MIRROR FOCUS

5 ಲಕ್ಷ ರಸ್ತೆ ಅಪಘಾತ, 1.80 ಲಕ್ಷ ಮಂದಿ ಬಲಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದಲ್ಲಿ ಕಳೆದ ವರ್ಷ ಸುಮಾರು 5 ಲಕ್ಷ, ರಸ್ತೆ ಅಪಘಾತಗಳು ಮತ್ತು 1 ಲಕ್ಷದ 80 ಸಾವಿರ  ಮಂದಿ ಅಪಘಾತಕ್ಕೆ ಬಲಿಯಾಗಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ  ತಿಳಿಸಿದ್ದಾರೆ.

Advertisement

ಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ಕೇಂದ್ರದ ‘ಪ್ರಾಜೆಕ್ಟ್ ಅಭಯ್‌’ನ ಸಮಾರೋಪ ಸಮಾರಂಭ ಉದ್ದೇಶಿಸಿ  ಅವರು, ಒಟ್ಟು ಮೃತರ ಪೈಕಿ ಶೇಕಡ 66ರಷ್ಟು ಮಂದಿ  18 ರಿಂದ 34ರ ವಯೋಮಾನದವರಾಗಿದ್ದಾರೆ. ರಸ್ತೆ ಅಪಘಾತಗಳಿಂದ ವಾರ್ಷಿಕ ದೇಶದ ಜಿಡಿಪಿಯ , ಶೇಕಡ 3 ರಷ್ಟು ನಷ್ಟವಾಗುತ್ತಿದೆ ಎಂದು ಹೇಳಿದರು. ರಫ್ತು ಹೆಚ್ಚಿಸಲು ಸಾರಿಗೆ ವೆಚ್ಚವನ್ನು ಕಡಿಮೆ ಮಾಡುವ ಅಗತ್ಯವಿದೆ. ಪ್ರಾಜೆಕ್ಟ್ ಅಭಯ್‌ನ ಪ್ರಾಯೋಗಿಕ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಶ್ಲಾಘನೀಯ. ದೇಶದಲ್ಲಿ ಪ್ರಸ್ತುತ 22 ಲಕ್ಷ ಚಾಲಕರ ಕೊರತೆ ಇದ್ದು,  ಟ್ರಕ್ ಚಾಲಕರ ಸಂಖ್ಯೆಯನ್ನು ಹೆಚ್ಚಿಸುವ ತುರ್ತು ಅಗತ್ಯವಿದೆ ಎಂದರು. ಪ್ರಾಜೆಕ್ಟ್ ಅಭಯ್ , ದೇಶಾದ್ಯಂತ ಟ್ರಕ್ ಚಾಲಕರ ಜೀವನ ಸುಧಾರಿಸುವ ಉದ್ದೇಶ ಹೊಂದಿದ ಉಪಕ್ರಮವಾಗಿದೆ. ಕಳೆದ ವರ್ಷ, ಈ ಉಪಕ್ರಮದಡಿ  ಆರು ರಾಜ್ಯಗಳು ಮತ್ತು 15 ನಗರಗಳಾದ್ಯಂತ 50 ಸಾವಿರ  ಟ್ರಕ್ ಚಾಲಕರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

42 minutes ago

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

2 hours ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

24 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

1 day ago