Advertisement
ನಮ್ಮೂರ ಸುದ್ದಿ

5 ರೂ ಗೆ 20 ಲೀಟರ್ ಶುದ್ಧ ನೀರು : ನ.ಪಂ ವತಿಯಿಂದ ಹೊಸ ಯೋಜನೆ

Share

ಸುಳ್ಯ: ಸುಳ್ಯ ನಗರದಲ್ಲಿ ಐದು ರೂ ನೀಡಿದರೆ ಇನ್ನು 20 ಲೀಟರ್ ಶುದ್ಧ ಕುಡಿಯುವ ನೀರು ದೊರೆಯಲಿದೆ. ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರಿಗೆ ಜನರು ಹಾಹಾಕಾರ ಪಡುವುದನ್ನು ತಪ್ಪಿಸಲು ಸುಳ್ಯ ನಗರ ಪಂಚಾಯತ್ ಹೊಸ ಯೋಜನೆ ರೂಪಿಸಿದೆ. ನ.ಪಂ. ವತಿಯಿಂದ ಎರಡು ಕಡೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗಿದ್ದು ಸೋಮವಾರ ಉದ್ಘಾಟನೆಗೊಂಡಿತು.

 

ನಗರ ಪಂಚಾಯತ್ ಸಮೀಪ ಮತ್ತು ಗಾಂಧಿನಗರದಲ್ಲಿ ಘಟಕಗಳು ಕಾರ್ಯಾಚರಿಸಲಿದೆ. ತಲಾ ನಾಲ್ಕು ಲಕ್ಷ ರೂ ವೆಚ್ಚದಲ್ಲಿ ಒಟ್ಟು ಎಂಟು ಲಕ್ಷ ರೂ ಖರ್ಚಿನಲ್ಲಿ ಎರಡು ಘಟಕವನ್ನು ಸ್ಥಾಪಿಸಲಾಗಿದೆ. ನಗರ ಪಂಚಾಯತ್ ಆಡಳಿತಾಧಿಕಾರಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮತ್ತು ನಗರ ಪಂಚಾಯತ್ ಮುಖ್ಯಾಧಿಕಾರಿ ಶ್ರೀಧರ್ ಆಸಕ್ತಿ ವಹಿಸಿ ಘಟಕವನ್ನು ಸ್ಥಾಪಿಸಲಾಗಿದೆ. ಬೆಳಿಗ್ಗೆ ಒಂಭತ್ತರಿಂದ ಸಂಜೆ ಆರರವರೆಗೆ ಘಟಕ ಕಾರ್ಯಾಚರಿಸಲಿದೆ. ಘಟಕದ ನಿರ್ವಹಣೆಗೆ ಸಿಬ್ಬಂದಿಗಳನ್ನು ನೇಮಕ ಮಾಡಲಾಗುವುದು‌. ಜನರ ಬೇಡಿಕೆಯನ್ನು ಗಮನಿಸಿ ಇನ್ನೂ ಹೆಚ್ಚಿನ ಕಡೆಗಳಲ್ಲಿ ಘಟಕ ತೆರೆಯುವ ಯೋಜನೆ ರೂಪಿಸಲಾಗುತ್ತದೆ. 5 ರೂಗೆ 20 ಲೀಟರ್ ಮತ್ತು 2 ರೂಗೆ 10 ಲೀಟರ್ ನಂತೆ ನೀರು ಸರಬರಾಜು ಮಾಡಲಾಗುತ್ತದೆ. ಕುಡಿಯಲು ಮತ್ತು ಅಡುಗೆ ಮಾಡಲು ಈ ನೀರನ್ನು ಬಳಸಬಹುದು.

 

ನ.ಪಂ. ಅಡಳಿತಾಧಿಕಾರಿಯಾದ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಉದ್ಘಾಟಿಸಿದರು. ನ.ಪಂ.ಮುಖ್ಯಾಧಿಕಾರಿ ಶ್ರೀಧರ್, ಇಂಜಿನಿಯರ್ ಶಿವಕುಮಾರ್, ಕಂದಾಯ ನಿರೀಕ್ಷಕ ದೀಪಕ್, ಗ್ರಾಮ ಕರಣಿಕ ತಿಪ್ಪೇಶ್, ನ.ಪಂ.ಆರೋಗ್ಯಾಧಿಕಾರಿ ರವಿಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

23 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago