ದೇಶದಲ್ಲಿ ಕಳೆದ ವರ್ಷ ಸುಮಾರು 5 ಲಕ್ಷ, ರಸ್ತೆ ಅಪಘಾತಗಳು ಮತ್ತು 1 ಲಕ್ಷದ 80 ಸಾವಿರ ಮಂದಿ ಅಪಘಾತಕ್ಕೆ ಬಲಿಯಾಗಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ಕೇಂದ್ರದ ‘ಪ್ರಾಜೆಕ್ಟ್ ಅಭಯ್’ನ ಸಮಾರೋಪ ಸಮಾರಂಭ ಉದ್ದೇಶಿಸಿ ಅವರು, ಒಟ್ಟು ಮೃತರ ಪೈಕಿ ಶೇಕಡ 66ರಷ್ಟು ಮಂದಿ 18 ರಿಂದ 34ರ ವಯೋಮಾನದವರಾಗಿದ್ದಾರೆ. ರಸ್ತೆ ಅಪಘಾತಗಳಿಂದ ವಾರ್ಷಿಕ ದೇಶದ ಜಿಡಿಪಿಯ , ಶೇಕಡ 3 ರಷ್ಟು ನಷ್ಟವಾಗುತ್ತಿದೆ ಎಂದು ಹೇಳಿದರು. ರಫ್ತು ಹೆಚ್ಚಿಸಲು ಸಾರಿಗೆ ವೆಚ್ಚವನ್ನು ಕಡಿಮೆ ಮಾಡುವ ಅಗತ್ಯವಿದೆ. ಪ್ರಾಜೆಕ್ಟ್ ಅಭಯ್ನ ಪ್ರಾಯೋಗಿಕ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಶ್ಲಾಘನೀಯ. ದೇಶದಲ್ಲಿ ಪ್ರಸ್ತುತ 22 ಲಕ್ಷ ಚಾಲಕರ ಕೊರತೆ ಇದ್ದು, ಟ್ರಕ್ ಚಾಲಕರ ಸಂಖ್ಯೆಯನ್ನು ಹೆಚ್ಚಿಸುವ ತುರ್ತು ಅಗತ್ಯವಿದೆ ಎಂದರು. ಪ್ರಾಜೆಕ್ಟ್ ಅಭಯ್ , ದೇಶಾದ್ಯಂತ ಟ್ರಕ್ ಚಾಲಕರ ಜೀವನ ಸುಧಾರಿಸುವ ಉದ್ದೇಶ ಹೊಂದಿದ ಉಪಕ್ರಮವಾಗಿದೆ. ಕಳೆದ ವರ್ಷ, ಈ ಉಪಕ್ರಮದಡಿ ಆರು ರಾಜ್ಯಗಳು ಮತ್ತು 15 ನಗರಗಳಾದ್ಯಂತ 50 ಸಾವಿರ ಟ್ರಕ್ ಚಾಲಕರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎಂದು ಹೇಳಿದರು.
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…