Advertisement
ನಮ್ಮೂರ ಸುದ್ದಿ

5 ರೂ ಗೆ 20 ಲೀಟರ್ ಶುದ್ಧ ನೀರು : ನ.ಪಂ ವತಿಯಿಂದ ಹೊಸ ಯೋಜನೆ

Share

ಸುಳ್ಯ: ಸುಳ್ಯ ನಗರದಲ್ಲಿ ಐದು ರೂ ನೀಡಿದರೆ ಇನ್ನು 20 ಲೀಟರ್ ಶುದ್ಧ ಕುಡಿಯುವ ನೀರು ದೊರೆಯಲಿದೆ. ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರಿಗೆ ಜನರು ಹಾಹಾಕಾರ ಪಡುವುದನ್ನು ತಪ್ಪಿಸಲು ಸುಳ್ಯ ನಗರ ಪಂಚಾಯತ್ ಹೊಸ ಯೋಜನೆ ರೂಪಿಸಿದೆ. ನ.ಪಂ. ವತಿಯಿಂದ ಎರಡು ಕಡೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದ್ದು ಸೋಮವಾರ ಉದ್ಘಾಟನೆಗೊಂಡಿತು.

 

ನಗರ ಪಂಚಾಯತ್ ಸಮೀಪ ಮತ್ತು ಗಾಂಧಿನಗರದಲ್ಲಿ ಘಟಕಗಳು ಕಾರ್ಯಾಚರಿಸಲಿದೆ. ತಲಾ ನಾಲ್ಕು ಲಕ್ಷ ರೂ ವೆಚ್ಚದಲ್ಲಿ ಒಟ್ಟು ಎಂಟು ಲಕ್ಷ ರೂ ಖರ್ಚಿನಲ್ಲಿ ಎರಡು ಘಟಕವನ್ನು ಸ್ಥಾಪಿಸಲಾಗಿದೆ. ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್ ಆಸಕ್ತಿ ವಹಿಸಿ ಘಟಕವನ್ನು ಸ್ಥಾಪಿಸಲಾಗಿದೆ. ಬೆಳಿಗ್ಗೆ ಒಂಭತ್ತರಿಂದ ಸಂಜೆ ಆರರವರೆಗೆ ಘಟಕ ಕಾರ್ಯಾಚರಿಸಲಿದೆ. ಘಟಕದ ನಿರ್ವಹಣೆಗೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು‌. ಜನರ ಬೇಡಿಕೆಯನ್ನು ಗಮನಿಸಿ ಇನ್ನೂ ಹೆಚ್ಚಿನ ಕಡೆಗಳಲ್ಲಿ ಘಟಕ ತೆರೆಯುವ ಯೋಜನೆ ರೂಪಿಸಲಾಗುತ್ತದೆ. 5 ರೂಗೆ 20 ಲೀಟರ್ ಮತ್ತು 2 ರೂಗೆ 10 ಲೀಟರ್ ನಂತೆ ನೀರು ಸರಬರಾಜು ಮಾಡಲಾಗುತ್ತದೆ. ಕುಡಿಯಲು ಮತ್ತು ಅಡುಗೆ ಮಾಡಲು ಈ ನೀರನ್ನು ಬಳಸಬಹುದು.

 

ನ.ಪಂ. ಅಡಳಿತಾಧಿಕಾರಿಯಾದ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಉದ್ಘಾಟಿಸಿದರು. ನ.ಪಂ.ಮುಖ್ಯಾಧಿಕಾರಿ ಶ್ರೀಧರ್, ಇಂಜಿನಿಯರ್ ಶಿವಕುಮಾರ್, ಕಂದಾಯ ನಿರೀಕ್ಷಕ ದೀಪಕ್, ಗ್ರಾಮ ಕರಣಿಕ ತಿಪ್ಪೇಶ್, ನ.ಪಂ.ಆರೋಗ್ಯಾಧಿಕಾರಿ ರವಿಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

10 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

13 hours ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

13 hours ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

17 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

17 hours ago