ದೇಶದಲ್ಲಿ ಕಳೆದ ವರ್ಷ ಸುಮಾರು 5 ಲಕ್ಷ, ರಸ್ತೆ ಅಪಘಾತಗಳು ಮತ್ತು 1 ಲಕ್ಷದ 80 ಸಾವಿರ ಮಂದಿ ಅಪಘಾತಕ್ಕೆ ಬಲಿಯಾಗಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ಕೇಂದ್ರದ ‘ಪ್ರಾಜೆಕ್ಟ್ ಅಭಯ್’ನ ಸಮಾರೋಪ ಸಮಾರಂಭ ಉದ್ದೇಶಿಸಿ ಅವರು, ಒಟ್ಟು ಮೃತರ ಪೈಕಿ ಶೇಕಡ 66ರಷ್ಟು ಮಂದಿ 18 ರಿಂದ 34ರ ವಯೋಮಾನದವರಾಗಿದ್ದಾರೆ. ರಸ್ತೆ ಅಪಘಾತಗಳಿಂದ ವಾರ್ಷಿಕ ದೇಶದ ಜಿಡಿಪಿಯ , ಶೇಕಡ 3 ರಷ್ಟು ನಷ್ಟವಾಗುತ್ತಿದೆ ಎಂದು ಹೇಳಿದರು. ರಫ್ತು ಹೆಚ್ಚಿಸಲು ಸಾರಿಗೆ ವೆಚ್ಚವನ್ನು ಕಡಿಮೆ ಮಾಡುವ ಅಗತ್ಯವಿದೆ. ಪ್ರಾಜೆಕ್ಟ್ ಅಭಯ್ನ ಪ್ರಾಯೋಗಿಕ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಶ್ಲಾಘನೀಯ. ದೇಶದಲ್ಲಿ ಪ್ರಸ್ತುತ 22 ಲಕ್ಷ ಚಾಲಕರ ಕೊರತೆ ಇದ್ದು, ಟ್ರಕ್ ಚಾಲಕರ ಸಂಖ್ಯೆಯನ್ನು ಹೆಚ್ಚಿಸುವ ತುರ್ತು ಅಗತ್ಯವಿದೆ ಎಂದರು. ಪ್ರಾಜೆಕ್ಟ್ ಅಭಯ್ , ದೇಶಾದ್ಯಂತ ಟ್ರಕ್ ಚಾಲಕರ ಜೀವನ ಸುಧಾರಿಸುವ ಉದ್ದೇಶ ಹೊಂದಿದ ಉಪಕ್ರಮವಾಗಿದೆ. ಕಳೆದ ವರ್ಷ, ಈ ಉಪಕ್ರಮದಡಿ ಆರು ರಾಜ್ಯಗಳು ಮತ್ತು 15 ನಗರಗಳಾದ್ಯಂತ 50 ಸಾವಿರ ಟ್ರಕ್ ಚಾಲಕರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎಂದು ಹೇಳಿದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…