ದೇಶದಲ್ಲಿ ಕಳೆದ ವರ್ಷ ಸುಮಾರು 5 ಲಕ್ಷ, ರಸ್ತೆ ಅಪಘಾತಗಳು ಮತ್ತು 1 ಲಕ್ಷದ 80 ಸಾವಿರ ಮಂದಿ ಅಪಘಾತಕ್ಕೆ ಬಲಿಯಾಗಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ಕೇಂದ್ರದ ‘ಪ್ರಾಜೆಕ್ಟ್ ಅಭಯ್’ನ ಸಮಾರೋಪ ಸಮಾರಂಭ ಉದ್ದೇಶಿಸಿ ಅವರು, ಒಟ್ಟು ಮೃತರ ಪೈಕಿ ಶೇಕಡ 66ರಷ್ಟು ಮಂದಿ 18 ರಿಂದ 34ರ ವಯೋಮಾನದವರಾಗಿದ್ದಾರೆ. ರಸ್ತೆ ಅಪಘಾತಗಳಿಂದ ವಾರ್ಷಿಕ ದೇಶದ ಜಿಡಿಪಿಯ , ಶೇಕಡ 3 ರಷ್ಟು ನಷ್ಟವಾಗುತ್ತಿದೆ ಎಂದು ಹೇಳಿದರು. ರಫ್ತು ಹೆಚ್ಚಿಸಲು ಸಾರಿಗೆ ವೆಚ್ಚವನ್ನು ಕಡಿಮೆ ಮಾಡುವ ಅಗತ್ಯವಿದೆ. ಪ್ರಾಜೆಕ್ಟ್ ಅಭಯ್ನ ಪ್ರಾಯೋಗಿಕ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವುದು ಶ್ಲಾಘನೀಯ. ದೇಶದಲ್ಲಿ ಪ್ರಸ್ತುತ 22 ಲಕ್ಷ ಚಾಲಕರ ಕೊರತೆ ಇದ್ದು, ಟ್ರಕ್ ಚಾಲಕರ ಸಂಖ್ಯೆಯನ್ನು ಹೆಚ್ಚಿಸುವ ತುರ್ತು ಅಗತ್ಯವಿದೆ ಎಂದರು. ಪ್ರಾಜೆಕ್ಟ್ ಅಭಯ್ , ದೇಶಾದ್ಯಂತ ಟ್ರಕ್ ಚಾಲಕರ ಜೀವನ ಸುಧಾರಿಸುವ ಉದ್ದೇಶ ಹೊಂದಿದ ಉಪಕ್ರಮವಾಗಿದೆ. ಕಳೆದ ವರ್ಷ, ಈ ಉಪಕ್ರಮದಡಿ ಆರು ರಾಜ್ಯಗಳು ಮತ್ತು 15 ನಗರಗಳಾದ್ಯಂತ 50 ಸಾವಿರ ಟ್ರಕ್ ಚಾಲಕರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎಂದು ಹೇಳಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…