ಕುಡಿಯುವ ನೀರು ದೊರೆಯಲಿದೆ. ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರಿಗೆ ಜನರು ಹಾಹಾಕಾರ ಪಡುವುದನ್ನು ತಪ್ಪಿಸಲು ಸುಳ್ಯ ನಗರ ಪಂಚಾಯತ್ ಹೊಸ ಯೋಜನೆ ರೂಪಿಸಿದೆ. ನ.ಪಂ. ವತಿಯಿಂದ ಎರಡು ಕಡೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದ್ದು ಸೋಮವಾರ ಉದ್ಘಾಟನೆಗೊಂಡಿತು.
ನಗರ ಪಂಚಾಯತ್ ಸಮೀಪ ಮತ್ತು ಗಾಂಧಿನಗರದಲ್ಲಿ ಘಟಕಗಳು ಕಾರ್ಯಾಚರಿಸಲಿದೆ. ತಲಾ ನಾಲ್ಕು ಲಕ್ಷ ರೂ ವೆಚ್ಚದಲ್ಲಿ ಒಟ್ಟು ಎಂಟು ಲಕ್ಷ ರೂ ಖರ್ಚಿನಲ್ಲಿ ಎರಡು ಘಟಕವನ್ನು ಸ್ಥಾಪಿಸಲಾಗಿದೆ. ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್ ಆಸಕ್ತಿ ವಹಿಸಿ ಘಟಕವನ್ನು ಸ್ಥಾಪಿಸಲಾಗಿದೆ. ಬೆಳಿಗ್ಗೆ ಒಂಭತ್ತರಿಂದ ಸಂಜೆ ಆರರವರೆಗೆ ಘಟಕ ಕಾರ್ಯಾಚರಿಸಲಿದೆ. ಘಟಕದ ನಿರ್ವಹಣೆಗೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು. ಜನರ ಬೇಡಿಕೆಯನ್ನು ಗಮನಿಸಿ ಇನ್ನೂ ಹೆಚ್ಚಿನ ಕಡೆಗಳಲ್ಲಿ ಘಟಕ ತೆರೆಯುವ ಯೋಜನೆ ರೂಪಿಸಲಾಗುತ್ತದೆ. 5 ರೂಗೆ 20 ಲೀಟರ್ ಮತ್ತು 2 ರೂಗೆ 10 ಲೀಟರ್ ನಂತೆ ನೀರು ಸರಬರಾಜು ಮಾಡಲಾಗುತ್ತದೆ. ಕುಡಿಯಲು ಮತ್ತು ಅಡುಗೆ ಮಾಡಲು ಈ ನೀರನ್ನು ಬಳಸಬಹುದು.
ನ.ಪಂ. ಅಡಳಿತಾಧಿಕಾರಿಯಾದ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಉದ್ಘಾಟಿಸಿದರು. ನ.ಪಂ.ಮುಖ್ಯಾಧಿಕಾರಿ ಶ್ರೀಧರ್, ಇಂಜಿನಿಯರ್ ಶಿವಕುಮಾರ್, ಕಂದಾಯ ನಿರೀಕ್ಷಕ ದೀಪಕ್, ಗ್ರಾಮ ಕರಣಿಕ ತಿಪ್ಪೇಶ್, ನ.ಪಂ.ಆರೋಗ್ಯಾಧಿಕಾರಿ ರವಿಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…